ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ರಾಜ್ಯದಲ್ಲಿನ ನಾಲ್ಕು ವಿಧಾನಪರಿಷತ್ ಕ್ಷೇತ್ರಗಳಿಗೆ ಸೆ. 28ರಂದು ಚುನಾವಣೆ ನಡೆಯಲಿದೆ. ಆಗ್ನೇಯ ಪದವೀಧರ ಕ್ಷೇತ್ರ, ಪಶ್ಚಿಮ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ಎಲ್ಲ ಕ್ಷೇತ್ರಗಳಿಂದ ಒಟ್ಟು 30 ಜನ ಕಣದಲ್ಲಿ ಉಳಿದಿದ್ದಾರೆ. 

ಈ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುವುದಿಲ್ಲ. ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ನೋಟಾ ಆಯ್ಕೆ ಇರುತ್ತದೆ. ಆದರೆ, ವಿಧಾನಪರಿಷತ್ ಹಾಗೂ ರಾಜ್ಯಸಭೆ ಚುನಾವಣೆಗೆ ಇದ್ದ ನೋಟಾ ಆಯ್ಕೆಯನ್ನು ಹಿಂಪಡೆಯಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ. 

ಬಿಜೆಪಿಗೆ ಕೆಲವು ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಾಗಿದೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಚಿದಾನಂದ ಎಂ. ಪಕ್ಷದ ಅಧಿಕೃತ ಅಭ್ಯರ್ಥಿ. ಆದರೆ, ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ. ಶ್ರೀನಿವಾಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ. ಬಿಜೆಪಿ ಮುಖಂಡ ಎಚ್.ಎಸ್. ಲೇಪಾಕ್ಷ್ ಕೂಡ ಸ್ಪರ್ಧೆ ಮಾಡಿದ್ದಾರೆ. ಹೇಗಾದರೂ ಮಾಡಿ ನಾಲ್ಕೂ ಕ್ಷೇತ್ರಗಳನ್ನು ಗೆಲ್ಲಲು ಬಿಜೆಪಿ ತಂತ್ರ ಹೆಣೆದಿದ್ದರೆ, ಬಿಜೆಪಿಗೆ ಮುಖಭಂಗ ಸೃಷ್ಟಿಸಲು ವಿರೋಧ ಪಕ್ಷಗಳು ರಣ ತಂತ್ರ ಹೆಣೆದಿವೆ. ನ. 2ಕ್ಕೆ ಎಲ್ಲರ ಹಣೆಬರಹ ತಿಳಿಯಲಿದೆ.

Leave a Reply

Your email address will not be published. Required fields are marked *

You May Also Like

ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆ ಭೂ ಕಂಪನ ಅನುಭವ

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ  ಹಲವೆಡೆ ಭೂಮಿ ಕಂಪಿಸಿದ ಅನುಭವ .ರಾಮನಗರ  ಸೇರಿದಂತೆ ಮಂಡ್ಯದಲ್ಲಿಯೂ…

ದಿಶಾ ರವಿ ಪರ ಧ್ವನಿಯೆತ್ತುವ ಅಗತ್ಯವಿದೆ

ಟೂಲ್‌ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಶಾ ರವಿ ಬಂಧನವನ್ನು ಸಾಮಾಜಿಕ ಜಾಲತಾಣದ ಮೂಲಕ ನಟಿ ರಮ್ಯಾ ವಿರೋಧಿಸಿದ್ದಾರೆ. 21 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಜೈಲಿನಲ್ಲಿದ್ದಾರೆ. ಇದಕ್ಕೆ ನಾವೆಲ್ಲರು ಸಾಮೂಹಿಕವಾಗಿ ಜವಾಬ್ದಾರರಾಗುತ್ತೇವೆ. ಬಹಳ ದಿನಗಳಿಂದ ಇಂತಹ ಅನ್ಯಾಯವನ್ನು ಮೂಕ ಪ್ರೇಕ್ಷಕರಾಗಿ ನೋಡುತ್ತಿದ್ದೇ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕೈ ಕಮಲದ ನಡುವೆ ಟ್ವೀಟ್ ಸಮರ

ಬ್ರಷ್ಟಾಚಾರದ ವಿಷಯವೀಗ ಕೈ-ಕಮಲದ ಟ್ವೀಟ್ ಸಮರಕ್ಕೆ ಕಾರಣವಾಗಿದೆ. ಡಿಕೆಶಿ ವಿಚಾರವಾಗಿ ಬಿಜೆಪಿ ಟ್ವೀಟ್ ಮಾಡಿದರೆ, ಸಿಎಂ ಬಿಎಸ್ವೈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ.

ರಾಜ್ಯಸಭೆಯತ್ತ ಎಚ್.ವಿಶ್ವನಾಥ್ ಚಿತ್ತ..?

ಇತ್ತಿಚಿನ ಬೆಳವಣಿಗೆಯನ್ನು ನೋಡಿದರೆ ವಿಶ್ವನಾಥ್ ಚಿತ್ತ ರಾಜ್ಯಸಭೆಯತ್ತ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಎಲ್ಲ ಕಾರಣಗಳಿಂದ ಶಿಘ್ರದಲ್ಲಿ ಬರಲಿರುವ ರಾಜ್ಯಸಭೆ ಚುನಾವಣೆಗೆ ಇನ್ನಷ್ಟು ಮಹತ್ವ ಬಂದಿದೆ