ರೋಣ: ಸ್ವಾತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಪುತ್ಥಳಿ ತೆರವುಗೊಳಿಸಲು ಪೊಲೀಸ್ ಇಲಾಖೆ ಬಳಸಿಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಮ್ಮ ಅಧಿಕಾರ ದರ್ಪ ತೋರಿದ್ದಾರೆ ಎಂದು ರೈತ ಸಂಘದ ತಾಲೂಕಾಧ್ಯಕ್ಷ ಮುತ್ತು ಕುರಿ ಆರೋಪಿಸಿದರು.

ತಾಲೂಕಾ ರೈತ ಸಂಘ, ಕರ್ನಾಟಕ ರಾಜ್ಯ ರಕ್ಷಣಾ ಸಮಿತಿ ಹಾಗೂ ಡಿ.ಎಸ್.ಎಸ್ ಸಂಘನೆಗಳಿಂದ ರಾಯಣ್ಣ ಪುತ್ಥಳಿ ತೆರುವುಗೊಳಿಸಿದ ಕ್ರಮ ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಇಂದು ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಕೂಡಲೇ ಕ್ರಮಕೈಗೊಂಡು, ಪುತ್ಥಳಿ ಅದೇ ಸ್ಥಳದಲ್ಲಿ ಪುನಃ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ರಾಜ್ಯಾಧ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮುತ್ತು ಕುರಿ, ಬಸವರಾಜ ನೀಲಗಾರ, ರವಿ ಕೊಪ್ಪದ, ಸಂತೋಷ ಕಡಿವಾಲ, ಹನಮಂತ ಚಲವಾದಿ ಮುತ್ತು ನಂದಿ, ಬಿ.ವಿ.ರಡ್ಡೇರ, ಆರ್.ಎಲ್.ಕರಿಯಣ್ಣವರ, ನಾಗರಾಜ ಮಾಲಿಪಾಟೀಲ್, ರಾಖೇಶ್ ಪಾಟೀಲ್ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You May Also Like

ಗದಗ, ಶಿರಹಟ್ಟಿ, ರೋಣ, ಮುಂಡರಗಿ ಸೇರಿ 19ಪಾಸಿಟಿವ್, ಗದಗನಲ್ಲೇ ಅತಿ ಹೆಚ್ಚು

ಗದಗ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರಲ್ಲಿ ಗದಗ ತಾಲೂಕಿನಲ್ಲಿಯೇ ಹೆಚ್ಚು ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಶಿರಹಟ್ಟಿ ಪಟ್ಟಣ ಪಂಚಾಯ್ತಿಗೆ ಅವಿರೋಧ ಆಯ್ಕೆ: ಪರಮೇಶ ಅಧ್ಯಕ್ಷ, ಇಸಾಕ ಉಪಾಧ್ಯಕ್ಷ

ಸ್ಥಳೀಯ ಪಟ್ಟಣ ಪಂಚಾಯ್ತಿ ಚುನಾವಣೆ ನಡೆದು 23 ತಿಂಗಳ ನಂತರ ಶನಿವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾದವು.

ತಹಸೀಲ್ದಾರ್ ಆದೇಶಕ್ಕೆ ಕಿಂಚಿತ್ತೂ ಬೆಲೆ ಇಲ್ಲ

ನಗರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ಸೂತ್ತಲೂ ಬ್ಯಾರಿಕೇಡ್ ಹಾಗೂ ಸ್ಯಾನಿಟೈಸರ್ ಸಿಂಪಡಿಸಲು ತಾಲೂಕು ದಂಡಾಧಿಕಾರಿಗಳು ಆದೇಶಿಸಿದ್ದರು. ಆದರೆ, ಪೊಲೀಸ್ ಇಲಾಖೆ ಹಾಗೂ ಪುರಸಭೆ ಅಧಿಕಾರಿಗಳು ಮಾತ್ರ ತಾಲೂಕು ದಂಡಾಧಿಕಾರಿಗಳ ಆದೇಶಕ್ಕೆ ಬೆಲೆ ಕೊಡದೇ ನಿರ್ಲಕ್ಷ್ಯವಹಿಸಿದ್ದಾರೆ.

ಆಲಮಟ್ಟಿಯ ಮರಿಮಟ್ಟಿಯಲ್ಲಿ ಜಾನಪದ ಕಲಾವಿದರಿಗೆ ಬಟ್ಟೆ ವಿತರಣಾ ಸಮಾರಂಭ ಜರುಗಿತು

ಉತ್ತರಪ್ರಭಆಲಮಟ್ಟಿ: ಜಾನಪದ ಕಲೆಗಳು ನಮ್ಮ ಪರಂಪರೆಯ ಜೀವಾಳವಾಗಿದ್ದು ಅವು ಮೌಲ್ಯಾಧಾರಿತ ಸಂಸ್ಕೃತಿಯ ಪ್ರತೀಕವಾಗಿವೆ, ಎಂದು ಕನ್ನಡ…