ರೋಣ: ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.

ತಾಲೂಕಾ ರೈತ ಸಂಘ, ಕರ್ನಾಟಕ ರಾಜ್ಯ ರಕ್ಷಣಾ ಸಮಿತಿ ಹಾಗೂ ಡಿ.ಎಸ್.ಎಸ್ ಸಂಘನೆಗಳಿಂದ ರಾಯಣ್ಣ ಪುತ್ಥಳಿ ತೆರುವುಗೊಳಿಸಿದ ಕ್ರಮ ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಇಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕೂಡಲೇ ಕ್ರಮಕೈಗೊಂಡು, ಪುತ್ಥಳಿ ಅದೇ ಸ್ಥಳದಲ್ಲಿ ಪುನಃ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ರಾಜ್ಯಾಧ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುತ್ತು ಕುರಿ, ಬಸವರಾಜ ನೀಲಗಾರ, ರವಿ ಕೊಪ್ಪದ, ಸಂತೋಷ ಕಡಿವಾಲ, ಹನಮಂತ ಚಲವಾದಿ ಮುತ್ತು ನಂದಿ, ಬಿ.ವಿ.ರಡ್ಡೇರ, ಆರ್.ಎಲ್.ಕರಿಯಣ್ಣವರ, ನಾಗರಾಜ ಮಾಲಿಪಾಟೀಲ್, ರಾಖೇಶ್ ಪಾಟೀಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಕಾಂಗ್ರೆಸ್ ಸೇರಲು ವರ್ತೂರು ಪ್ರಕಾಶ್ ತೀರ್ಮಾನ

ಬೆಂಬಲಿಗರು ಹಾಗೂ ಕಾರ್ಯಕರ್ತರ ಒತ್ತಾಯದಂತೆ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದು, ಈಗಾಗಲೇ ಆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿದ್ದೇನೆ. ಸದ್ಯದಲ್ಲೇ ಅಂತಿಮ ನಿರ್ಧಾರವಾಗಲಿದೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.

ಅಧಿಕಾರಿಗಳ ಆತುರ: ನರೆಗಲ್ಲನಲ್ಲಿ ಅನಾಥವಾದ ಉದ್ಯಾನವನ..!

ಗದಗ ಜಿಲ್ಲೆಯ ನರೇಗಲ್ಲ ನಲ್ಲಿ ಅಧಿಕಾರಿಗಳ ಆತುರದ ನಿರ್ಧಾರದಿಂದ ಉದ್ಯಾನವನ ಇದ್ದು ಇಲ್ಲದಂತಾಗಿದೆ.

ಹುಚ್ಚ ವೆಂಕಟ್ ಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್!

ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ.…

ಹಳಿ ತಪ್ಪಿದ ನಿಯಂತ್ರಣ: ರಾಜ್ಯದಲ್ಲಿಂದು 2798 ಪಾಸಿಟಿವ್!

ಬೆಂಗಳೂರು: ರಾಜ್ಯದಲ್ಲಿಂದು 2798 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 36216…