ಖಾಂಡ್ವಾ : ಭಾಷಣ ಕೇಳಲು ಬಂದ ರೈತರೊಬ್ಬರು ಹೃದಯಾಘಾತದಿಂದ ಕಣ್ಣೆದುರೇ ಸಾವನ್ನಪ್ಪಿದ್ದರೂ ಬಿಜೆಪಿ ನಾಯಕರು ಭಾಷಣ ಮಾಡಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ನ. 30ರಂದು ಉಪ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ಪ್ರಚಾರ ಸಭೆ ನಡೆದಿತ್ತು.

ಈ ಸಭೆಯಲ್ಲಿ ಬಿಜೆಪಿಯ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ ಅವರು ಭಾಷಣ ಮಾಡಬೇಕಿತ್ತು. ಈ ಸಂದರ್ಭದಲ್ಲಿಯೇ ಪ್ರಮಾದವೊಂದು ಜರುಗಿ, ರೈತರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದರು. ಇದು ತಿಳಿದರೂ ನಾಯಕರು ಮಾತ್ರ ಭಾಷಣ ಮಾಡಿದ್ದಾರೆ.

ಬಿಜೆಪಿಯ ಪಂಧಾನ ಕ್ಷೇತ್ರದ ಶಾಸಕ ರಾಮ್ ಡಾಂಗೊರೆ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಕುರ್ಚಿಯ ಮೇಲೆ ಕುಳಿತಿದ್ದ 80 ವರ್ಷದ ರೈತ ಜೀವನ್ ಸಿಂಗ್ ಎಂಬುವವರು ಅಲ್ಲಿಯೇ ಕುಸಿದು ಬಿದ್ದಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗುತ್ತಿತ್ತು.

ರೈತ, ಕುಸಿದು ಬೀಳುತ್ತಿದ್ದಂತೆ ಅಕ್ಕ ಪಕ್ಕ ಕುಳಿತಿದ್ದವರೆಲ್ಲರೂ ಗಾಬರಿಯಾಗಿ ಓಡಿದ್ದಾರೆ. ಅಲ್ಲಿನ ಎಲ್ಲ ಕುರ್ಚಿಗಳೂ ಖಾಲಿಯಾದವು. ವ್ಯಕ್ತಿಯೊಬ್ಬರು ಮೃತ ರೈತನ ಮುಖದ ಮೇಲೆ ಟವೆಲ್ ಹೊದಿಸಿದ್ದಾರೆ. ಆದರೆ, ರೈತ ಮೃತಪಟ್ಟಿರುವುದು ತಿಳಿದ ನಂತರವೂ ನಾಯಕರು ಭಾಷಣ ಮುಂದುವರೆಸಿದ್ದರು. 

ಸಿಂಧಿಯಾ ಅವರು ವೇದಿಕೆ ಬರುವುದಕ್ಕೂ ಮುನ್ನ ಈ ಘಟನೆ ಜರುಗಿತ್ತು. ಆನಂತರ ಅವರಿಗೆ ವಿಷಯ ತಲುಪಿಸಲಾಯಿತು. ನಂತರ ಸಿಂಧಿಯಾ, ಒಂದು ನಿಮಿಷದ ಮೌನ ಆಚರಿಸಿ, ಭಾಷಣ ಪ್ರಾರಂಭಿಸಿದರು. 

Leave a Reply

Your email address will not be published. Required fields are marked *

You May Also Like

ಬುಹದೊಡ್ಡ ಸೈಕಲ್ ತಯಾರಿಕಾ ಘಟಕ ಸ್ಥಗಿತ!

ಪ್ರತಿಷ್ಠಿತ ಸೈಕಲ್ ತಯಾರಿಕಾ ಕಂಪನಿ ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ಸ್ಥಗಿತಗೊಂಡಿದೆ.

ನಾಲ್ಕ ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ!

ನವದೆಹಲಿ : ನಾಲ್ಕು ಚಕ್ರದ ಎಲ್ಲ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಸದ್ಯದ ಆಸ್ತಿ ಎಷ್ಟು ಗೊತ್ತಾ?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ವರ್ಷಕ್ಕಿಂತಲೂ ಈ ವರ್ಷ ಶ್ರೀಮಂತರಾಗಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಆಸ್ತಿಯ ಮೌಲ್ಯ ಕಳೆದ ವರ್ಷಕ್ಕಿಂತಲೂ ಈ ವರ್ಷ ಹೆಚ್ಚಾಗಿದೆ. ಈ ವರ್ಷ ಅವರ ಆಸ್ತಿಯ ಮೌಲ್ಯ ರೂ. 36 ಲಕ್ಷ ಹೆಚ್ಚಳವಾಗಿದೆ.

ಆಸ್ಪ್ರೇಲಿಯಾದಲ್ಲಿ ಇಲಿ ಹಾವಳಿಯಂತೆ: ಪಾಷಾಣಕ್ಕಾಗಿ ಭಾರತಕ್ಕೆ ಆರ್ಡರ್

ಸಿಡ್ನಿ: ಆಸ್ಟೇಲಿಯಾದಲ್ಲಿ ಇಲಿಗಳ ಹಾವಳಿಯಿಂದ 5 ಸಾವಿರ ಕೋಟಿ ರೂಪಾಯಿ ಮೌಲ್ಯದ ಬೆಳೆ ನಾಶವಾಗಿದೆಯಂತೆ! ಆಸ್ಟ್ರೇಲಿಯಾ ಪೂರ್ವದ 3 ರಾಜ್ಯಗಳ ಮೇಲೆ ಲಕ್ಷಾಂತರ ಸಂಖ್ಯೆಯಲ್ಲಿ ಇಲಿಗಳು ದಾಳಿ ಮಾಡುತ್ತಿದ್ದು, ಸಾವಿರಾರು ಕೋಟಿ ಮೌಲ್ಯದ ಕೃಷಿ ಉತ್ಪನ್ನಗಳನ್ನ ಇಲಿಗಳು ತಿಂದುಹಾಕಿವೆ.