ನವದೆಹಲಿ :  ಯುದ್ಧಕ್ಕೆ ಸಿದ್ಧವಾಗಿ ನಿಂತಿರುವ ಚೀನಾಕ್ಕೆ ಭಾರತ ತಕ್ಕ ಉತ್ತರ ನೀಡಿದೆ. ಯುದ್ಧಕ್ಕೆ ನೀವು ತಯಾರಿ ನಡೆಸಿದ್ದರೆ, ನಾವೂ ಸಿದ್ಧ ಎಂಬ ಮಾತನ್ನು ಭಾರತ ಹೇಳಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಯುದ್ಧದ ಕುರಿತು ಮಾತನಾಡಿದ್ದಾರೆ. ಭಾರತೀಯ ರಕ್ಷಣಾ ಪಡೆ ಯುದ್ಧಕ್ಕೆ ಯಾವಾಗಲೂ ಸಿದ್ಧವಾಗಿದೆ. ಸಾರ್ವಭೌತ್ವ ಹಾಗೂ ಗಡಿ ಕಾಪಾಡಲು ದೇಶ ಸದಾ ಸಿದ್ಧವಾಗಿದೆ ಎಂದು ಹೇಳಿದ್ದಾರೆ. 

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ್ದ ಜಿನ್ ಪಿಂಗ್ ಅವರು, ಯಾವುದೇ ದೇಶದೊಂದಿಗೆ ಚೀನಾ ಕೋಲ್ಡ್, ಹಾಟ್ ಯುದ್ಧದ ಉದ್ದೇಶ ಹೊಂದಿಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಭಾರತದೊಂದಿಗೆ ಮಾತ್ರ ಕಾಲು ಕೆರೆದು ಜಗಳಕ್ಕೆ ನಿಲ್ಲುವುದನ್ನು ನಿಲ್ಲಿಸಿರಲಿಲ್ಲ. ಯುದ್ಧಕ್ಕೆ ಸಿದ್ಧವಾಗುವಂತೆ ತಮ್ಮ ಸೇನೆಗೆ ತಿಳಿಸಿದ್ದರು. ಇದಕ್ಕೆ ಭಾರತ ಕೂಡ ತಯಾರಿ ನಡೆಸಿದ್ದು, ತಕ್ಕ ಉತ್ತರ ನೀಡುತ್ತಿದೆ. 

ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಹಗ್ ಭಾರತದದೊಂದಿಗೆ ಯುದ್ಧಕ್ಕೆ ಚೀನಾ ಸಿದ್ಧವಾಗಬೇಕು ಎಂದು ಪೀಪಲ್ಸ್ ಲಿಬರೇಷನ್ ಆರ್ಮಿಗೆ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅಮಿತ್ ಶಾ ಕೂಡ ಚೀನಾಕ್ಕೆ ತಕ್ಕ ಉತ್ತರ ನೀಡಿದ್ದಾರೆ. ಭಾರತೀಯ ಸೇನೆ ಯಾವುದೇ ಅಂತಿಮ ನಿರ್ಧಾರಕ್ಕೆ ಯಾವಾಗಲೂ ಸಿದ್ಧವಾಗಿದೆ. ನಿರ್ದಿಷ್ಟ ಹೇಳಿಕೆ ಆಧರಿಸಿ ನಾವು ಈ ರೀತಿಯ ಹೇಳಿಕೆ ನೀಡುತ್ತಿಲ್ಲ. ಯಾವುದೇ ಸಮಯದಲ್ಲಿಯೂ ಭಾರತ ಯುದ್ಧಕ್ಕೆ ಸಿದ್ಧವಾಗಿದೆ ಎಂದು ಹೇಳಿದ್ದಾರೆ. 

Leave a Reply

Your email address will not be published. Required fields are marked *

You May Also Like

ಮತ್ತೆ ಬಾಲ ಬಿಚ್ಚಿದ ಪಾಕ್ – ಓರ್ವ ಸೇನಾಧಿಕಾರಿ ಹುತಾತ್ಮ

ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ ಚೀನಾ!

ವಾಷಿಂಗ್ಟನ್ : ಗಡಿಯಲ್ಲಿ ಚೀನಾ ರಾಷ್ಟ್ರದ ಉಪಟಳ ಮುಂದುವರೆದಿದೆ. ಚೀನಾ ಭಾರತದ ಮೇಲೆ ದಾಳಿ ಮಾಡುವ ಹುನ್ನಾರ ನಡೆಸುತ್ತಿದೆಯೇ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಗಡಿಯಲ್ಲಿ 60 ಸಾವಿರ ಸೈನಿಕರನ್ನು ನಿಯೋಜಿಸಿದ್ದೆ ಈ ಸಂಶಯಕ್ಕೆ ಕಾರಣವಾಗುತ್ತಿದೆ.

ರೈತರ ಸಾಲ ಮರುಪಾವತಿಗೆ ಆಗಸ್ಟ್ ವರೆಗೆ ಗಡುವು

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಇಂತಿವೆ.

ರೈತರ 15 ತಿಂಗಳ ಪ್ರತಿಭಟನೆ ಕೊನೆ: ರೈತರ ಹೋರಾಟ ಹಿಂಪಡೆದ ಸಂಯುಕ್ತ ಕಿಸಾನ್ ಮೋರ್ಚಾ

ಉತ್ತರಪ್ರಭ ಸುದ್ದಿ ನವದೆಹಲಿ: (ಈಗ ರದ್ದಾದ) ಕೃಷಿ ಕಾನೂನುಗಳು ಮತ್ತು ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ)…