ರೋಣ: ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.

ತಾಲೂಕಾ ರೈತ ಸಂಘ, ಕರ್ನಾಟಕ ರಾಜ್ಯ ರಕ್ಷಣಾ ಸಮಿತಿ ಹಾಗೂ ಡಿ.ಎಸ್.ಎಸ್ ಸಂಘನೆಗಳಿಂದ ರಾಯಣ್ಣ ಪುತ್ಥಳಿ ತೆರುವುಗೊಳಿಸಿದ ಕ್ರಮ ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಇಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕೂಡಲೇ ಕ್ರಮಕೈಗೊಂಡು, ಪುತ್ಥಳಿ ಅದೇ ಸ್ಥಳದಲ್ಲಿ ಪುನಃ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ರಾಜ್ಯಾಧ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುತ್ತು ಕುರಿ, ಬಸವರಾಜ ನೀಲಗಾರ, ರವಿ ಕೊಪ್ಪದ, ಸಂತೋಷ ಕಡಿವಾಲ, ಹನಮಂತ ಚಲವಾದಿ ಮುತ್ತು ನಂದಿ, ಬಿ.ವಿ.ರಡ್ಡೇರ, ಆರ್.ಎಲ್.ಕರಿಯಣ್ಣವರ, ನಾಗರಾಜ ಮಾಲಿಪಾಟೀಲ್, ರಾಖೇಶ್ ಪಾಟೀಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡದಲ್ಲಿ ಅಭಿಮಾನಿ ಬಳಗದಿಂದ ರಾಜ್ ಜನ್ಮದಿನ

ನಟ ಸಾರ್ವಭೌಮ ಡಾ.ರಾಜಕುಮಾರ ನಾಡು, ನುಡಿ, ನೆಲ, ಜಲ, ಸಂಸ್ಕೃತಿ ಭಾಷಾಭಿಮಾನ ಮೆರೆಯುವ ಮೂಲಕ ಕನ್ನಡಿಗರ ಮನದಲ್ಲಿ ಶಾಶ್ವತವಾಗಿನೆಲೆಯೂರಿದ್ದಾರೆ. ಈ ನಿಟ್ಟಿನಲ್ಲಿ ಮೇರು ನಟನ ಆದರ್ಶಗಳನ್ನು ಅಜರಾಮವಾಗಿರಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ ಎಂದು ಡಾ.ರಾಜುಕುಮಾರ ಅಭಿಮಾನಿ ಬಳಗ ಅಧ್ಯಕ್ಷ ಸಂಗಪ್ಪ ಯಲಬುಣಚಿ ಹೇಳಿದರು.

ನಾಗಾವಿ ತಾಂಡದಲ್ಲಿ ಜಲಜೀವನ ಯೋಜನೆಗೆ ಚಾಲನೆ

ತಾಲೂಕಿನ ನಾಗಾವಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗಾವಿ ತಾಂಡದಲ್ಲಿ ಹಾಗೂ ಬಿಂಕದಕಟ್ಟಿ, ಮಲ್ಲಸಮುದ್ರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಭಾನುವಾರ ಶಾಸಕ ಎಚ್.ಕೆ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು.

ಅಗಸ್ಟ್ ಮೊದಲ ವಾರ ಎಸ್ಎಸ್ಎಲ್ಸಿ ಫಲಿತಾಂಶ

ಅಗಸ್ಟ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಸೋಮವಾರ ಬೆಂಗಳೂರಿನ ವಿವಿಧ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಻ವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯಾದ್ಯಂತ 220 ಕೇಂದ್ರಗಳಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದ್ದು, ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಮುಗಿದಿದೆ ಎಂದರು.

ಬೆಂಗಳೂರಿನತ್ತ ಮುಖ ಮಾಡಿದ ಜನರು!

ಬೆಂಗಳೂರು: ಲಾಕ್ ಡೌನ್ ಆರಂಭವಾಗುತ್ತಿದ್ದಂತೆ ಬೆಂಗಳೂರಿನಿಂದ ಕಾಲ್ಕಿತ್ತ ಜನರು ಸದ್ಯ ಮತ್ತೆ ನಗರದತ್ತ ಮುಖ ಮಾಡುತ್ತಿದ್ದಾರೆ.…