ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿನ ನಾಲ್ಕು ವಿಧಾನಪರಿಷತ್ ಕ್ಷೇತ್ರಗಳಿಗೆ ಸೆ. 28ರಂದು ಚುನಾವಣೆ ನಡೆಯಲಿದೆ. ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಎಲ್ಲ ಕ್ಷೇತ್ರಗಳಿಂದ ಒಟ್ಟು 30 ಜನ ಕಣದಲ್ಲಿ ಉಳಿದಿದ್ದಾರೆ. 

ಈ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುತ್ತದೆ. ಆದರೆ, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗೆ ಇದ್ದ ನೋಟಾ ಆಯ್ಕೆಯನ್ನು ಹಿಂಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. 

ಬಿಜೆಪಿಗೆ ಕೆಲವು ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಾಗಿದೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಚಿದಾನಂದ ಎಂ. ಪಕ್ಷದ ಅಧಿಕೃತ ಅಭ್ಯರ್ಥಿ. ಆದರೆ, ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ. ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಬಿಜೆಪಿ ಮುಖಂಡ ಎಚ್.ಎಸ್. ಲೇಪಾಕ್ಷ್ ಕೂಡ ಸ್ಪರ್ಧೆ ಮಾಡಿದ್ದಾರೆ. ಹೇಗಾದರೂ ಮಾಡಿ ನಾಲ್ಕೂ ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ತಂತ್ರ ಹೆಣೆದಿದ್ದರೆ, ಬಿಜೆಪಿಗೆ ಮುಖಭಂಗ ಸೃಷ್ಟಿಸಲು ವಿರೋಧ ಪಕ್ಷಗಳು ರಣ ತಂತ್ರ ಹೆಣೆದಿವೆ. ನ. 2ಕ್ಕೆ ಎಲ್ಲರ ಹಣೆಬರಹ ತಿಳಿಯಲಿದೆ.

Leave a Reply

Your email address will not be published. Required fields are marked *

You May Also Like

2ನೆ ವಾರ್ಡ ಕಾಂಗ್ರೆಸ್ ಮತ್ತು 14 ನೆ ವಾರ್ಡ ಜೆಪಿಗೆ ಜಯ

ಗದಗ : ನಗರಸಭೆ ಚುನಾವಣೆ 2ನೆ ವಾರ್ಡ ಕಾಂಗ್ರೆಸ್ ಮತ್ತು 14 ನೆ ವಾರ್ಡ ಬಿ…

ಪ್ರಾಣಿ ಪ್ರೇಮ ತೋರಿದ ಡಿಬಾಸ್

ಡಿಬಾಸ್ ದರ್ಶನ್ ಇದೀಗ ಪ್ರಾಣಿ ಪ್ರೇಮ ಮೆರೆಯುವ ಮೂಲಕ ಸುದ್ದಿಯಾಗಿದ್ದಾರೆ. ಎತ್ತೊಂದರ ಚಿಕಿತ್ಸೆಗೆ ನೆರವಾಗುವ ಮೂಲಕ ತಮ್ಮಲ್ಲಿರುವ ಪ್ರಾಣಿಗಳ ಬಗೆಗಿರುವ ಕಾಳಜಿಯನ್ನು ತೋರಿಸಿದ್ದಾರೆ.

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 308 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5760 ಕ್ಕೆ ಏರಿಕೆಯಾದಂತಾಗಿದೆ.

ಕೋವಿಡ್ ನಿಂದ ಮೃತ ಪಟ್ಟ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ಪರಿಹಾರ

ಲಖನೌ: ಕೋವಿಡ್-19 ವೇಳೆ ಕರ್ತವ್ಯ ನಿಷ್ಠೆ ಮೆರೆದು ಪ್ರಾಣ ಕಳೆದುಕೊಂಡ ಪತ್ರಕರ್ತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.