ಹೈದರಾಬಾದ್ : ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತ ಪತಿ, ಅವಳ ರುಂಡವನ್ನೇ ಕತ್ತರಿಸಿ ಪ್ರಿಯಕರನ ಮನೆಯ ಮುಂದೆ ಇಟ್ಟ ಘಟನೆ ನಡೆದಿದೆ. 

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಅನಂತಸಾಗರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜುರ್ರು ಸಾಹಿಲು ಎಂಬ ವ್ಯಕ್ತಿಯೇಯ ತನ್ನ 35 ವರ್ಷದ ಪತ್ನಿ, ಅಂಶಮ್ಮಳ ರುಂಡ ಕತ್ತರಿಸಿ ಕೊಲೆ ಮಾಡಿದ ವ್ಯಕ್ತಿ.

ಜರ್ರು ಸಾಹಿಲುಗೆ ತನ್ನ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನವಿತ್ತು. ಈ ಕುರಿತು ಪ್ರತಿ ದಿನ ಗಂಡ ಹಾಗೂ ಹೆಂಡತಿಯ ನಡುವೆ ಜಗಳ ಕೂಡ ನಡೆಯುತ್ತಿತ್ತು. ಇದೇ ವಿಷಯವಾಗಿ ಬುಧವಾರ ಜಗಳ ಕೂಡ ನಡೆದಿದೆ. ಆದರೆ,  ಜಗಳ ಮಾತಿಗೆ ಮಾತು ಬೆಳೆದು, ವಿಕೋಪಕ್ಕೆ ತೆರಳಿದ. ಆಗ ಕೋಪಗೊಂಡ ಜುರ್ರು ಕೊಡಲಿಯಿಂದ ಪತ್ನಿಯ ಕತ್ತನ್ನು ಕತ್ತರಿಸಿದ್ದಾನೆ. 

ನಂತರ ಆ ರುಂಡವನ್ನು ಬೈಕ್ ನಲ್ಲಿ ಐದು ಕಿ.ಮೀವರೆಗೂ ತಂದು, ನಾರಾಯಣ್ ಖೇಡ್ ಗ್ರಾಮದಲ್ಲಿ ಅಂಶಮ್ಮ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯ ಮನೆಯ ಬಾಗಿಲ ಮುಂದೆ ಇಟ್ಟು ಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಮತ್ತೆ ಬಾಲ ಬಿಚ್ಚಿದ ಪಾಕ್ – ಓರ್ವ ಸೇನಾಧಿಕಾರಿ ಹುತಾತ್ಮ

ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ಸೈನಿಕರಿಗಾಗಿ ದೀಪ ಬೆಳಗಿಸಿ ಹಬ್ಬ ಆಚರಿಸಿ – ಮೋದಿ!

ನವದೆಹಲಿ : ಸೈನಿಕರ ಹೆಸರಿನಲ್ಲಿ ದೀಪ ಹಚ್ಚಿ ಪೂಜೆ ಸಲ್ಲಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮನವಿ ಮಾಡಿದ್ದಾರೆ.

ಆಲಮಟ್ಟಿ: ಬಸವಭೂಮಿ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತಾತೀಥ್ಯ

ಆಲಮಟ್ಟಿ : ಆಲಮಟ್ಟಿಗೆ ಆಗಮಿಸಿದ್ದ ಬಸವಭೂಮಿ ಯಾತ್ರೆಯ ಸಹಸ್ರಾರು ಬಸವಭಕ್ತ ಯಾತ್ರಾಥಿ೯ಗಳಿಗೆ ಅದ್ದೂರಿ ಸ್ವಾಗತದೊಂದಿಗೆ ಬರಮಾಡಿಕೊಂಡು…