ಖಾಂಡ್ವಾ : ಭಾಷಣ ಕೇಳಲು ಬಂದ ರೈತರೊಬ್ಬರು ಹೃದಯಾಘಾತದಿಂದ ಕಣ್ಣೆದುರೇ ಸಾವನ್ನಪ್ಪಿದ್ದರೂ ಬಿಜೆಪಿ ನಾಯಕರು ಭಾಷಣ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ನ. 30ರಂದು ಉಪ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಪ್ರಚಾರ ಸಭೆ ನಡೆದಿತ್ತು.

ಈ ಸಭೆಯಲ್ಲಿ ಬಿಜೆಪಿಯ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಭಾಷಣ ಮಾಡಬೇಕಿತ್ತು. ಈ ಸಂದರ್ಭದಲ್ಲಿಯೇ ಪ್ರಮಾದವೊಂದು ಜರುಗಿ, ರೈತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದರು. ಇದು ತಿಳಿದರೂ ನಾಯಕರು ಮಾತ್ರ ಭಾಷಣ ಮಾಡಿದ್ದಾರೆ.

ಬಿಜೆಪಿಯ ಪಂಧಾನ ಕ್ಷೇತ್ರದ ಶಾಸಕ ರಾಮ್ ಡಾಂಗೊರೆ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಕುರ್ಚಿಯ ಮೇಲೆ ಕುಳಿತಿದ್ದ 80 ವರ್ಷದ ರೈತ ಜೀವನ್ ಸಿಂಗ್ ಎಂಬುವವರು ಅಲ್ಲಿಯೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗುತ್ತಿತ್ತು.

ರೈತ, ಕುಸಿದು ಬೀಳುತ್ತಿದ್ದಂತೆ ಅಕ್ಕ ಪಕ್ಕ ಕುಳಿತಿದ್ದವರೆಲ್ಲರೂ ಗಾಬರಿಯಾಗಿ ಓಡಿದ್ದಾರೆ. ಅಲ್ಲಿನ ಎಲ್ಲ ಕುರ್ಚಿಗಳೂ ಖಾಲಿಯಾದವು. ವ್ಯಕ್ತಿಯೊಬ್ಬರು ಮೃತ ರೈತನ ಮುಖದ ಮೇಲೆ ಟವೆಲ್ ಹೊದಿಸಿದ್ದಾರೆ. ಆದರೆ, ರೈತ ಮೃತಪಟ್ಟಿರುವುದು ತಿಳಿದ ನಂತರವೂ ನಾಯಕರು ಭಾಷಣ ಮುಂದುವರೆಸಿದ್ದರು. 

ಸಿಂಧಿಯಾ ಅವರು ವೇದಿಕೆ ಬರುವುದಕ್ಕೂ ಮುನ್ನ ಈ ಘಟನೆ ಜರುಗಿತ್ತು. ಆನಂತರ ಅವರಿಗೆ ವಿಷಯ ತಲುಪಿಸಲಾಯಿತು. ನಂತರ ಸಿಂಧಿಯಾ, ಒಂದು ನಿಮಿಷದ ಮೌನ ಆಚರಿಸಿ, ಭಾಷಣ ಪ್ರಾರಂಭಿಸಿದರು. 

Leave a Reply

Your email address will not be published. Required fields are marked *

You May Also Like

ಅಬುದಾಬಿಯಿಂದ ರಾಜ್ಯಕ್ಕೆ ಬಂದ 179 ಜನ – ಬೆಂಗಳೂರಿಗರಲ್ಲಿ ಆತಂಕ!

ಕೊರೊನಾ ಲಾಕ್ ಡೌನ್ ನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ 179 ಜನ ಭಾರತೀಯರು ಬೆಂಗಳೂರಿಗೆ ಬಂದಿದ್ದಾರೆ.

ಕೋವಿಡ್ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್ ಸಾಗಾಟ

ಕೊರೊನಾ ಸೋಂಕಿನಿಂದ ಮೃತಪಟ್ಟ 22 ಶವಗಳನ್ನು ಒಂದೇ ಆಂಬುಲೆನ್ಸ್‍ನಲ್ಲಿ ಚಿತಾಗಾರಕ್ಕೆ ಸಾಗಿಸುವಂತಹ ಸನ್ನಿವೇಶ ಮಹಾರಾಷ್ಟ್ರದಲ್ಲಿ ಘಟನೆ ನಡೆದಿದೆ.

ಬುಧವಾರ ಭಾರತಕ್ಕೆ ಬರಲಿವೆ ರಫೇಲ್ ಯುದ್ಧ ವಿಮಾನ: ಸದ್ಯ ಫ್ರಾನ್ಸ್ ಬಿಟ್ಟಿವೆ ಫೈಟರ್ ಜೆಟ್ಸ್

ಸೋಮವಾರ ಫ್ರಾನ್ಸ್ ನಿಂದ ಹೊರಟಿರುವ ಮೊದಲ ಬ್ಯಾಚಿನ ರಫೇಲ್ ಯುದ್ಧ ಫ್ರಾನ್ಸ್ ಬಿಟ್ಟಿರುವ 5 ರಫೇಲ್ ಯುದ್ಧ ವಿಮಾನಗಳು 7 ಸಾವಿರ ಕಿಮೀ ದೂರ ಕ್ರಮಿಸಿ ಬುಧವಾರ ಭಾರತವನ್ನು ತಲುಪಲಿವೆ. ಯುಎಇನಲ್ಲಿರುವ ಫ್ರಾನ್ಸ್ ಏರ್ ಬೇಸ್ ನಲ್ಲಿ ಇಳಿದು ನಂತರ ಭಾರತ ತಲುಪಲಿವೆ. ಎವಿಯೇಷನ್ ಕಂಪನಿ ಡಸಾಲ್ಟ್ ನಿರ್ಮಿಸಿರುವ ಈ ಅತ್ಯಾಧುನಿಕ ಫೈಟರ್ ಜೆಟ್ಸ್ ದಕ್ಷಿಣ ಫ್ರಾನ್ಸಿನ ಬ್ರೊಡಾಕ್ಸ್ ನಗರದಿಂದ ಪ್ರಯಾಣ ಬೆಳೆಸಿವೆ. 2016ರಲ್ಲಿ ಭಾರತವು ಫ್ರಾನ್ಸ್ ಕಂಪನಿ ಡಸಾಲ್ಟ್ ಕಂಪನಿಯಿಂದ ಇಂತಹ 36 ವಿಮಾನಗಳನ್ನು ಖರೀದಿಸಲು 59 ಸಾವಿರ ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿತ್ತು. ಅದರ ಮೊದಲ ಭಾಗವಾಗಿ ಈಗ 5 ವಿಮಾನಗಳು ದೇಶದ ಸೇನೆಯ ಭಾಗವಾಗಲಿವೆ.

ಪ್ರಧಾನಿ ನರೇಂದ್ರ ಮೋದಿ ಅವರ ಸದ್ಯದ ಆಸ್ತಿ ಎಷ್ಟು ಗೊತ್ತಾ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷಕ್ಕಿಂತಲೂ ಈ ವರ್ಷ ಶ್ರೀಮಂತರಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿಯ ಮೌಲ್ಯ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಾಗಿದೆ. ಈ ವರ್ಷ ಅವರ ಆಸ್ತಿಯ ಮೌಲ್ಯ ರೂ. 36 ಲಕ್ಷ ಹೆಚ್ಚಳವಾಗಿದೆ.