ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 61,871 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಒಂದೇ ದಿನ ದೇಶದಲ್ಲಿ 1,033 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ 1,14,031 ಸೋಂಕಿತರು ಬಲಿಯಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. 

ದೇಶದಲ್ಲಿ 24 ಗಂಟೆಗಳಲ್ಲಿ 9,70,173 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಮೂಲಕ ದೇಶದಲ್ಲಿ 9,42,24,190 ಕೊರೊನಾ ಪರೀಕ್ಷೆಗಳನ್ನು ಇಲ್ಲಿಯವರೆಗೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.

ದೇಶದಲ್ಲಿನ ಒಟ್ಟು 74,94,552 ಸೋಂಕಿತರ ಪೈಕಿ, ಇಲ್ಲಿಯವರೆಗೆ 65,97,210 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಅಲ್ಲದೆ, ಇನ್ನೂ 7,83,311 ಸಕ್ರಿಯ ಪ್ರಕರಣಗಳಿದ್ದು, ಅವರು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಂದು ವಿಶ್ವ ಕಪ್ ತಂದು ಕೊಟ್ಟ ತಂಡದಲ್ಲಿ ಕ್ರಿಕೆಟಿಗ ಯಶ್ ಪಾಲ್ ಇನ್ನಿಲ್ಲ!

ನವದೆಹಲಿ: 1983 ರಲ್ಲಿ ಭಾರತ ತಂಡ ವಿಶ್ವ ಕಪ್ ತನ್ನ ಮುಡಿಗೇರಿಸಿಕೊಂಡಿತ್ತು. ಇದು ಭಾರತದ ಕ್ರೀಕೆಟ್ ಇತಿಹಾಸದಲ್ಲಿ ಮಹತ್ವದ ವರ್ಷವಾಗಿತ್ತು. ಕ್ರೀಕೆಟ್ ಇತಿಹಾಸದಲ್ಲಿ ಭಾರತಕ್ಕೊಂದು ಮೈಲುಗಲ್ಲಾದ 1983 ರ ವಿಶ್ವಕಪ್ ಪಡೆದ ತಂಡದ ಸದಸ್ಯರೊಬ್ಬರು ನಿಧನ ಹೊಂದಿದ್ದಾರೆ. ಹೌದು, ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.

16ನೇ ವಯಸ್ಸಿಗೆ ಟಿಕ್ ಟಾಕ್ ಸ್ಟಾರ್ ಈ ನಿರ್ಧಾರ ಕೈಗೊಂಡಿದ್ದೇಕೆ?

ನವದೆಹಲಿ : ಟಿಕ್ಟಾಲಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹಲವು ಅನುಮಾನಗಳಿಗೆ ದಾರಿ…

ಕೊರೊನಾ ನಂತರ 16 ಸಾಂಕ್ರಾಮಿಕ ಕಾಯಿಲೆ ಭಯ..!

ಈಗಾಗಲೇ ಕೊರೊನಾದಿಂದಾಗಿ ಇಡೀ ಜಗತ್ತೆ ತಲ್ಲಣಗೊಂಡಿತ್ತು. ಇನ್ನೇನು ಕೊರೊನಾ ನಿಯಂತ್ರಣಕ್ಕೆ ಬಂ ತು ಎನ್ನುವಷ್ಟರಲ್ಲಿ ಈಗ ಮತ್ತೆ ಕೊರೊನಾ ಎರಡನೇ ಅಲೆ ಆರಂಭವಾಗಿ ಜನರನ್ನು ಆತಂಕಕ್ಕೀಡು ಮಾಡಿದೆ. ಈ ಆತಂಕದ ಮದ್ಯೆ ಕರೋನಾ ವೈರಸ್ ನಂತರ 16 ಕಾಯಿಲೆಗಳು ವರದಿಯಾಗಿವೆ.

ಕೊರೊನಾ ನಿಯಂತ್ರಣದಲ್ಲಿ ಸರ್ಕಾರ ವಿಫಲ: ರಾಹುಲ್ ಟ್ವೀಟ್!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕೊರೊನಾ ನಿಯಂತ್ರಿಸುವಲ್ಲಿ ಯಡವಿದೆ ಎಂದು…