ಶಿವಮೊಗ್ಗ : ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರ ಪುತ್ರ ಸುಹಾಸ್ (31)  ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 

ಸುಹಾಸ್ ಅವರಿಗೆ ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದಾಗಿ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪ್ರಸನ್ನ ಕುಮಾರ್ ಅವರ ನಿವಾಸಕ್ಕೆ ಆಗಮಿಸಿ ಸುಹಾಸ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಪ್ರಸನ್ನಕುಮಾರ್ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಕೂಡ ಈ ಘಳಿಗೆಗೆ ಸಾಕ್ಷಿಯಾಗುತ್ತಿದ್ದಾರೆ. ಕುಟುಂಬವು ದುಃಖದ ನೋವಿನಲ್ಲಿ ಮುಳುಗಿದೆ. 

ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಶಾಸಕ ಪ್ರಸನ್ನಕುಮಾರ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಕೊನೆಯ ಬಾರಿಗೆ ಮಗನ ಮುಖ ನೋಡದ ಪರಿಸ್ಥಿತಿಯಲ್ಲಿಯೂ ಅವರಿದ್ದಾರೆ. ಇದು ಶಾಸಕ ಹಾಗೂ ಕುಟುಂಬಸ್ಥರಿಗೆ ತೀವ್ರ ನೋವು ನೀಡುತ್ತಿದೆ.

ಶಾಸಕ ಪ್ರಸನ್ನ ಕುಮಾರ್ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಮೃತ ಸುಹಾಸ್ ಅವರು ಕಳೆದ ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿದ್ದರು.

Leave a Reply

Your email address will not be published. Required fields are marked *

You May Also Like

ಮುಳಗುಂದ ಪಟ್ಟಣ ಪಂಚಾಯ್ತಿ ಸಾಮಾನ್ಯ ಸಭೆ

ಸ್ಥಳೀಯ ಪಟ್ಟಣ ಪಂಚಾಯ್ತಿ ಸಭಾ ಭವನದಲ್ಲಿ ಮಂಗಳವಾರ ನಡೆದ ಪಂಚಾಯ್ತಿ ಆಡಳಿತ ಮಂಡಳಿ ಸಾಮಾನ್ಯ ಸಭೆಯಲ್ಲಿ 2021-22 ನೇ ಸಾಲಿನ ಬಜೆಟ್ ಮಂಡಿಸಿದರು.

ಟ್ಯಾಕ್ಟರ್ ಪಲ್ಟಿ 18 ಕೂಲಿ ಕಾರ್ಮಿಕರಿಗೆ ಗಾಯ

ಜಲಾಶಯಲ್ಲಿನ ಹೂಳು ಎತ್ತುವ ಕಾಮಗಾರಿ ಮುಗಿಸಿಕೊಂಡು ಹಿಂತಿರುಗುವ ವೇಳೆ ಟ್ಯಾಕ್ಟರ್ ಪಲ್ಟಿಯಾಗಿ ಐದು ಜನರು ಗಾಯಗೊಂಡ ಘಟನೆ ಸಂತೆಕೆಲ್ಲೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ.

ಡಂಬಳ : ಪಶು ಆಸ್ಪತ್ರೆಯಲ್ಲಿ ವೈದ್ಯರ ಕೊರತೆ

ಜಾನುವಾರುಗಳಿಗೆ ಚಿಕಿತ್ಸೆ ನೀಡುವುದಕ್ಕೆ ಪಶು ಆಸ್ಪತ್ರೆ ಇದ್ದರೂ ಕೂಡ ಜಾನುವಾರುಗಳಿಗೆ ಚಿಕಿತ್ಸೆ ಸಿಗದೇ ಜಾನುವಾರಗಳು ನರಳಾಡುವಂತಹ ಪರಸ್ಥಿತಿ ಎದುರಾಗಿದೆ.

ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ಮದುವೆ : ಕೋವಿಡ್ ನಿಯಮಕ್ಕೆ ಡೋಂಟ್ ಕೇರ್..!!

ಹರಪನಹಳ್ಳಿ: ಕೊರೊನಾ ಹಿನ್ನೆಲೆ ಲಾಕ್ ಡೌನ್ ಸಡಿಲಿಸಿದರೂ ಸಾಕಷ್ಟು ಕಟ್ಟುನಿಟ್ಟಿನ ನಿಯಮ ಸರ್ಕಾರ ಸೂಚಿಸಿದೆ. ಆದರೆ…