ಗದಗ: ನಿರುದ್ಯೋಗಿ ಪದವೀಧರರಿಗೆ ಉದ್ಯೋಗ ದೊರಕುವವರೆಗೆ ನಿರುದ್ಯೋಗ ಭತ್ಯೆ ನೀಡಲು ನಾನು ಒತ್ತಾಯಿಸುತ್ತೇನೆ ಎಂದು ಪಶ್ಚಿಮ ಪದವಿಧರ ಕ್ಷೇತ್ರದ ಕೆ.ಆರ್.ಎಸ್ ಅಬ್ಯರ್ಥಿ ಶಿವರಾಜ್ ಕಾಂಬಳೆ ಹೇಳಿದರು.

ಅವರು ಗದಗ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.
ಸಾಕಷ್ಟು ಪದವಿಧರರು ಕೆಲಸವಿಲ್ಲದೇ ನಿರುದ್ಯೋಗಿಗಳಾಗಿದ್ದಾರೆ. ಈ ನಿಟ್ಟಿನಲ್ಲಿ ನಿರುದ್ಯೋಗಿಗಳು ಉದ್ಯೋಗಿಗಳು ಆಗುವವರೆಗೆ ಭತ್ಯೆ ನೀಡಬೇಕು ಎನ್ನುವುದು ನನ್ನ ಪ್ರಥಮ ಆದ್ಯತೆ. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ(ಕೆ.ಆರ್.ಎಸ್) ಅಬ್ಯರ್ಥಿಯಾಗಿ ನಾನು ಸ್ಪರ್ಧಿಸಿದ್ದೇನೆ.

ಜನಪರ ಕಾರ್ಯ ಮಾಡಬೇಕು ಎನ್ನುವ ಉದ್ದೇಶದಿಂದ ಪದವಿಧರ ಕ್ಷೇತ್ರ ಆಯ್ಕೆ ಮಾಡಿಕೊಂಡಿದ್ದೇನೆ. ಪದವಿಧರರ ಸಮಸ್ಯೆಗಳನ್ನು ನಾನು ತೀರಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ಮುಖ್ಯವಾಗಿ ನಾನು ಕೂಡ ನಿರುದ್ಯೋಗಿ ಪದವಿಧರನಾಗಿದ್ದು, ಸರ್ಕಾರದಿಂದ ಈ ಕ್ಷೇತ್ರಕ್ಕೆ ಆಗುತ್ತಿರುವ ನಿರ್ಲಕ್ಷ್ಯ ಹೋಗಲಾಡಿಸುವ ಮೂಲಕ ಪದವಿಧರರಿಗೆ ಉದ್ಯೋಗ ಸೃಷ್ಟಿ ಮಾಡುವ ಕೆಲಸ ಮಾಡಬೇಕು ಎನ್ನುವ ಬಯಕೆ ನನ್ನದು ಎಂದರು.

ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ.80 ರಷ್ಟು ಉದ್ಯೋಗ ನೀಡಬೇಕೆಂಬ ನಿಯಮ ಜಾರಿಗೆ ತರಲು ಹಾಗೂ ಸ್ವಯಂ ಉದ್ಯೋಗ ಮತ್ತು ಕರಕುಶಲ ಉದ್ಯೋಗಕ್ಕೆ ಬೇಕಾದ ಪೂರಕ ಸಾಲ ಮತ್ತು ತರಬೇತಿ ನೀಡಿ ನಿರುದ್ಯೋಗ ಹೋಗಲಾಡಿಸಲು ಯತ್ನಿಸುತ್ತೆನೆ ಎಂದು ಭರವಸೆ ನೀಡಿದರು.

ನಾನು ಕೂಡ 20 ವರ್ಷ ವಾಟರಮನ್ ಮತ್ತು ಸೆಕ್ಯೂರಿಟಿ ಕೆಲಸ ಮಾಡಿ ಕೆಳಹಂತದಿಂದ ಬಂದಿರುವುದರಿಂದ ನಿರುದ್ಯೋಗ ಸಮಸ್ಯೆಯನ್ನು ಗಮನಿಸಿದ್ದೆನೆ. ಈಗಾಗಲೇ 2 ವರ್ಷಗಳಿಂದ ಪದವೀದರರ ಜೋತೆ ನಿರಂತರ ಸಂಪರ್ಕದಲ್ಲಿದ್ದೆನೆ, ವಿಧಾನ ಪರಿಷತ ಚುನಾವಣೆಯಲ್ಲಿ ಜಯಗಳಿಸಿದರೆ ಪ್ರಾಮಾಣಿಕ ಕೆಲಸ‌ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಇಂದಿರಾ ಬಂಕಾಪೂರ, ರವಿ ಒಡೆಯರ ಇದ್ದರು.

Leave a Reply

Your email address will not be published. Required fields are marked *

You May Also Like

ಎಂಇಎಸ್ ಗೆ ಖಡಕ್ ವಾರ್ನಿಂಗ್…ಬೆಳಗಾವಿಯಲ್ಲಿ ಹೈ ಅಲರ್ಟ್!

ಬೆಳಗಾವಿ : ರಾಜ್ಯದಲ್ಲಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಬೆಳಗಾವಿ ಜಿಲ್ಲೆ ಕೂಡ ಹೊರತಾಗಿಲ್ಲ. ಆದರೆ, ಕನ್ನಡ ಹಬ್ಬ ಆಚರಿಸುವ ಬದಲಾಗಿ ಕರಾಳ ದಿನಾಚರಣೆ ಆಚರಿಸಲು ಮುಂದಾಗಿದ್ದ ಎಂಇಎಸ್‍ ಗೆ ಮುಖ ಭಂಗವಾಗಿದೆ.

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ಕೊರೊನಾ ಕಾರಣ: ಗದಗ ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ ಝೋನ್) ವಿವರ

ಕೊರೊನಾ ಕಾರಣ: ಗದಗ ಜಿಲ್ಲೆಯಲ್ಲಿ ನಿಯಂತ್ರಿತ ಪ್ರದೇಶ(ಕಂಟೇನ್ಮೆಂಟ ಝೋನ್) ವಿವರ

ರಾಜ್ಯದಲ್ಲಿ ಇನ್ನೆಷ್ಟು ದಿನ ಲಾಕ್ ಡೌನ್?

ಬಹುತೇಕರು ಲಾಕ್ ಡೌನ್ ಯಾವಾಗ ಮುಕ್ತಾಯವಾಗುತ್ತದೆ? ಅಥವಾ ಮುಂದುವರೆಯುತ್ತಾ? ಒಂದು ವೇಳೆ ಮುಂದುವರೆದರೆ ಏನೆಲ್ಲ ಸಡಿಲಿಕೆ ಇರುತ್ತೆ ಎನ್ನುವ ಬಗ್ಗೆ ಸರ್ಕಾರದ ಆದೇಶಕ್ಕಾಗಿ ಜನಸಾಮಾನ್ಯರು ಎದುರು ನೋಡುತ್ತಿದ್ದರು. ಇದೀಗ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ.