ಮಸ್ಕಿ: ಕೋವಿಡ್-19 ಹಿನ್ನಲೆಯಲ್ಲಿ ದೇವಿಯ ಪುರಾಣ ಸರಳವಾಗಿ ಆರಚಣೆ ಮಾಡಲಾಗುತ್ತಿದೆ. ಪುರಾಣಕ್ಕೆ ಆಗಮಿಸುವ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಗಚ್ಚಿನಮಠದ ವರರುದ್ರಮುನಿ ಶಿವಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಭ್ರಮರಾಂಬ ದೇವಿ ಗುಡಿಯಲ್ಲಿ ದೇವಿ ಪುರಾಣ, ಪ್ರವಚನಕ್ಕೆ ಶ್ರೀಗಳು ಚಾಲನೆ ನೀಡಿ ಮಾತನಾಡಿದರು. ಈ ಭಾರಿ ದೇವಿ ಪುರಾಣವನ್ನು ಬೆಳಿಗ್ಗೆ ಪಠಣ ಮಾಡುತ್ತಿದ್ದು ಭಕ್ತರು ದೈಹಿಕ ಅಂತರ ಕಾಪಾಡಿಕೊಂಡು, ಸ್ಯಾನಿಟೈಸರ್ ಬಳಸಿಕೊಂಡು ಪುರಾಣ ಆಲಿಸಬೇಕು ಎಂದರು.

ಭ್ರಮರಾಂಬ ದೇವಿಯ ವಿಗ್ರಹಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಘಟ ಸ್ಥಾಪನೆ ನೆರವೇರಿಸಿ ಪುರಾಣ ಪ್ರಾರಂಭಿಸಿದರು. ದೇವರಾಜ ಗವಾಯಿ ಪುರಾಣ ಪಠಣ ಮಾಡಿದರು. ಅಮರೇಶ ಹೂಗಾರ ಸಂಗೀತ ಸಾಥ್ ನೀಡಿದರು. ಅಂಕಲಿಮಠದ ಫಕೀರೇಶ್ವರ ಸ್ವಾಮೀಜಿ, ದೇವಸ್ಥಾನ ಸಮಿತಿಯ ಮುಖಂಡರಾದ ಪ್ರಕಾಶ ಧಾರಿವಾಲ, ಸಿದ್ದಲಿಂಗಯ್ಯ ಗಚ್ಚಿನಮಠ, ಮಲ್ಲಪ್ಪ ನಾಯಿಕೊಡೆ, ನಾಗರಾಜ ಸಜ್ಜನ್, ಮಲ್ಲಿಕಾರ್ಜುನ ಕ್ಯಾತ್ನಟ್ಟಿ, ನಾಗಭೂಷಣ ನಂದಿಹಾಳ, ಷಡಕ್ಷರಪ್ಪ ಬಾಳೆಕಾಯಿ, ಘನಮಠದಯ್ಯ ಸಾಲಿಮಠ, ಮಹಾಂತೇಶ ಮಸ್ಕಿ ಇದ್ದರು.

Leave a Reply

Your email address will not be published. Required fields are marked *

You May Also Like

ಇಂದು 48 ಜನರಲ್ಲಿ ಕಂಡು ಬಂದ ಸೋಂಕು!! ಆತಂಕದಲ್ಲಿ ರಾಜ್ಯ!!

ಮಹಾಮಾರಿ ಕೊರೊನಾ ರಾಜ್ಯದಲ್ಲಿ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದೆ. ಇವತ್ತು ಒಂದೇ ದಿನ 48 ಪ್ರಕರಣಗಳು ದಾಖಲಾಗಿವೆ.

ಡ್ರಗ್ಸ್ ರಾಣಿಯರಿಗೆ ಬೇಲ್ ನೀಡದಿದ್ದರೆ ಬಾಂಬ್ ಬೆದರಿಕೆ – ನಾಲ್ವರ ಬಂಧನ!

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ಹಾಗೂ ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ದಾರಾವಾಹಿ ಶೂಟಿಂಗ್ ಗೆ ಸರ್ಕಾರದ ಅನುಮತಿ

ಲಾಕ್ ಡೌನ್ ಬಿಸಿ ದಾರಾವಾಹಿಗಳಿಗೂ ತಟ್ಟಿದ್ದರಿಂದ ಶೂಟಿಂಗ್ ಗೆ ಅವಕಾಶವಿರಲಿಲ್ಲ. ಇದರಿಂದಾಗಿ ಮನೆಮಂದಿಯಲ್ಲಿ ಮನೆ ಹಿಡಿದ ಮೇಲೆ ಮಹಿಳೆಯರಿಗೆ ತುಸು ಕೆಲಸದ ಹೊರೆ ಜಾಸ್ತಿಯಾಗಿತ್ತು. ಈ ಕಾರಣದಿಂದ ದಾರಾವಾಹಿಗಳನ್ನು ಬಹುತೇಕರು ಮಿಸ್ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ದಾರಾವಾಹಿ ಒಳಾಂಗಣ ಚಿತ್ರಿಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.

ಶೀಘ್ರವಾಗಿ ಎ.ಪಿ.ಎಂ.ಸಿ ಮಾರುಕಟ್ಟೆ ಪ್ರಾರಂಭಿಸಿಲು: ಮನವಿ

ಶಿರಹಟ್ಟಿ ಪಟ್ಟಣವು ತಾಲ್ಲೂಕು ಕೇಂದ್ರವಾಗಿದ್ದು, ಸ್ಥಳೀಯವಾಗಿ ಎಪಿಎಂಸಿ ಸ್ಥಾಪನೆ ಮಾಡಬೇಕೆಂದು ಮಂಗಳವಾರ ತಹಶಿಲ್ದಾರ ಮೂಲಕ ಕರ್ನಾಟಕ ಪ್ರಜಾಪರ ವೇದಿಕೆ ತಾಲೂಕ ಘಟಕದ ವತಿಯಿಂದ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.