ಕಲಬುರಗಿ : ಮಳೆ ಹಾಗೂ ಪ್ರವಾಹದಿಂದಾಗಿ ಜಿಲ್ಲೆಯ ಜನರ ಬದುಕು ಮೂರಾಬಟ್ಟೆಯಾಗಿದೆ. ಈ ನಿಟ್ಟಿನಲ್ಲಿ ರಕ್ಷಣಾ ಕಾರ್ಯಕ್ಕೆ ಸೇನೆ ನಿಯೋಜನೆ ಮಾಡಲಾಗಿದೆ.

ಸಿಕಂದ್ರಾಬಾದ್‌ ನಿಂದ 98 ಯೋಧರ ಪಡೆ ಬಂದಿದ್ದು, ಮೇಜರ್ ಮಾರ್ಟಿನ್ ಅರವಿಂದ್ ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಲಿದೆ. ಯೋಧರನ್ನು ಮೂರು ತಂಡಗಳಾಗಿ ವಿಭಾಗಿಸಿ ಅಫಜಲಪುರ್, ಜೇವರ್ಗಿ ಹಾಗೂ ಶಹಾಬಾದ್ ತಾಲೂಕಿನಲ್ಲಿ ಜನರ ರಕ್ಷಣೆಗೆ ನಿಯೋಜಿಸಲಾಗಿದೆ. 

ಭೀಮಾನ ನದಿಯ ರೌದ್ರಾವತಾರ ಇನ್ನೂ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಉಡಚಣ ಗ್ರಾಮ ನೀರಿನಲ್ಲಿ ಮುಳುಗಡೆಯಾಗಿತ್ತು. ಹೀಗಾಗಿ ಗ್ರಾಮದ 225 ಜನರನ್ನು ರಕ್ಷಣೆ ಮಾಡಲಾಗಿದೆ. 

ಭೀಮಾ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಭೀಮಾ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮಹಾರಾಷ್ಟ್ರದ ಉಜನಿ ಮತ್ತು ವೀರ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಭೀಮಾ ನದಿಗೆ ಬಿಡಲಾಗಿದೆ. ಇದರಿಂದಾಗಿ ಕಲಬುರಗಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರವಾಹ ಉಂಟಾಗಿ ಜನ – ಜಾನುವಾರುಗಳ ಬದುಕು ಬೀದಿಗೆ ಬರುವಂತಾಗಿದೆ. 

Leave a Reply

Your email address will not be published. Required fields are marked *

You May Also Like

ಮಾ.11 ರಿಂದ ದ್ವಾದಶ ಜ್ಯೋತಿರ್ಲಿಂಗ ದರ್ಶನ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಸಹಯೋಗದಲ್ಲಿ ಮಾ.11 ರಿಂದ 13ರ ವರೆಗೆ ಸಂಜೆ 4 ರಿಂದ ರಾತ್ರಿ 10ರ ವರೆಗೆ ನಗರದ ಮುನ್ಸಿಪಲ್ ಪದವಿ ಪೂರ್ವ ಕಾಲೇಜ ಮೈದಾನದಲ್ಲಿ ದಿನಗಳಲ್ಲಿ ವಿಶ್ವದಲ್ಲಿ ಅವತರಿಸಿದ ವಿಶ್ವೇಶ್ವರನ ದರ್ಶನ, ಸಹಸ್ರಲಿಂಗ ದರ್ಶನ ಮತ್ತು ದ್ವಾದಶ ಜ್ಯೋತಿರ್ಲಿಂಗ ದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬ್ರಹ್ಮಕುಮಾರಿ ಬಿ.ಕೆ.ಜಯಂತಿಅಕ್ಕ ಹೇಳಿದರು.

ನಕಲಿ ಜಾತಿ ಪ್ರಮಾಣ ಪತ್ರ ಆರೋಪ: ಪಟ್ಟಣ ಪಂಚಾಯ್ತಿ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮನವಿ

ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.

ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ

ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.

ಲಾಕ್ ಡೌನ್ : ಬೆಂಗಳೂರಿನಲ್ಲಿ ಹೆಚ್ಚುವರಿ ಬಸ್ ಗಳ ವಿವರ

ಬೆಂಗಳೂರು: ಒಂದು ವಾರಗಳ ಕಾಲ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಿಗೆ ವಿಧಿಸಿರುವ ಲಾಕ್ ಡೌನ್…