ಮುಳಗುಂದ : ಪಟ್ಟಣ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿಯಿಂದ ಉಂಟಾಗಿ ಬೆಳೆ ಹಾನಿ ಜತೆಗೆ ನೂರಾರು ಎಕರೆ ಹೊಲಗಳ ಬದವು ಕೊಚ್ಚಿಕೊಂಡು ಹೋಗಿದ್ದ ಹೊಲಗಳಿಗೆ ಗದಗ ತಾಲೂಕ ಕೃಷಿ ಸಹಾಯಕ ಅಧಿಕಾರಿ ಮಲ್ಲಯ್ಯ ಕೊರವನವರ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬಸಾಪೂರ ವ್ಯಾಪ್ತಿಯ ಸರ್ವೇ ನಂ 114 ರೇವಣಪ್ಪ ಕುಲಕರ್ಣಿ ಅವರ ಜಮೀನಿನ ಬದವು ಮಳೆ ನೀರಿನ ಸೇಳೆತಕ್ಕೆ ಕೊಚ್ಚಿಕೊಂಡು ಹೋಗಿದೆ. ಪ್ರಮುಖ ವಾಣಿಜ್ಯ ಬೆಳೆಗಳಾದ ಶೇಂಗಾ, ಗೋವಿನ ಜೋಳ, ಹತ್ತಿ ಬೆಳಗಳು ಸಹ ಅಧಿಕ ತೇವಾಂಶದಿಂದ ಕೊಳೆ ರೋಗಕ್ಕೆ ತುತ್ತಾಗಿರುವದನ್ನ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ಮುಳಗುಂದ ಪಟ್ಟಣ ಪಂಚಾಯತಿ ವ್ಯಾಪ್ತಿಯ ಜಮೀನುಗಳಿಗೆ ಬದು ದುರಸ್ತಿಯನ್ನು ಮಾಡಿಸಲು ನರೇಗಾ ಯೋಜನೆ ಅಡಿ ಸಾಧ್ಯವಿಲ್ಲ. ಹೀಗಾಗಿ ಪ್ರಕೃತಿ ವಿಕೋಪ ಪರಿಹಾರದಡಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಬೆಳೆಹಾನಿಯಾದ ರೈತರು ಆತಂಕ ಪಡಬೇಕಾಗಿಲ್ಲ. ಗದಗ ತಾಲೂಕನ್ನೂ ಅತಿವೃಷ್ಟಿ ತಾಲೂಕ ಎಂದು ಸರ್ಕಾರ ಘೋಷಣೆ ಮಾಡಿದೆ. ಎನ್‌ಡಿಆರ್‌ಎಪ್ಮಾ

ರ್ಗಸೂಚಿಗಳನ್ವಯ ಈಗಾಗಲೇ ತಾಲೂಕಿನಲ್ಲಿ ಅದಾಜು 28540 ಹೆಕ್ಟೇರ್ ನಲ್ಲಿ ಬೆಳೆ ಹಾನಿಯಾಗಿರುವ ಬಗ್ಗೆ ಪ್ರಾಥಮಿಕ ವರದಿ ಮಾಡಲಾಗಿದೆ.

ಬೆಳೆವಿಮೆ ಮಾಡಿಸಿದ ರೈತರು ತಮ್ಮ ಬೆಳೆ ಹಾನಿಯಾಗಿರುವ ಬಗ್ಗೆ ಬೆಳೆ ವಿಮಾ ಸಂಸ್ಥೆಗೆ ಸ್ಥಳೀಯ ಅತಿವೃಷ್ಟಿ ಉಂಟಾಗಿರುವ ಕುರಿತು ಸೋಮವಾರದ ಒಳಗಾಗಿ ಅರ್ಜಿ ಸಲ್ಲಿಸಲು ಮಾಹಿತಿ ತಿಳಿಸಿದರು.

ಬೆಳೆ ಹಾನಿಯಾಗಿರುವ ಬಗ್ಗೆ ರೈತರಾದ ರೇವಣಪ್ಪ ಕುಲಕರ್ಣಿ, ಪಪಂ ಸದಸ್ಯ ಕೆ.ಎಲ್.ಕರಿಗೌಡ್ರ, ಬಗರಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಸ್ಥಳಿಯ ಸಹಾಯಕ ಕೃಷಿ ಅಧಿಕಾರಿ ಎಂ.ಬಿ.ಸುಂಕಾಪೂರ, ಗ್ರಾಮ‌ಲೆಕ್ಕಾಧಿಕಾರಿ ಎನ್.ಸಿ. ಕಂಪ್ಲಿಕೊಪ್ಪ ಇದ್ದರು.

Leave a Reply

Your email address will not be published. Required fields are marked *

You May Also Like

ಮಳೆಯ ಸಂಕಷ್ಟ – ಮಣ್ಣಲ್ಲಿ ಮಣ್ಣಾದ ಈರುಳ್ಳಿ…ಮಾರುಕಟ್ಟೆಯಲ್ಲಿ ಗಗನಕ್ಕೆ ಏರಿದ ದರ!

ಬೆಂಗಳೂರು : ವಿಪರೀತ ಮಳೆಯಿಂದಾಗಿ ರೈತರು ಬೆಳೆದ ಈರುಳ್ಳಿ ಹೊಲದಲ್ಲಿಯೇ ಕೊಳೆಯುತ್ತಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿಯ ಬೆಲೆ ಗಗನಕ್ಕೆ ಏರುತ್ತಿದೆ.

ನರೇಗಲ್, ಹೊಳೆಯಾಲೂರು ಹೋಬಳಿ: ರೈತರಿಂದ ತಾಡಪತ್ರಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಿಂದ ನರೇಗಲ್ ಹಾಗೂ ಹೊಳೆಆಲೂರ ಹೋಬಳಿಯ ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ಲಾಟರಿ ಮುಖಾಂತರ ತಾಡಪತ್ರಿಗಳನ್ನು ವಿತರಿಸಲು ಅರ್ಜಿ ಕರೆಯಲಾಗಿದೆ.

ಸಿರಿಧಾನ್ಯಗಳು ಸುಸ್ಥಿರ ಆರೋಗ್ಯ ಮತ್ತು ಸ್ವಸ್ಥ ಸಮಾಜದ ಐಸಿರಿಗಳು

ಸಿರಿಧಾನ್ಯಗಳು ಸುಸ್ಥಿರ ಆರೋಗ್ಯ ಮತ್ತು ಸ್ವಸ್ಥ ಸಮಾಜದ ಐಸಿರಿಗಳು. ಹಾದಿಯ ಹೊಲ ನೋಡ, ಸಿರಿಧಾನ್ಯಗಳ ಬೆಳೆ ನೋಡ,ಅಣ್ಣ ತಮ್ಮ, ಅಕ್ಕತಂಗ್ಯಾರ ನಗೆ ನೋಡ || ಹಡದವ್ವ ||ಆರೋಗ್ಯ, ಐಶ್ವರ್ಯ ನೋಡ ಮನೆಯೊಳಗ |

ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಮಾಡುವುದು ಹೇಗೆ.?

ಗದಗ: ಹೆಸರು ಹಾಗೂ ಗೋವಿನ ಜೋಳ ಬಿತ್ತನೆಯಾಗಿದ್ದು, ಈಗಾಗಲೇ ಹೆಸರು ಹೂವಾಡುವ ಹಂತ ಹಾಗೂ ಗೋವಿನ ಜೋಳ ಸುಮಾರು 30 ರಿಂದ 40 ದಿವಸದ ಬೆಳೆ ಇರುತ್ತವೆ. ಹೆಸರು ಬೆಳೆಯಲ್ಲಿ ವಿವಿದೆಡೆ ಹಳದಿ ರೋಗ ಮತ್ತು ಗೋವಿನ ಜೋಳದಲ್ಲಿ ಸೈನಿಕ ಹುಳುವಿನ ಬಾಧೇ ಹೆಚ್ಚಿದೆ. ಗದಗ ತಾಲೂಕಿನ ಉಪ ಕೃಷಿ ನಿರ್ದೇಶಕ ವೀರೇಶ ಹುನಗುಂದ ನೇತೃತ್ವದ ಕೃಷಿ ಇಲಾಖೆಯ ಅಧಿಕಾರಿಗಳ ತಂಡ ಅಡವಿ ಸೋಮಾಪೂರ ಗ್ರಾಮದ ರೈತರ ಜಮೀನುಗಳಿಗೆ ಭೇಟಿ ನೀಡಿತು. ಹೆಸರು ಬೆಳೆಯಲ್ಲಿ ಹಳದಿ ರೋಗ ಹಾಗೂ ಮೆಕ್ಕೆ ಜೋಳದಲ್ಲಿ ಸೈನಿಕ ಹುಳುವಿನ ನಿರ್ವಹಣೆ ಕುರಿತು ರೈತರಿಗೆ ಮಾಹಿತಿ ನೀಡಿದರು.