ನವದೆಹಲಿ : ಇಂದಿನಿಂದ ನವರಾತ್ರಿ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪ್ರಧಾನಿ ಮೋದಿ ಶುಭಾಶಯ ಕೋರಿದ್ದಾರೆ. ಎಲ್ಲರಿಗೂ ನವರಾತ್ರಿ ಹಬ್ಬದ ಶುಭಾಶಯಗಳು. ತಾಯಿ ಜಗದಾಂಬಾ, ನಿಮ್ಮೆಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ನೀಡಲಿ. ಜೈ ಮಾತಾ ಕೀ! ಎಂದು ಬರೆದುಕೊಂಡಿದ್ದಾರೆ. 

ಇನ್ನೊಂದು ಟ್ವೀಟ್ ಮಾಡಿರುವ ಅವರು, ನವರಾತ್ರಿಯ ಮೊದನ ದಿನ ನಾವು ಶೈಲ ಪುತ್ರಿಯನ್ನು ಆರಾಧನೆ ಮಾಡುತ್ತೇವೆ ಎಂದು ಹೇಳುವ ಮೂಲಕ ಶೈಲಪುತ್ರಿಗೆ ಸಂಬಂಧಿಸಿದ ಸ್ತುತಿಯನ್ನು ಶೇರ್ ಮಾಡಿದ್ದಾರೆ. 

ನವರಾತ್ರಿಯ ಮೊದಲ ದಿನ ಶೈಲಪುತ್ರಿಗೆ ಸಂಬಂಧಿಸಿದ್ದಾಗಿದ್ದು, ಮಾ ಶೈಲಪುತ್ರಿಗೆ ಪ್ರಣಾಮಗಳು. ತಾಯಿಯ ಆಶೀರ್ವಾದದಿಂದ, ನಮ್ಮ ಗ್ರಹವು ಸುರಕ್ಷಿತವಾಗಿ, ಆರೋಗ್ಯಕರವಾಗಿ ಮತ್ತು ಸಮೃದ್ಧವಾಗಿರಲಿ ಎಂದು ಬೇಡಿಕೊಂಡಿದ್ದಾರೆ.

ಬಡ ಮತ್ತು ದೀನ ದಲಿತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನು ತರಲು ನಮಗೆ ಶಕ್ತಿಯನ್ನು ನೀಡಲಿ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಒಂದು ಫೇರ್ & ಲವ್ಲಿ ಜಗಳ : ಗ್ಲೋ & ಹ್ಯಾಂಡ್ಸಮ್ Vs ಫೇರ್ & ಹ್ಯಾಂಡ್ಸಮ್

ಫೇಸ್ ಕ್ರೀಮ್ ಹೆಸರುಗಳಿಗಾಗಿ ಈಗ ಇಮಾಮಿ ಮ಻ತ್ತು ಹಿಂದೂಸ್ತಾನ್ ಯುನಿಲಿವರ್ ಕಂಪನಿಗಳು ಕೋರ್ಟಿನ ಅಂಗಳದಲ್ಲಿ ಕಾದಾಡುತ್ತಿವೆ.…

ಪ್ರಧಾನಿ ಮೋದಿ ವಿರುದ್ಧ ಟ್ವೀಟ್ : ಸೋನಿಯಾ ಗಾಂಧಿ ವಿರುದ್ಧ ಎಎಫ್.ಐ.ಆರ್..!

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟರ್ ನಲ್ಲಿ ಇಲ್ಲಸಲ್ಲದ ಅವಹೇಳನಕಾರಿ ಟ್ವೀಟ್ ಮಾಡಿರುವ ಆರೋಪ…

ಗೆಳೆಯನಿಗಾಗಿ ಗಂಡನ ಮರ್ಮಾಂಗಕ್ಕೆ ಆಸಿಡ್ ಎರಚಿದ ಪಾಪಿ!

ಲಕ್ನೋ : ಗೆಳೆಯನಿಗಾಗಿ ಪತ್ನಿಯೊಬ್ಬರು ಗಂಡನ ಮರ್ಮಾಂಗಕ್ಕೆ ಆಸಿಡ್ ಹಾಕಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೀರತ್ ನ ಟಿ.ಪಿ. ನಗರದಲ್ಲಿ ನಡೆದಿದೆ. ಪತ್ನಿಯ ದಾಳಿಯಿಂದ ಮನನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೋವಿಡ್ನಿಂದ ಪ್ರಾಣ ಕಳೆದುಕೊಂಡವರ ಅವಲಂಬಿತರಿಗೆ ಪಿಂಚಣಿ ಪ್ರಕಟ: ಕೇಂದ್ರ ಏನೆಲ್ಲ ಸೌಲಭ್ಯಗಳನ್ನು ಘೋಷಿಸಿದೆ?

ನವದೆಹಲಿ: ಕೋವಿಡ್-19 ಸಾಂಕ್ರಾಮಿಕದಿoದ ಪ್ರಾಣ ಕಳೆದುಕೊಂಡವರ ಅವಲಂಬಿತರಿಗೆ ಕುಟುಂಬವನ್ನು ಸಲುಹಲು ಸಂಪಾದನೆ ಮಾಡುತ್ತಿದ್ದ ಸದಸ್ಯನನ್ನು ಕಳೆದುಕೊಂಡ ಕುಟುಂಬಗಳಿಗೆ ಕೇಂದ್ರ ಸರ್ಕಾರ ಪ್ರಯೋಜನಗಳನ್ನು ಪ್ರಕಟಿಸಿದೆ.