ದೇವಿ ಪುರಾಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ

maski swamiji pooja

ದೇವಿ ಪುರಾಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ

ಮಸ್ಕಿ: ಕೋವಿಡ್-19 ಹಿನ್ನಲೆಯಲ್ಲಿ ದೇವಿಯ ಪುರಾಣ ಸರಳವಾಗಿ ಆರಚಣೆ ಮಾಡಲಾಗುತ್ತಿದೆ. ಪುರಾಣಕ್ಕೆ ಆಗಮಿಸುವ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಗಚ್ಚಿನಮಠದ ವರರುದ್ರಮುನಿ ಶಿವಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಭ್ರಮರಾಂಬ ದೇವಿ ಗುಡಿಯಲ್ಲಿ ದೇವಿ ಪುರಾಣ, ಪ್ರವಚನಕ್ಕೆ ಶ್ರೀಗಳು ಚಾಲನೆ ನೀಡಿ ಮಾತನಾಡಿದರು. ಈ ಭಾರಿ ದೇವಿ ಪುರಾಣವನ್ನು ಬೆಳಿಗ್ಗೆ ಪಠಣ ಮಾಡುತ್ತಿದ್ದು ಭಕ್ತರು ದೈಹಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿಕೊಂಡು ಪುರಾಣ ಆಲಿಸಬೇಕು ಎಂದರು.

ಭ್ರಮರಾಂಬ ದೇವಿಯ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಘಟ ಸ್ಥಾಪನೆ ನೆರವೇರಿಸಿ ಪುರಾಣ ಪ್ರಾರಂಭಿಸಿದರು. ದೇವರಾಜ ಗವಾಯಿ ಪುರಾಣ ಪಠಣ ಮಾಡಿದರು. ಅಮರೇಶ ಹೂಗಾರ ಸಂಗೀತ ಸಾಥ್ ನೀಡಿದರು. ಅಂಕಲಿಮಠದ ಫಕೀರೇಶ್ವರ ಸ್ವಾಮೀಜಿ, ದೇವಸ್ಥಾನ ಸಮಿತಿಯ ಮುಖಂಡರಾದ ಪ್ರಕಾಶ ಧಾರಿವಾಲ, ಸಿದ್ದಲಿಂಗಯ್ಯ ಗಚ್ಚಿನಮಠ, ಮಲ್ಲಪ್ಪ ನಾಯಿಕೊಡೆ, ನಾಗರಾಜ ಸಜ್ಜನ್, ಮಲ್ಲಿಕಾರ್ಜುನ ಕ್ಯಾತ್ನಟ್ಟಿ, ನಾಗಭೂಷಣ ನಂದಿಹಾಳ, ಷಡಕ್ಷರಪ್ಪ ಬಾಳೆಕಾಯಿ, ಘನಮಠದಯ್ಯ ಸಾಲಿಮಠ, ಮಹಾಂತೇಶ ಮಸ್ಕಿ ಇದ್ದರು.

Exit mobile version