ಶಾರ್ಜಾ : ಚೆನ್ನೈ ಸೂಪರ್ ಕಿಂಗ್ ವಿರುದ್ಧದ ಪಂದ್ಯದಲ್ಲಿ ದೆಹಲಿ ಆಟಗಾರ ಅಕ್ಷರ್ ಪಟೇಲ್ ಕೊನೆಯ ಓವರ್ ನಲ್ಲಿ ಮೂರು ಸಿಕ್ಸರ್ ಸಿಡಿಸುವ ಮೂಲಕ ಧೋನಿ ವಿರುದ್ಧದ ಸೇಡು ತೀರಿಸಿಕೊಂಡಿದ್ದಾರೆ. ಈ ಮೂಲಕ ತಂಡಕ್ಕೂ ಜಯ ತಂದು ಕೊಟ್ಟಿದ್ದಾರೆ.

2016ರಲ್ಲಿ ಎಂ.ಎಸ್. ಧೋನಿ ರೈಸಿಂಗ್‌ ಪುಣೆ ಸೂಪರ್‌ ಜೈಂಟ್ಸ್‌ ತಂಡ ಪರ ಆಡಿದ್ದರು. ಆ ಸಂದರ್ಭದಲ್ಲಿ ಚೆನ್ನೈ ತಂಡ ಬ್ಯಾನ್ ಆಗಿತ್ತು. ಅಕ್ಷರ್ ಪಟೇಲ್ ಅವರು ಕಿಂಗ್ಸ್ ಇಲೆವೆನ್ ತಂಡದ ಪರ ಆಡುತ್ತಿದ್ದರು. ಆ ವರ್ಷದ ವಿಶಾಖಪಟ್ಟಣದಲ್ಲಿ ಮೇ 21 ರಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕಿಂಗ್ಸ್‌ ಇಲೆವನ್‌ ಪಂಜಾಬ್‌ ತಂಡ 7 ವಿಕೆಟ್‌ ನಷ್ಟಕ್ಕೆ 172 ರನ್‌ ಗಳಿಸಿತ್ತು.

ಈ ಗುರಿ ಬೆನ್ನಟ್ಟಿದ ಪುಣೆ ತಂಡಕ್ಕೆ ಕೊನೆಯ ಓವರ್ ನಲ್ಲಿ 23 ರನ್‌ಗಳು ಬೇಕಿತ್ತು. ಕ್ರೀಜ್ ನಲ್ಲಿ ಮಹೇಂದ್ರಸಿಂಗ್ ಧೋನಿ ಇದ್ದರೆ, ಅಕ್ಷರ್ ಪಟೇಲ್ ಬೌಲಿಂಗ್ ಮಾಡುತ್ತಿದ್ದರು. ಆಗ ಮೂರು ಸಿಕ್ಸರ್ ಹಾಗೂ ಒಂದು ಬೌಂಡರಿ ಸಿಡಿಸುವ ಮೂಲಕ ಧೋನಿ 23 ರನ್ ಬಾರಿಸಿದ್ದರು.

ನಿನ್ನೆ ನಡೆದ ಪಂದ್ಯದಲ್ಲಿ ದೆಹಲಿಗೆ 17 ರನ್ ಬೇಕಿತ್ತು. ಜಡೇಜಾ ಕೊನೆಯ ಓವರ್ ಎಸೆಯಲು ಬಂದಿದ್ದರು. ಈ ಸಂದರ್ಭದಲ್ಲಿ ಅಕ್ಷರ್‌ ಪಟೇಲ್‌ ಮೂರು ಸಿಕ್ಸರ್ ಸಿಡಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ. ಅಕ್ಷರ್ ಅವರ ಆಟಕ್ಕೆ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದು, ಧೋನಿ ವಿರುದ್ಧ ಸೇಡು ತೀರಿಸಿಕೊಂಡಿದ್ದಾರೆ ಎಂದು ಕಮೆಂಟ್ ಮಾಡಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಿಂಗ್ ಕೊಹ್ಲಿ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅಭಿಮಾನಿಗಳು!

ಶಾರ್ಜಾ : ಇಂದಿನ ಪಂದ್ಯಕ್ಕೂ ಮೊದಲು ಮೈದಾನದಲ್ಲಿ ಕೊಹ್ಲಿ ಡ್ಯಾನ್ಸ್ ಮಾಡಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಧೋನಿ ನಿವೃತ್ತಿ ಘೋಷಿಸುವ ಸಿದ್ಧತೆಯಲ್ಲಿದ್ದಾರೆಯೇ?

ಅಬುಧಾಬಿ : ಮ್ಯಾಚ್ ವಿನ್ನರ್ ಧೋನಿ ಐಪಿಎಲ್ ಗೂ ನಿವೃತ್ತಿ ಘೋಷಿಸಲಿದ್ದಾರೆಯೇ ಎಂಬ ಸಂಶಯ ಮೂಡುತ್ತಿದೆ. ಹಾಗಂತ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಅರಬರ ನೆಲದಲ್ಲಿ ಇಂಡಿಯನ್ ಐಪಿಎಲ್! ಜೂಜುಕೋರ ಬಿಸಿಸಿಐನ ಕೋವಿಡ್ ಗೇಮ್

ಇಂಡಿಯನ್ಪ್ರಿಮೀಯರ್ ಲೀಗ್ ಎಂಬುದು ಕೇವಲ ಆಟವಲ್ಲ, ಅದೊಂದುಬ್ಯುಸಿನೆಸ್ ಮತ್ತು ಕಪ್ಪು ಹಣ ಬಿಳಿಪಾಗಿಸುವ ದಂಧೆ.ಹೀಗಾಗಿ ಈ ಕೋರೊನಾ ಬಿಕ್ಕಟ್ಟಿನಲ್ಲೂ ಐಪಿಎಲ್ ನಡೆಸಲುಶತಾಯಗತಾಯ ಯತ್ನಗಳು ನಡೆದ

ಜಡೇಜಾಗೆ ಧೋನಿ ಕೊನೆಯ ಓವರ್ ನೀಡಿದ್ದೇಕೆ?

ಶಾರ್ಜಾ : ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ತಂಡ ನಿನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡಿದೆ. ರೋಚಕ ಹಂತಕ್ಕೆ ಬಂದು ತಲುಪಿದ್ದ ಪಂದ್ಯದಲ್ಲಿ ಧೋನಿ ಅವರ ಕೆಟ್ಟ ನಿರ್ಧಾರದಿಂದಾಗಿ ಸೋಲು ಕಾಣುವಂತಾಯಿತು ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.