ಮಸ್ಕಿ: ಕೋವಿಡ್-19 ಹಿನ್ನಲೆಯಲ್ಲಿ ದೇವಿಯ ಪುರಾಣ ಸರಳವಾಗಿ ಆರಚಣೆ ಮಾಡಲಾಗುತ್ತಿದೆ. ಪುರಾಣಕ್ಕೆ ಆಗಮಿಸುವ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಗಚ್ಚಿನಮಠದ ವರರುದ್ರಮುನಿ ಶಿವಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಭ್ರಮರಾಂಬ ದೇವಿ ಗುಡಿಯಲ್ಲಿ ದೇವಿ ಪುರಾಣ, ಪ್ರವಚನಕ್ಕೆ ಶ್ರೀಗಳು ಚಾಲನೆ ನೀಡಿ ಮಾತನಾಡಿದರು. ಈ ಭಾರಿ ದೇವಿ ಪುರಾಣವನ್ನು ಬೆಳಿಗ್ಗೆ ಪಠಣ ಮಾಡುತ್ತಿದ್ದು ಭಕ್ತರು ದೈಹಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿಕೊಂಡು ಪುರಾಣ ಆಲಿಸಬೇಕು ಎಂದರು.

ಭ್ರಮರಾಂಬ ದೇವಿಯ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಘಟ ಸ್ಥಾಪನೆ ನೆರವೇರಿಸಿ ಪುರಾಣ ಪ್ರಾರಂಭಿಸಿದರು. ದೇವರಾಜ ಗವಾಯಿ ಪುರಾಣ ಪಠಣ ಮಾಡಿದರು. ಅಮರೇಶ ಹೂಗಾರ ಸಂಗೀತ ಸಾಥ್ ನೀಡಿದರು. ಅಂಕಲಿಮಠದ ಫಕೀರೇಶ್ವರ ಸ್ವಾಮೀಜಿ, ದೇವಸ್ಥಾನ ಸಮಿತಿಯ ಮುಖಂಡರಾದ ಪ್ರಕಾಶ ಧಾರಿವಾಲ, ಸಿದ್ದಲಿಂಗಯ್ಯ ಗಚ್ಚಿನಮಠ, ಮಲ್ಲಪ್ಪ ನಾಯಿಕೊಡೆ, ನಾಗರಾಜ ಸಜ್ಜನ್, ಮಲ್ಲಿಕಾರ್ಜುನ ಕ್ಯಾತ್ನಟ್ಟಿ, ನಾಗಭೂಷಣ ನಂದಿಹಾಳ, ಷಡಕ್ಷರಪ್ಪ ಬಾಳೆಕಾಯಿ, ಘನಮಠದಯ್ಯ ಸಾಲಿಮಠ, ಮಹಾಂತೇಶ ಮಸ್ಕಿ ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಅಚಾತುರ್ಯ: ಮೊದಲೇ ಲೀಕ್ ಆಗ್ತಿವೆ ಕೊರೊನಾ ಪಾಸಿಟಿವ್ ಲಿಸ್ಟ್ !

ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಧಿಕೃತವಾಗಿ ಪಾಸಿಟಿವ್ ಕೇಸ್ ವಿವರ ಬಿಡುಗಡೆ ಮಾಡುವ ಮುನ್ನವೇ ಒಂದು ಪಾಸಿಟಿವ್ ಲಿಸ್ಟ್ ವೈರಲ್ ಆಗುತ್ತಿದೆ. ಅಪಾಯಕಾರಿ ವಿಷಯ ಎಂದರೆ, ಇದರಲ್ಲಿ ಸೋಂಕಿತರ ಹೆಸರು, ವಿಳಾಸ, ಮೊಬೈಲ್ ನಂಬರ್ ವಿವರ ಇರುತ್ತವೆ!

ರಾಜ್ಯದಲ್ಲಿ 127 ಕೊರೋನಾ ಸೋಂಕಿತರು ಪತ್ತೆ: ಕರ್ನಾಟಕಕ್ಕೆ ಕೊರೋನಾ ಸಂಕಟ

ರಾಜ್ಯದಲ್ಲಿಂದು ಕೊರೋನಾ ಸೋಂಕಿತ 127 ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 1,373ಕ್ಕೆ ಏರಿಕೆಯಾಗಿದೆ.

ಗದಗನಲ್ಲಿ ಇಂದು ನಾಲ್ಕು ಪಾಸಿಟಿವ್: ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆ!

ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗೆ ಒಟ್ಟು ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ.

ಮೂರ್ತಿ ತೆರವಿಗೆ ಖಂಡನೆ: ರಾಯಣ್ಣ ಅಭಿಮಾನಿ ಬಳಗದಿಂದ ಮನವಿ

ಬೆಳಗಾವಿ ಜಿಲ್ಲೆಯ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ತೆರವುಗೊಳಿಸದ್ದನ್ನು ಖಂಡಿಸಿ ತಾಲೂಕು ಕುರುಬರ ಸಂಘ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸೋಮವಾರ ಮನವಿ ಸಲ್ಲಿಸಲಾಯಿತು.