ವಿಜಯಪುರ : ಜಿಲ್ಲೆಯ ಇಂಡಿ ಹಾಗೂ ಸಿಂದಗಿ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 400ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಾಗೂ ಆಣೆಕಟ್ಟಿಯಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದಾಗಿ ಭೀಮಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. 

ಈ ಹಿನ್ನೆಲೆಯಲ್ಲಿ ಸೊನ್ನಾ ಬ್ಯಾರೇಜ್ ನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಅಪಾಯ ಸಂಭವಿಸಬಹುದು ಎಂಬ ಕಾರಣದಿಂದ ಎನ್ ಡಿಆರ್ ಎಫ್ ನೆರವು ಪಡೆಯಲಾಗಿತ್ತು. ಆದರೆ, ಈ ಪಡೆ ಜನರ ಪ್ರಾಣ ರಕ್ಷಿಸಲು ಸಾಕಷ್ಟು ಶ್ರಮ ವಹಿಸುತ್ತಿದೆ.

ಪ್ರವಾಹದಿಂದಾಗಿ ಸಿಂಧಗಿ ತಾಲೂಕಿನಲ್ಲಿ 10, ಇಂಡಿಯಲ್ಲಿ 5 ಹಾಗೂ ಚಡಣಚ ತಾಲೂಕಿನ 3 ಹಳ್ಳಿಗಳು ಸಂಕಷ್ಟದಲ್ಲಿದ್ದವು. ಎನ್ ಡಿಆರ್ ಎಫ್ ಪಡೆಗಳು ಧಾವಿಸಿ, ಜನರನ್ನು ಸ್ಥಳಾಂತರ ಮಾಡಿದೆ. ಈ ಪಡೆ ಜಿಲ್ಲೆಯ 401 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಈಗಾಗಲೇ 1,861 ಜನರಿಗೆ ಪರಿಹಾರ ಕೇಂದ್ರಗಳಲ್ಲಿ ವಸತಿ ಕಲ್ಪಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.  

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7571 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 264546 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಇಂದು 6561 ಪ್ರಕರಣಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿವೆ.

ಕಲಾವಿದರಿಗೆ ಆರ್ಥಿಕ ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೋನಾ ವೈರಸ್‌ನ ಎರಡನೇ ಅಲೆಯ ತೀವ್ರತೆಯನ್ನು ನಿಯಂತ್ರಿಸಲು ರಾಜ್ಯದ ಎಲ್ಲ ರೀತಿಯ ಚಟುವಟಿಕೆಗಳನ್ನು ನಿರ್ಭಂದಿಸಿ ಲಾಕಡೌನ್ ಘೋಷಿಸಲಾಗಿದ್ದು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು ಮತ್ತು ಕಲಾತಂಡಗಳ ಪ್ರತಿ ಫಲಾನುಭವಿಗಳಿಗೆ ತಲಾ 3,000 ರೂ.ಗಳಂತೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.

ಹಾಲಕೆರೆ ಅಭಿನವ ಅನ್ನದಾನ ಶ್ರೀ ಗಳು ಲಿಂಗೈಕ್ಯ

ಲಿಂಗೈಕ್ಯ ಶ್ರೀ ಗಳ ಅಗಲಿಕೆ ರೋಣ ಕ್ಷೇತ್ರದ ಶಾಸಕ ಕಳಕಪ್ಪ ಜಿ,ಬಂಡಿ ಹಾಗೂ ಮಾಜಿ ಶಾಸಕ ಜಿ,ಎಸ್,ಪಾಟೀಲ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋದಿ ಧೋರಣೆ ಅನುಸರಿಸುತ್ತಿವೆ: ಸುಂಕದ

ಉತ್ತರಪ್ರಭ ಸುದ್ದಿ ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ…