ಹೈದ್ರಾಬಾದ್ : ಹೈದ್ರಾಬಾದ್ ನಲ್ಲಿ ಮತ್ತೆ ಮಳೆರಾಯ ತನ್ನ ರೌದ್ರನರ್ತನ ಪ್ರಾರಂಭಿಸಿದ್ದು, ಮತ್ತೆ ಇಬ್ಬರನ್ನು ಬಲಿ ಪಡೆದಿದ್ದಾನೆ. ಈ ಮೂಲಕ ಮಹಾಮಳೆಗೆ 50 ಜನ ಬಲಿಯಾದಂತಾಗಿದೆ.

ನಗರದ ಮಲಕ್ ಪೇಟ್ ನಲ್ಲಿ 50 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದರೆ, ಆರ್.ಕೆ. ಪಿಇಟಿ ಪ್ರದೇಶದಲ್ಲಿ ಗೋಡೆ ಕುಸಿದ ಪರಿಣಾಮ 5 ವರ್ಷದ ಮಗು ಪ್ರಾಣ ಬಿಟ್ಟಿದೆ. ಇಲ್ಲಿಯವರೆಗೂ ಮಳೆಯ ಅವಂತಾರಕ್ಕೆ ಸುಮಾರು 50 ಜನ ಪ್ರಾಣ ಬಿಟ್ಟಂತಾಗಿದೆ. ಭಾರಿ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳಲ್ಲಿ ನೀರು ಸಂಪೂರ್ಣವಾಗಿ ನಿಂತಿದೆ. ಹೀಗಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ.


ಡಿಆರ್ ಎಫ್ ತಂಡಗಳು ನಿರಂತರವಾಗಿ ನೀರು ತೆರವುಗೊಳಿಸುವ ಕಾರ್ಯಾಚರಣೆ ನಡೆಸುತ್ತಿವೆ. ಬಾಲಾಪುರ್ ಕೆರೆಯ ಕಟ್ಟೆ ಒಡೆದಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಬಂದೋದಗಿದೆ. ಸದ್ಯ ಮಳೆಯಿಂದಾಗಿ ಉಂಟಾದ ಹಾನಿಯ ಕುರಿತು ಸರ್ಕಾರ ಲೆಕ್ಕ ಹಾಕುತ್ತಿದ್ದು, ಇಲ್ಲಿಯವರೆಗೂ ರೂ. 50 ಸಾವಿರ ಕೋಟಿಯಷ್ಟು ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

ಹಫೀಜ್ ಬಾಬಾ ನಗರ್, ಫೂಲ್ಬಾಗ್, ಉಮರ್ ಕಾಲೋನಿ, ಇಂದಿರಾ ನಗರ್, ಶಿವಾಜಿ ನಗರ್, ರಾಜೀವ್ ನಗರ್ ನಿವಾಸಿಗಳನ್ನು ಬೇರೆಡೆ ಸ್ಥಳಾಂತರಿಸಲು ಪೊಲೀಸರು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಗಳ ಮೇಲೆಯೇ ಅತ್ಯಾಚಾರ ಮಾಡಿದ ಪಾಪಿ!!

ಲಾಕ್‍ಡೌನ್ ಸಂದರ್ಭದಲ್ಲಿ 13 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಪಾಪಿ ತಂದೆಯೊಬ್ಬ ಅತ್ಯಾಚಾರ ನಡೆಸಿದ ಘಟನೆ ತೆಲಂಗಾಣದ ವಿಕರಾಬಾದ್ ಜಿಲ್ಲೆಯಲ್ಲಿ ನಡೆದಿದೆ.

ಬಂದ ಮತ್ತೊಬ್ಬ ಬಂಗಾರದ ಬಾಬಾ: ಈತನ ಚಿನ್ನದ ಮಾಸ್ಕ ರೇಟು 3.5 ಲಕ್ಷ ರೂ!

ಪುಣೆಯಲ್ಲಿ ಶಂಕರ್ ಕುರಾಡೆ ಎನ್ನುವಾತ 2.80 ಲಕ್ಷ ರೂ. ಮೌಲ್ಯದ ಚಿನ್ನದ ಮಾಸ್ಕ್ ಧರಿಸಿದ್ದನ್ನು ನೋಡಿ ಪ್ರೇರಣೆ ಪಡೆದ ಒರಿಸ್ಸಾದ ಚಿನ್ನ ಪ್ರಿಯನೊಬ್ಬ 3.6 ಲಕ್ಷ ರೂ ಮಾಸ್ಕ್ ಮಾಡಿಸಿಕೊಂಡಿದ್ದಾನೆ.

ನೀಟ್ (NEET) ಪರೀಕ್ಷೆಯ ದಿನಾಂಕ ಘೋಷಣೆ!

ಈ ಪರೀಕ್ಷೆಯು ದೇಶದಾದ್ಯಂತ ನಡೆಯಲಿದ್ದು ಕೋವಿಡ್ ಸೋಂಕು ಹರಡುತ್ತಿರುವುದರಿಂದ ಪರೀಕ್ಷೆಯ ಕೇಂದ್ರಗಳನ್ನು ಹೆಚ್ಚಿಸಲಾಗುವುದು ಹಾಗೂ ಈ ಮುಂಚೆ 155 ನಗರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈಗ 198 ನಗರಗಳಲ್ಲಿ ಪರೀಕ್ಷೆ ನಡೆಸಲಾಗುವುದು ಹಾಗೂ 3862 ಕೇಂದ್ರಗಳನ್ನು ಹೆಚ್ಚಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವರು ತಿಳಿಸಿದ್ದಾರೆ.

ಪೊಲೀಸರಿಂದಲೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ!

ಒಡಿಶಾ : ಅಪ್ರಾಪ್ತ ಬಾಲಕಿಯ ಮೇಲೆ ಪೊಲೀಸ್ ಠಾಣೆಯ ಸಿಬ್ಬಂದಿಯೇ ಸಾಮೂಹಿಕ ಅತ್ಯಾಚಾರ ಮಾಡಿರುವ ಅಮಾನವೀಯ…