ಪಶ್ಚಿಮ ಪದವೀಧರರ ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶೆಟ್ಟರ್

ಲಕ್ಷ್ಮೇಶ್ವರ: ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಅವರು ಲಕ್ಷ್ಮೇಶ್ವರ ಪಟ್ಟಣದ ಅಗಡಿ ಇಂಜಿನಿಯರಿಂಗ್ ಕಾಲೇಜನಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿ ಸರ್ಕಾರವು ದೇಶವನ್ನು ಕಟ್ಟುವ ಕೆಲಸ ಮಾಡುತ್ತಿದೆ. ದೇಶವನ್ನು ಮುನ್ನಡೆಸಲು ಬಿಜೆಪಿ ಪಕ್ಷವು ಬಿಟ್ಟು ಬೇರೆ ಯಾವ ಪಕ್ಷವು ಕೆಲಸಮಾಡಲಾರವು. ನರೇಂದ್ರ ಮೋದಿ ಸರ್ಕಾರವು ದೇಶದ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳ ತರುವಲ್ಲಿ ಯಶಸ್ವಿಯಾಗಿದೆ. ಎಲ್ಲಾ ಚುನಾವಣೆಯಲ್ಲಿ ನಾಡಿನ ಜನತೆ ನಮಗೆ ಆರ್ಶಿರ್ವಾದ ಮಾಡಿದ್ದಿರಿ. ವಿಧಾನ ಪರಿಷತ್ ಚುನಾವಣೆಯಲ್ಲಿ ಈ ಬಾರಿಯು ಸಂಕನೂರ ಗೆಲುವಿಗೆ ಸಹಕರಿಸುವಂತೆ ಮನವಿ ಮಾಡಿದರು.

ಎರಡನೇ ಬಾರಿ ಚುನಾವಣೆ ಗೆ ಸ್ಪರ್ದಿಸುತ್ತಿರುವ ಸಂಕನೂರ ಅವರು ಹಿಂದಿನ ಚುನಾವಣೆಯಲ್ಲಿ 16000 ಮತಗಳಿಂದ ಗೆದ್ದಿದ್ದರು. ಈ ಚುನಾವಣೆಯಲ್ಲಿ ಅದಕ್ಕಿಂತ ಹೆಚ್ಚಿನ ಮತದಿಂದ ಗೆಲ್ಲುವ ವಿಶ್ವಾಸವಿದೆ. ಬಿಜೆಪಿ‌ ಸರ್ಕಾರವು ದೇಶದ ಸೈನಿಕರಿಗೆ ಬಲತುಂಬುವ ಹಲವಾರು ಯೋಜನೆಗಳನ್ನು ರೂಪಿಸಿದೆ ಎಂದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಅವುಗಳನ್ನು ಟೀಕೆ ಮಾಡುತ್ತ ಜನರನ್ನು ದಿಕ್ಕುತಪ್ಪಿಸುವ ಕೆಲಸಮಾಡುತ್ತಿದೆ. ಎಪಿಎಂಸಿ ಕಾಯ್ದೆಯನ್ನು ಸ್ವೀಕರಿಸದ ವಿರೋಧ ಪಕ್ಷಗಳು ರೈತರನ್ನು ಅಧೋಗತಿಗೆ ತಳ್ಳುವ ಕೆಲಸ ಮಾಡುತ್ತಿವೆ. ಆದ್ದರಿಂದ ನಾಡಿನ ಜನತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮಾತಿಗೆ ಮರಳಾಗದೆ ಅವರನ್ನು ತಿರಸ್ಕರಿಸಿ ಬಿಜೆಪಿ ಸರ್ಕಾರವನ್ನು ಬೆಂಬಲಿಸಬೇಕು ಎಂದರು.

ಸಂದರ್ಭದಲ್ಲಿ ಶಾಸಕ ರಾಮಣ್ಣ ಲಮಾಣಿ, ಪ್ರದೀಪ್ ಶೆಟ್ಟರ್, ಅಭ್ಯರ್ಥಿ ಎಸ್.ವಿ.ಸಂಕನೂರ, ಮಾಂತೇಶ ಟೆಂಗಿನಕಾಯಿ, ನಿಂಗರಾಜ ಪಾಟೀಲ್, ವಿಜಯಕುಮಾರ್ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version