ನವದೆಹಲಿ : ವೈದ್ಯಕೀಯ ಪ್ರವೇಶ ಪರೀಕ್ಷೆ, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್‌ ನಲ್ಲಿ 720ಕ್ಕೆ 720 ಅಂಕಗಳನ್ನು ಗಳಿಸಿದ ಒಡಿಶಾದ ಸೋಯೆಬ್ ಅಫ್ತಾಬ್ ಅವರೊಂದಿಗೆ ದೆಹಲಿಯ ಆಕಾಂಕ್ಷ ಸಿಂಗ್ ಸಹ ಅಷ್ಟೇ ಅಂಕ ಗಳಿಸಿದ್ದರೂ ಟಾಪರ್ ಸ್ಥಾನದಿಂದ ಹಿಂದೆ ಸರಿದಿದ್ದಾರೆ.

ಒಂದೇ ಸಮನಾದ ಅಂಕ ಗಳಿಸಿದರೂ ಆಕಾಂಕ್ಷ ಅವರನ್ನು ಟಾಪರ್ ಆಗಿ ಮಾಡಿಲ್ಲ. ಕಾರಣ ಏನೆಂದರೆ ಅಫ್ತಾಬ್ ಗಿಂತ ಆಕಾಂಕ್ಷ ತುಂಬಾ ಚಿಕ್ಕವರು ಎನ್ನುವ ಕಾರಣಕ್ಕೆ. 

ಟೈ-ಬ್ರೇಕಿಂಗ್ ನೀತಿಯು ವಯಸ್ಸು, ವಿಷಯವಾರು ಅಂಕಗಳು ಮತ್ತು ತಪ್ಪಾದ ಉತ್ತರಗಳ ಸಂಖ್ಯೆಯಂತಹ ಅಂಶಗಳನ್ನು ಕೂಡ ಇದಕ್ಕೆ ಪರಿಗಣಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಡಿಶಾದ ಸೋಯೆಬ್ ಮತ್ತು ದೆಹಲಿಯ ಆಕಾಂಕ್ಷ ಇಬ್ಬರೂ ನೀಟ್ ಪರೀಕ್ಷೆಯಲ್ಲಿ 720 ಅಂಕಗಳನ್ನು ಗಳಿಸಿದ್ದಾರೆ. 

ಅಫ್ತಾಬ್ ವಯಸ್ಸಿನಲ್ಲಿ ದೊಡ್ಡವನಾಗಿದ್ದ ಕಾರಣ ಅವರು ರಾಷ್ಟ್ರೀಯ ಶ್ರೇಯಾಂಕದಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಜೀವಶಾಸ್ತ್ರ ಮತ್ತು ರಸಾಯನಶಾಸ್ತ್ರದಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಯ ಶ್ರೇಯಾಂಕವನ್ನು ಮೊದಲು ನಿರ್ಧರಿಸಲಾಗುತ್ತದೆ. ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ (ನೀಟ್) ಫಲಿತಾಂಶವನ್ನು ಶುಕ್ರವಾರ ರಾತ್ರಿ ಘೋಷಿಸಲಾಗಿದ್ದು, 7.7 ಲಕ್ಷ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ.

ತುಮ್ಮಲಾ ಸ್ನಿಕಿತಾ (ತೆಲಂಗಾಣ), ವಿನೀತ್ ಶರ್ಮಾ (ರಾಜಸ್ಥಾನ), ಅಮ್ರೀಶಾ ಖೈತಾನ್ (ಹರಿಯಾಣ) ಮತ್ತು ಗುತಿ ಚೈತನ್ಯ ಸಿಂಧು (ಆಂಧ್ರಪ್ರದೇಶ) 720 ಅಂಕಗಳಲ್ಲಿ 715 ಅಂಕಗಳನ್ನು ಪಡೆದು ಕ್ರಮವಾಗಿ ನಂತರದ ಸ್ಥಾನದಲ್ಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಇನ್ನು ಮುಂದೆ ವಾಟ್ಸಪ್ ಮೂಲಕವೂ ಹಣ ವರ್ಗಾಯಿಸಬಹುದು!

ನವದೆಹಲಿ : ದೇಶದಲ್ಲಿನ ವಾಟ್ಸಪ್ ಬಳಕೆದಾರರಿಗೆ ಆ ಸಂಸ್ಥೆ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ವಾಟ್ಸಪ್ ಬಳಕೆದಾರರು ಇದರ ಮೂಲಕ ಹಣ ವರ್ಗಾಯಿಸಬಹುದಾಗಿದೆ. ಇದಕ್ಕೆ ಈಗಾಗಲೇ ರಾಷ್ಟ್ರೀಯ ಪಾವತಿ ನಿಗಮ(ಎನ್ ಪಿಸಿಐ) ಅನುಮೋದನೆ ನೀಡಿದೆ.

ನಟ ಶ್ರೀವಾಸ್ತವ್ ಆತ್ಮಹತ್ಯೆಗೆ ಶರಣು

ನಟ ಧನುಷ್ ಜೊತೆ ಎನ್ನೈ ನೋಕಿ ಪಾಯಂ ಥೋಟ್ಟ ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಯುವ ನಟ ಶ್ರೀವಾಸ್ತವ್ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಡವಾಗಿ ಬೆಳಕಿಗೆ ಬಂದಿದೆ.

ಭಾರತ ಸೈನಿಕರ ಮೇಲೆ ನಿಗಾ: ಪಾಕ್ ಕುತಂತ್ರ ಬುದ್ದಿ

ಭಾರತದ ಸೈನಿಕರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಪಾಕ್ ಕುತಂತ್ರ ಬುದ್ಧಿ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.

ಫೆಬ್ರವರಿಯಲ್ಲಿ ಬ್ಯಾಂಕುಗಳ ಸೇವೆಯಲ್ಲಿ ವ್ಯತ್ಯಯ

ಮೊದಲೆಲ್ಲ ಬ್ಯಾಂಕ್ಗಳಿಗೆ ರಜೆ ಅಂದರೆ ತಲೆ ಕೆಟ್ಟು ಹೋಗ್ತಿತ್ತು. ಆದರೆ ಈಗ ಹಾಗಲ್ಲ ನೆಟ್ ಬ್ಯಾಂಕಿAಗ್ ಮೂಲಕ ಅವಶ್ಯಕ ವ್ಯವಹಾರಗಳನ್ನ ನಾವೇ ನಡೆಸಬಹುದಾಗಿದೆ. ಹಾಗಂತ ನಾವು ಬ್ಯಾಂಕ್ಗಳನ್ನೂ ನಿರ್ಲಕ್ಷ್ಯ ಮಾಡುವಂತೆಯೂ ಇಲ್ಲ. ಲಾಕರ್ ವ್ಯವಸ್ಥೆ, ಸಾಲದ ಬಗ್ಗೆ ಮಾಹಿತಿ ಹೀಗೆ ಮುಖ್ಯ ಕೆಲಸ ಆಗಬೇಕು ಅಂದರೆ ನಾವು ಬ್ಯಾಂಕ್ಗೆ ತೆರಳಲೇಬೇಕು.