ಭೋಪಾಲ್: ಮಧ್ಯಪ್ರದೇಶದ ಸಚಿವೆ ಇಮರ್ತಿ ದೇವಿ ಅವರನ್ನು ಮಾಜಿ ಸಿಎಂ ಅಧ್ಯಕ್ಷ ಕಮಲ್ ನಾಥ್ ಅವರು ಐಟಮ್ ಎಂದು ಕರೆದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಇಮರ್ತಿ ದೇವಿ ಅವರು, ಶಿವರಾಜ್ ಸಿಂಗ್ ಚವ್ಹಾಣ್ ಅವರ ನೇತೃತ್ವದ ಸರ್ಕಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು, ಗ್ವಾಲಿಯರ್ ನ ದಬ್ರಾ ಕ್ಷೇತ್ರದಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು. ಈಗ ಅದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದಾರೆ.

ಕಮಲ್ ನಾಥ್ ನೇತೃತ್ವದ ಸರ್ಕಾರವಿದ್ದ ಸಂದರ್ಭದಲ್ಲಿ ಕೂಡ ಇಮರ್ತಿ ದೇವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಆದರೆ, ಸದ್ಯ ಕಮಲ್ ನಾಥ್ ಅವರ ಸರ್ಕಾರ ಬಿದ್ದು ಹೋಗಿದೆ.

ಉಪಚುನಾವಣೆಯ ಹಿನ್ನೆಲೆಯಲ್ಲಿ ದಬ್ರಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸುರೇಶ್ ರಾಜೆ ಅವರ ಪರ ಮತ ಯಾಚನೆ ಮಾಡುತ್ತಿದ್ದ ಸಂದರ್ಭದಲ್ಲಿ ಕಮಲ್ ನಾಥ್, ನಮ್ಮ ಅಭ್ಯರ್ಥಿ ಸುರೇಶ್ ರಾಜೆ ಸರಳ ಮನುಷ್ಯ, ಆಕೆಯಂಥಹ ವ್ಯಕ್ತಿತ್ವ ಇಲ್ಲ. ಆಕೆಯ ಹೆಸರೇನು, ನಿಮಗೆಲ್ಲಾ ಆಕೆಯ ಬಗ್ಗೆ ನನಗಿಂತ ಚೆನ್ನಾಗಿ ಗೊತ್ತಿದೆ. ನೀವೆಲ್ಲಾ ನನಗೆ ಮೊದಲೇ ಎಚ್ಚರಿಕೆ ನೀಡಬೇಕಾಗಿತ್ತು, ಎಂತಹ ಐಟಮ್ ಎಂದು ಹೇಳಿದ್ದಾರೆ.

ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕರೊಬ್ಬರು ಹಾಗೂ ಸಿಎ ಸ್ಥಾನದಲ್ಲಿ ಇದ್ದು ಬಂದವರು ಈ ರೀತಿಯ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ನಿಯೋಗವು ಭೋಪಾಲ್ ನಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಮಹಿಳೆ ಮತ್ತು ದಲಿತರ ವಿರುದ್ಧ ಕಮಲ್ ನಾಥ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ದೂರು ನೀಡಿದ್ದಾರೆ. 

Leave a Reply

Your email address will not be published. Required fields are marked *

You May Also Like

ಅಗಸ್ಟ್ 3 ಅಥವಾ 5ಕ್ಕೆ ರಾಮ ಮಂದಿರ ಭೂಮಿಪೂಜೆ

‘ಅಗಸ್ಟ್ 3 ಅಥವಾ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಲಾಗಿಸುವುದು. ಪ್ರಧಾನಮಂತ್ರಿಯೇ ಇದನ್ನು ಮಾಡಬೇಕೆಂದು ಟ್ರಸ್ಟ್ ಅಭಿಲಾಷೆಯಾಗಿದ್ದು, ಅವರಿಗೆ ಆಹ್ವಾನ ನೀಡಿದ್ದೇವೆ ಎಂದು ನಿರ್ಮಾಣದ ಜವಾಬ್ದಾರಿ ಪಡೆದಿರುವ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.

ರೆಮ್ ಡೆಸಿವರ್ ಹಂಚಿಕೆಯಲ್ಲಿ 16 ಲಕ್ಷ ಹೆಚ್ಚಿಸಿದ ಕೇಂದ್ರ ಇಲ್ಲಿದೇ ಮಾಹಿತಿ

ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಈಚೆಗೆ ನಡೆದ ವಿಡಿಯೋ ಸಂವಾದದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ದೇಶದಲ್ಲಿ ಎ.30ರ ವರೆಗೆ ಒಟ್ಟು 16 ಲಕ್ಷ ರೆಮ್ ಡೆಸಿವಿರ್ ಔಷಧಿಯನ್ನು ಹಂಚಿಕೆಯಲ್ಲಿ ಹೆಚ್ಚಿಸಿದ್ದಾರೆ.

ಕಾಂಗ್ರೆಸ್ ನ ಬಂಡೆಗೆ ನಮ್ಮ ಡೈನಾಮೈಟ್ ಗಳು ಉತ್ತರ ನೀಡಲಿವೆ – ಕಟೀಲ್!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗುಡುಗಿದ್ದಾರೆ.

ಬೆಳಹೋಡ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ದಾವಲಸಾಬ್ ಹಿತ್ತಲಮನಿ ಆಯ್ಕೆ

ಉತ್ತರಪ್ರಭ ಸುದ್ದಿ ಗದಗ: ತಾಲೂಕಿನ ಬೆಳಹೋಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ…