ಮೈಸೂರು : ಭಾರಿ ಮಳೆಯಿಂದಾಗಿ ರಾಜ್ಯದಲ್ಲಿ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದೆ. ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ ರೂ. 9,952 ಕೋಟಿಯಷ್ಟು ನಷ್ಟವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. 

ಅಲ್ಲದೇ, ರೂ. 4,851 ಕೋಟಿಯಷ್ಟು ಮೂಲ ಸೌಲಭ್ಯಕ್ಕೆ ಹಾನಿಯಾಗಿದೆ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಸಾಕಷ್ಟು ಅನುದಾನ ಲಭ್ಯವಿದ್ದು, ಜನರಿಂದ ದೂರು ಬಾರದಂತೆ ಪರಿಹಾರ ಕಲ್ಪಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಪ್ರವಾಹ ಪೀಡಿತ ಗ್ರಾಮಗಳನ್ನೇ ಸ್ಥಳಾಂತರಿಸಲಾಗಿದೆ. ರಾಜ್ಯದ 51,810 ರೈತರಿಗೆ ಬೆಳೆ ಪರಿಹಾರವಾಗಿ ರೂ.36.57 ಕೋಟಿ ಮೊತ್ತವನ್ನು ಜಮೆ ಮಾಡಲಾಗಿದೆ ಎಂದು ಹೇಳಿದ್ದಾರೆ.  

ಪ್ರವಾಹದಿಂದಾಗಿ 10.07 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಹಾನಿಯಾಗಿವೆ. ಇದರಿಂದಾಗಿ ರೂ.9,952 ಕೋಟಿ ನಷ್ಟ ಎದುರಾಗಿದೆ. ಉತ್ತರ ಕರ್ನಾಟಕದಲ್ಲಿನ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರಕ್ಕೆ ಸೂಚಿಸಲಾಗಿದೆ. ಸರ್ಕಾರ ಯಾವುದೇ ಸಂದರ್ಭದಲ್ಲಿಯೂ ಪ್ರವಾಹ ಪರಿಸ್ಥಿತಿಯನ್ನು ನಿರ್ಲಕ್ಷಿಸದೆ ಸ್ಪಂದಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಗದಗನಲ್ಲಿ ಗುಣಮುಖನಾಗಿ ಮನೆಗೆ ಮರಳಿದ ಸೋಂಕಿತ

ಗದಗ:ಕೊರೋನಾ ಸೋಂಕಿತ 62 ವರ್ಷದ ವ್ಯಕ್ತಿ ಇಂದು ಗುಣಮುಖರಾಗಿ ಮನೆಗೆ ಮರಳಿದ್ದಾರೆ. ನಗರದ ಜಿಮ್ಸ್ ಆಸ್ಪತ್ರೆಯಿಂದ…

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.

ಕಾಲುವೆಗೆ ಉರುಳಿ ಬಿದ್ದ ಕಾರು: ಇಬ್ಬರು ಸ್ಥಳದಲ್ಲೆ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ನಡೆದಿದೆ.

ಪರಿಹಾರ ಸಿಗಬಹುದೇ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ.!

ಸಮಸ್ಯೆಗಳ ಸಾಗರವನ್ನೆ ಹೊತ್ತುಕೊಂಡು ನಿಂತ ರಣತೂರು ಗ್ರಾಮಕ್ಕೆ ಜಿಲ್ಲಾಡಳಿತದ ಗ್ರಾಮ ವಾಸ್ತವ್ಯದಿಂದ ಸಮಸ್ಯೆಗಳ ನಿವಾರಣೆಯಾಗಬಹುದೇ ಎಂಬ ತವಕ ಗ್ರಾಮಸ್ಥರಲ್ಲಿ ಮನೆ ಮಾಡಿದೆ.