ರೋಣ: ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.

ತಾಲೂಕಾ ರೈತ ಸಂಘ, ಕರ್ನಾಟಕ ರಾಜ್ಯ ರಕ್ಷಣಾ ಸಮಿತಿ ಹಾಗೂ ಡಿ.ಎಸ್.ಎಸ್ ಸಂಘನೆಗಳಿಂದ ರಾಯಣ್ಣ ಪುತ್ಥಳಿ ತೆರುವುಗೊಳಿಸಿದ ಕ್ರಮ ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಇಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕೂಡಲೇ ಕ್ರಮಕೈಗೊಂಡು, ಪುತ್ಥಳಿ ಅದೇ ಸ್ಥಳದಲ್ಲಿ ಪುನಃ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ರಾಜ್ಯಾಧ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುತ್ತು ಕುರಿ, ಬಸವರಾಜ ನೀಲಗಾರ, ರವಿ ಕೊಪ್ಪದ, ಸಂತೋಷ ಕಡಿವಾಲ, ಹನಮಂತ ಚಲವಾದಿ ಮುತ್ತು ನಂದಿ, ಬಿ.ವಿ.ರಡ್ಡೇರ, ಆರ್.ಎಲ್.ಕರಿಯಣ್ಣವರ, ನಾಗರಾಜ ಮಾಲಿಪಾಟೀಲ್, ರಾಖೇಶ್ ಪಾಟೀಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಶೋಭಾ ಕರಂದ್ಲಾಜೆ ವಿರುದ್ಧ ಮುಗಿ ಬಿದ್ದ ಕಾಂಗ್ರೆಸ್ ಮಹಿಳೆಯರು!

ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ಅವರು ಹಗುರವಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕೆ ಕಾಂಗ್ರೆಸ್ ಪಕ್ಷದ ನಾಯಕಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುರಿ ಮತ್ತು ಮೇಕೆಗಳ ಅನುಗ್ರಹ ಯೋಜನೆ ಮುಂದುವರೆಸಲು ಮನವಿ

ಕುರಿಗಾರರಿಗೆ ಅನುಕೂಲಕರವಾಗಿದ್ದ ಅನುಗ್ರಹ ಯೋಜನೆಯನ್ನು ಮುಂದುವರೆಸಬೇಕು. ಜೊತೆಗೆ ಯೋಜನೆಯಡಿ ಬಾಕಿ ಇರುವ ಇರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಯುವ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಗದಗ ಜಿಲ್ಲೆಯಲ್ಲಿಂದು 99 ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಕೂಡ 99 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಈವರೆಗೆ…

ಪೆಟ್ರೋಲ್ ಟ್ಯಾಕ್ಸ ಇಳಿಸಿದ ಸರ್ಕಾರ

ಪೆಟ್ರೋಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡು ಪ್ರತಿ ಲೀ. ದರ 100 ರು ಗಡಿ ದಾಟಿದ್ದು, ವಾಹನ ಸವಾರರ ಆಕ್ರೋಶಕ್ಕೆ ಮಣಿದ ರಾಜಸ್ಥಾನ ಸರ್ಕಾರವು ತೆರಿಗೆ ಇಳಿಕೆ ಮಾಡಿದೆ.