ವಿಜಯಪುರ : ಜಿಲ್ಲೆಯ ಇಂಡಿ ಹಾಗೂ ಸಿಂದಗಿ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, 400ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಾಗೂ ಆಣೆಕಟ್ಟಿಯಿಂದ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡುತ್ತಿರುವುದರಿಂದಾಗಿ ಭೀಮಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. 

ಈ ಹಿನ್ನೆಲೆಯಲ್ಲಿ ಸೊನ್ನಾ ಬ್ಯಾರೇಜ್ ನ ಒಳಹರಿವು ಹೆಚ್ಚಾಗಿದೆ. ಹೀಗಾಗಿ ಅಪಾಯ ಸಂಭವಿಸಬಹುದು ಎಂಬ ಕಾರಣದಿಂದ ಎನ್ ಡಿಆರ್ ಎಫ್ ನೆರವು ಪಡೆಯಲಾಗಿತ್ತು. ಆದರೆ, ಈ ಪಡೆ ಜನರ ಪ್ರಾಣ ರಕ್ಷಿಸಲು ಸಾಕಷ್ಟು ಶ್ರಮ ವಹಿಸುತ್ತಿದೆ.

ಪ್ರವಾಹದಿಂದಾಗಿ ಸಿಂಧಗಿ ತಾಲೂಕಿನಲ್ಲಿ 10, ಇಂಡಿಯಲ್ಲಿ 5 ಹಾಗೂ ಚಡಣಚ ತಾಲೂಕಿನ 3 ಹಳ್ಳಿಗಳು ಸಂಕಷ್ಟದಲ್ಲಿದ್ದವು. ಎನ್ ಡಿಆರ್ ಎಫ್ ಪಡೆಗಳು ಧಾವಿಸಿ, ಜನರನ್ನು ಸ್ಥಳಾಂತರ ಮಾಡಿದೆ. ಈ ಪಡೆ ಜಿಲ್ಲೆಯ 401 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ಈಗಾಗಲೇ 1,861 ಜನರಿಗೆ ಪರಿಹಾರ ಕೇಂದ್ರಗಳಲ್ಲಿ ವಸತಿ ಕಲ್ಪಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.  

Leave a Reply

Your email address will not be published. Required fields are marked *

You May Also Like

ಶಾಲೆಗಳು ಪ್ರಾರಂಭವಾಗಲು ಕೂಡಿ ಬಂದಿದೆಯೇ ಮುಹೂರ್ತ!?

ಬೆಂಗಳೂರು : ಕೊರೊನಾ ಹಾವಳಿಯಿಂದಾಗಿ ರಾಜ್ಯದಲ್ಲಿ ಶಾಲೆಗಳು ಮುಚ್ಚಿವೆ. ಆದರೆ, ಸದ್ಯ ಕೊರೊನಾ ತಗ್ಗುತ್ತಿದ್ದು, ಶಾಲೆಗಳನ್ನು ತೆರೆಯುವ ಕುರಿತು ಚಿಂತನೆ ನಡೆಯುತ್ತಿದೆ.

ಆರು ತಿಂಗಳ ನ್ಯಾಯ ನೀಡಿ ಮೋದಿಜೀ ಎಂದ ಸಿದ್ದು

20 ಲಕ್ಷ ಕೋಟಿ ಮೊತ್ತದಲ್ಲಿ ಇರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ಸೊನ್ನೆ ಸಿಗಲಿದೆ ಎನ್ನುವುದು ಪ್ರಶ್ನೆಯಾಗಿದೆ ಎಂದು ಪ್ವಾರದಾನಿ ನರೇಂದ್ಗಿರ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿ ಟ್ವೀಟ್ ಮಾಡಿದ್ದಾರೆ.

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಆಗ್ರಹ: ದಲಿತ ಪರ ನಾನಾ ಸಂಘಟನೆಗಳಿಂದ ನಿಡಗುಂದಿಯಲ್ಲಿ ಭಾರೀ ಪ್ರತಿಭಟನೆ

ನಿಡಗುಂದಿ: ಸಂವಿಧಾನ ಕರ್ತೃ ಡಾ ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿ ಅಪಮಾನ ಮಾಡಿರುವ ರಾಯಚೂರ ಜಿಲ್ಲಾ…

Все возможности мобильного беттинга через MostBet mobile

Все возможности мобильного беттинга через MostBet mobile Где получить промокод на Мостбет…