ಗಜೇಂದ್ರಗಡ: ಪ್ರಾಮಾಣಿಕ ಹಾಗೂ ಪಾರದರ್ಶಕವಾಗಿ ಜನಪರ ಸೇವೆಯಲ್ಲಿ ತೊಡಗಿರುವ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ. ಕುಬೇರಪ್ಪ ಈ ಬಾರಿ ಪಶ್ಚಿಮ ಪದವೀಧರ ಮತದಾರರು ಗೆಲುವು ತಂದು ಕೊಡಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ವೀರಣ್ಣ ಸೊನ್ನದ ವಿಶ್ವಾಸ ವ್ಯಕ್ತಪಡಿಸಿದರು.

ಸಮೀಪದ ರಾಜೂರ ಗ್ರಾಮದಲ್ಲಿ ಪಶ್ಚಿಮ ಪದವೀಧರ ಮತಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ. ಕುಬೇರಪ್ಪ ಪರ ರವಿವಾರ ಮತಯಾಚಿಸಿ ಮಾತನಾಡಿದರು.

ಕಳೆದ ಹಲವು ವರ್ಷಗಳಿಂದ ಧಾರವಾಡದಲ್ಲಿ ಹೈಕೋರ್ಟ ಪೀಠ ಸ್ಥಾಪನೆ, ಧಾರವಾಡ ಜಿಲ್ಲಾ ಒಳಕ್ರೀಡಾಂಗಣ, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿ ರದ್ದು ವಿರುದ್ದ, ವೈದ್ಯಕೀಯ ಪರೀಕ್ಷೆಯಲ್ಲಿನ ಮೌಲ್ಯಾ ಮಾಪನ ಹಗರಣ ದಂತಹ ಕಾನೂನಾತ್ಮಕ ಹೋರಾಟ ಮಾಡಿ ಜನಪರ ಸೇವೆಯಲ್ಲಿ ತೊಡಗಿಸಿಕೊಂಡ ಕುಬೇರಪ್ಪನವರ ಸಾಮಾಜಿಕ ಕಳಕಳಿ ಅನನ್ಯ. ಈ ನಿಟ್ಟಿನಲ್ಲಿ ಅ.28 ರಂದು ನಡೆಯಲಿರುವ ಪಶ್ಚಿಮ ಪದವೀಧರ ಚುನಾವಣೆಯಲ್ಲಿ ಪದವಿ ಮತದಾರರು ಅಧಿಕ ಅಂತರದಿAದ ಜಯದ ಮಾಲೆ ತೊಡಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಶಿಗೇರಿಯಲ್ಲಿ ಸಮೀಪದ ಮುಶಿಗೇರಿ ಮತ್ತು ಶಾಂತಗೇರಿ ಗ್ರಾಮದಲ್ಲಿ ಪಶ್ಚಿವ ಪದವೀಧರ ಮತಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ. ಆರ್.ಎಂ ಕುಬೇರಪ್ಪ ಪರ ಮತಯಾಚನಾ ಸಭೆ ನಡೆಯಿತು. ಈ ವೇಳೆ ಜಿಪಂ ಸದಸ್ಯೆ ಮಂಜುಳಾ ಹುಲ್ಲಣ್ಣವರ, ವೀರಣ್ಣ ಸೊನ್ನದ, ಮುರ್ತುಜಾ ಡಾಲಾಯತ್, ಬಸವರಾಜ ಬಂಕದ, ಶಿವರಾಜ ಘೋರ್ಪಡೆ ಸೇರಿ ಇತರರು ಇದ್ದರು.

ತಾಪಂ ಉಪಾಧ್ಯಕ್ಷ ಶಶಿಧರ ಹೂಗಾರ, ಗಜೇಂದ್ರಗಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ಘೋರ್ಪಡೆ, ಪುರಸಭೆ ಸದಸ್ಯ ರಾಜು ಸಾಂಗ್ಲಿಕಾರ, ಮುರ್ತುಜಾ ಡಾಲಾಯತ್, ಬಸವರಾಜ ಬಂಕದ, ಶ್ರೀಧರ ಬಿದರಳ್ಳಿ, ಎಚ್.ಎಸ್. ಸೋಂಪೂರ, ಅಪ್ಪು ಮತ್ತಿಕಟ್ಟಿ, ಮೋಹನ ಕನಕೇರಿ, ಶರಣಪ್ಪ ಚಳಗೇರಿ, ಶ್ರೀಧರ ಗಂಜಿಗೌಡರ, ಉಮೇಶ ರಾಠೋಡ, ರಾಮಚಂದ್ರ ಹುದ್ದಾರ, ಪ್ರಶಾಂತ್ ರಾಠೋಡ, ಹಸನ ತಟಗಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಶಿರಹಟ್ಟಿ ತಾಲೂಕು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ವಿವರ

ಶಿರಹಟ್ಟಿ ತಾಲೂಕಿನ 14 ಗ್ರಾಮ ಪಂಚಾಯತಿಗಳಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಸೋಮವಾರ ನಿಗದಿಪಡಿಸಿದ ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ಜರುಗಿತು.

ನಿಗಮ-ಮಂಡಳಿ: ಉತ್ತರ ಕರ್ನಾಟಕಕ್ಕೆ ಸಿಂಹಪಾಲು

ಬೆಂಗಳೂರು, ಮೈಸೂರು, ರಾಮನಗರಕ್ಕೆ ಸೊನ್ನೆ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಈ ಸಂದರ್ಭದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಂತೈಸುವ ಭಾಗವಾಗಿ 24 ಶಾಸಕರಿಗೆ ನಿಗಮ-ಮಂಡಳಿ ಗಿಫ್ಟ್ ನೀಡಲಾಗಿದೆ. ಯಾವುದೇ ಮುನ್ಸೂಚನೆ ಇಲ್ಲದೇ ಮುಖ್ಯಮಂತ್ರಿ ಯಡಿಯೂರಪ್ಪ 24 ನಿಗಮ-ಮಂಡಳಿಗಳಿಗೆ ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಚಕಿತಗೊಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಜುಲೈ 31ರ ವರೆಗೆ ಲಾಕ್ ಡೌನ್!

ಕೋಲ್ಕತ್ತಾ : ದೇಶದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಜುಲೈ…

ಸಂಪುಟ ವಿಸ್ತರಣೆಯೋ? ಪುನಾರಚನೆಯೋ? ಎರ್ಡ್ಮೂರು ದಿನದಲ್ಲಿ ತೀರ್ಮಾನ ಅಂದ್ರು ಸಿಎಂ

ಬಹುನಿರೀಕ್ಷಿತ ಮುಖ್ಯಮಂತ್ರಿಗಳ ದೆಹಲಿ ಪ್ರವಾಸದ ಫಲಿತಾಂಶ ಹೊರಬೀಳಲು ಇನ್ನೆರೆಡು ದಿನ ಕಾಯಬೇಕು ಎಂದು ಹೇಳಲಾಗುತ್ತಿದೆ.