ಮಸ್ಕಿ: ಕೋವಿಡ್-19 ಹಿನ್ನಲೆಯಲ್ಲಿ ದೇವಿಯ ಪುರಾಣ ಸರಳವಾಗಿ ಆರಚಣೆ ಮಾಡಲಾಗುತ್ತಿದೆ. ಪುರಾಣಕ್ಕೆ ಆಗಮಿಸುವ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಗಚ್ಚಿನಮಠದ ವರರುದ್ರಮುನಿ ಶಿವಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಭ್ರಮರಾಂಬ ದೇವಿ ಗುಡಿಯಲ್ಲಿ ದೇವಿ ಪುರಾಣ, ಪ್ರವಚನಕ್ಕೆ ಶ್ರೀಗಳು ಚಾಲನೆ ನೀಡಿ ಮಾತನಾಡಿದರು. ಈ ಭಾರಿ ದೇವಿ ಪುರಾಣವನ್ನು ಬೆಳಿಗ್ಗೆ ಪಠಣ ಮಾಡುತ್ತಿದ್ದು ಭಕ್ತರು ದೈಹಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿಕೊಂಡು ಪುರಾಣ ಆಲಿಸಬೇಕು ಎಂದರು.

ಭ್ರಮರಾಂಬ ದೇವಿಯ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಘಟ ಸ್ಥಾಪನೆ ನೆರವೇರಿಸಿ ಪುರಾಣ ಪ್ರಾರಂಭಿಸಿದರು. ದೇವರಾಜ ಗವಾಯಿ ಪುರಾಣ ಪಠಣ ಮಾಡಿದರು. ಅಮರೇಶ ಹೂಗಾರ ಸಂಗೀತ ಸಾಥ್ ನೀಡಿದರು. ಅಂಕಲಿಮಠದ ಫಕೀರೇಶ್ವರ ಸ್ವಾಮೀಜಿ, ದೇವಸ್ಥಾನ ಸಮಿತಿಯ ಮುಖಂಡರಾದ ಪ್ರಕಾಶ ಧಾರಿವಾಲ, ಸಿದ್ದಲಿಂಗಯ್ಯ ಗಚ್ಚಿನಮಠ, ಮಲ್ಲಪ್ಪ ನಾಯಿಕೊಡೆ, ನಾಗರಾಜ ಸಜ್ಜನ್, ಮಲ್ಲಿಕಾರ್ಜುನ ಕ್ಯಾತ್ನಟ್ಟಿ, ನಾಗಭೂಷಣ ನಂದಿಹಾಳ, ಷಡಕ್ಷರಪ್ಪ ಬಾಳೆಕಾಯಿ, ಘನಮಠದಯ್ಯ ಸಾಲಿಮಠ, ಮಹಾಂತೇಶ ಮಸ್ಕಿ ಇದ್ದರು.

Leave a Reply

Your email address will not be published. Required fields are marked *

You May Also Like

ಮೊಮ್ಮಗನಿಗೆ ಕೊರೊನಾ ಬಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಜ್ಜಿ!

ಕಾರವಾರ: ಕೊರೊನಾ ಸೋಂಕಿತನ ಸಂಪರ್ಕ ಹೊಂದುವ ಮೂಲಕ ಕ್ವಾರಂಟೈನ್ ಆಗಿದ್ದ ವೃದ್ಧೆಯೊಬ್ಬರು ತಮಗೂ ಕೊರೊನಾ ಬಂದಿದೆ…

ಖಾಸಗಿ ವೈದ್ಯರು ವೃತ್ತಿ ಪರತೆ ಮರೆತರೆ ಶಿಕ್ಷೆ ಕಟ್ಟಿಟ್ಟ ಬುತ್ತಿ!

ಖಾಸಗಿ ವೈದ್ಯರು ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಬೇಕು. ಒಂದು ವೇಳೆ ಚಿಕಿತ್ಸೆ ನೀಡಲು ನಿರಾಕರಿಸಿದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

ಪಿಯುಸಿ2: ಗದಗ ಜಿಲ್ಲಾ ಮಟ್ಟದ ರ‌್ಯಾಂಕ್ ವಿವರ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 9532 ವಿದ್ಯಾರ್ಥಿಗಳು ಹಾಜರಾಗಿದ್ದು ಆ ಪೈಕಿ 6005 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಕಳೆದ ವರ್ಷ ಜಿಲ್ಲೆಯ ಪರೀಕ್ಷಾ ಫಲಿತಾಂಶ ಶೇ. 57.76 ರಷ್ಟಾಗಿ ಜಿಲ್ಲೆಯು 26 ನೇ ಸ್ಥಾನ ಪಡೆದುಕೊಂಡಿತ್ತು. ಆದರೆ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯು ಶೇ. 63 ರಷ್ಟು ಫಲಿತಾಂಶ ಪಡೆಯುವ ಮೂಲಕ 22 ನೇ ಸ್ಥಾನ ಪಡೆದುಕೊಂಡಿದೆ.

ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ: ಸಿದ್ದರಾಮಯ್ಯ

ಕೊಪ್ಪಳ: ಸಚಿವ ಸೋಮಣ್ಣ ಅವರ ಹೇಳಿಕೆ ಆರ್ಥಿಕತೆಯ ಬಗ್ಗೆ ಅವರಿಗಿರುವ ಅಜ್ಞಾನವನ್ನು ತೋರಿಸುತ್ತದೆ. ನಮ್ಮ ಸರ್ಕಾರದ ಅವಧಿಯಲ್ಲಿ ಆರ್ಥಿಕ ಶಿಸ್ತಿನಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿತ್ತು. ಈಗ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದ ಬಳಿ ಹಣವಿಲ್ಲ. ರಾಜ್ಯ ಮಾತ್ರವಲ್ಲ ಇಡೀ ದೇಶವೇ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.