ಬೆಂಗಳೂರು : ಶಿವಣ್ಣ ಅವರೊಂದಿಗೆ ಪ್ರಭುದೇವ್ ಚಂದನವನದಲ್ಲಿ ಸದ್ದು ಮಾಡಲು ತಯಾರಿ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಶಿವರಾಜ್ ಕುಮಾರ್ ಹಾಗೂ ಯೋಗರಾಜ್ ಭಟ್ ಅವರ ಕಾಂಬಿನೇಶನ್ ನಲ್ಲಿ ಚಿತ್ರವೊಂದು ತಯಾರಾಗುತ್ತಿದ್ದು, ಈ ಚಿತ್ರದಲ್ಲಿ ಪ್ರಭುದೇವ್ ಕೂಡ ಅಭಿನಯಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಆದರೆ, ಅವರ ಅಭಿನಯದ ಕುರಿತು ಇನ್ನೂ ಅಂತಿಮ ಮಾತು ತಿಳಿದು ಬಂದಿಲ್ಲ. ಚಿತ್ರ ತಂಡ ಮಾತ್ರ ಪ್ರಭುದೇವ್ ಅಭಿನಯಿಸುವುದು ಬಹುತೇಕ ಖಚಿತವಾಗಲಿದೆ ಎಂದು ಹೇಳುತ್ತಿದೆ.

ಯೋಗರಾಜ್ ಭಟ್ ಅವರ ನಿರ್ದೇಶನ ಯಾವಾಗಲೂ ಗಲ್ಲಾ ಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿರುತ್ತದೆ. ಯೋಗರಾಜ್ ಭಟ್ ಅವರ ನಿರ್ದೇಶನ ಹಾಗೂ ಹಾಡುಗಳಿಗೆ ಮಾರು ಹೋಗದ ಚಿತ್ರ ರಸಿಕರೇ ಇಲ್ಲ ಎಂಬ ಮಾತುಗಳು ಗಾಂಧಿನಗರದಲ್ಲಿ ಈಗಲೂ ಹಸಿಯಾಗಿಯೇ ಉಳಿದಿದೆ. ಸದ್ಯ ಗಾಳಿಪಟ – 2ರಲ್ಲಿ ಕೆಲಸ ಮಾಡುತ್ತಿರುವ ಯೋಗರಾಜ್ ಭಟ್, ಶಿವಣ್ಣ ಅವರಿಗಾಗಿ ಚಿತ್ರ ನಿರ್ಮಿಸುತ್ತಿದ್ದಾರೆ.

ಗಾಳಿಪಟ-2 ಚಿತ್ರೀಕರಣದ ಸಂದರ್ಭದಲ್ಲಿ ಯೋಗರಾಜ್ ಭಟ್ ಅವರು ಪ್ರಭುದೇವ್ ಅವರನ್ನು ಭೇಟಿ ಮಾಡಿದ್ದು ಸುದ್ದಿಯಾಗಿತ್ತು. ಈ ಸಂದರ್ಭದಲ್ಲಿ ಚಿತ್ರದ ಕುರಿತು ಮಾತನಾಡಿದ್ದಾರೆ ಎನ್ನಲಾಗಿದ್ದು, ಕಥೆಯನ್ನು ಕೂಡ ಪ್ರಭುದೇವ್ ಇಷ್ಟಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಅಭಿನಯಿಸಲು ಮಾತ್ರ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ.

ಇನ್ನೊಂದೆಡೆ ಶಿವಣ್ಣ ಭಜರಂಗಿ – 2ನಲ್ಲಿ ಬ್ಯೂಸಿಯಾಗಿದ್ದಾರೆ. ಅಷ್ಟೆ ಅಲ್ಲದೆ, ಶಿವರಾಜ್ ಕುಮಾರ್ ಅವರ ಕೈಯಲ್ಲಿ ಸಾಲು ಸಾಲು ಚಿತ್ರಗಳು ಕೂಡ ಇವೆ. ಆದರೆ, ಪ್ರಭುದೇವ ಅವರು ಅಭಿನಯಿಸಲು ಒಪ್ಪಿದ ಮೇಲೆ ಈ ಚಿತ್ರ ನಿರ್ಮಾಣವಾಗಲಿದೆಯೇ? ಅಥವಾ ಕಾಲ್ ಶೀಟ್ ನೋಡಿಕೊಂಡು ಶಿವಣ್ಣ, ಯೋಗರಾಜ್ ಭಟ್ ರೊಂದಿಗೆ ಕೈ ಜೋಡಿಸುತ್ತಾರೆಯೇ? ಕಾಯ್ದು ನೋಡಬೇಕಿದೆ.

Leave a Reply

Your email address will not be published. Required fields are marked *

You May Also Like

ಚಿರಂಜೀವಿಗೆ ಮತ್ತೆ ಜೀವ ಬಂದಿದೆ ಎಂದ ನಟಿ ಮೇಘನಾ!

ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾಗಿರುವ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಅವರು ಅಭಿಮಾನಿಗಳು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಗೋಲ್ಡನ್ ಸ್ಟಾರ್ ಗೆ ಅಡ್ವಾನ್ಸ್ ವಿಶ್ ಮಾಡಿದ ಕಿಚ್ಚ

ಬೆಂಗಳೂರು : ಕಿಚ್ಚ ಸುದೀಪ್ ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅಡ್ವಾನ್ಸ್ ವಿಶ್ ಮಾಡಿದ್ದಾರೆ. ಗೋಲ್ಡನ್…

ಅವನೇ ಶ್ರೀಮನ್ನಾರಾಯಣನಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ!

ಬೆಂಗಳೂರು: ಅವನೇ ಶ್ರೀಮನ್ನಾರಾಯಣ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಲಾಕ್ ಡೌನ್ ಹಿನ್ನೆಲೆಯಲ್ಲಿ…

ಕಿರಿಕ್ ಬೆಡಗಿಗೆ ವಿಜಯ್ ಕಳುಹಿಸಿದ ಸಂದೇಶವೇನು?

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ. ಹೈದರಾಬಾದ್ಗೆ ಬಾ…