ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರಾಗಿಣಿ ಹಾಗೂ ಸಂಜನಾಗೆ ಬೇಲ್ ಕೊಡದಿದ್ದರೆ, ಬಾಂಬ್ ಹಾಕುತ್ತೇವೆ ಎಂದು ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. 

ರಾಗಿಣಿ ಮತ್ತು ಸಂಜನಾಗೆ ಜಾಮೀನು ನೀಡದೆ ಇದ್ದರೆ, ಸಿಟಿ ಸಿವಿಲ್ ಕೋರ್ಟ್ ಮತ್ತು ಕಮೀಷನರ್ ಆಫೀಸಿಗೆ ಬಾಂಬ್ ಹಾಕುತ್ತೇವೆ ಎಂಬ ಬೆದರಿಕೆ ಪತ್ರವೊಂದು ಬಂದಿತ್ತು. ಈ ಪತ್ರವನ್ನು ಸಿಟಿ ಸಿವಿಲ್ ಕೋರ್ಟ್ ಜಡ್ಜ್, ಕಮೀಷನರ್ ಕಮಲ್ ಪಂಥ್, ಜಂಟಿ ಪೊಲೀಸ್ ಆಯುಕ್ತ, ಸಂದೀಪ್ ಪಾಟೀಲ್ ಮತ್ತು ಡಿಸಿಪಿ ರವಿಕುಮಾರ ಅವರಿಗೆ ಬರೆಯಲಾಗಿತ್ತು. 

ಪತ್ರ ಕಳುಹಿಸಿದ್ದ ವ್ಯಕ್ತಿ, ಪತ್ರದೊಂದಿಗೆ ವ್ಯಕ್ತಿಯೊಬ್ಬರ ವೋಟರ್ ಐಡಿ ಮತ್ತು ಎರಡು ಮೊಬೈಲ್ ನಂಬರ್ ಕಳುಹಿಸಿದ್ದ. ವೋಟರ್ ಐಡಿ ಕೊಡಿಯಳ್ಳಿ ಪಂಚಾಯತ್, ಹರಿವೇಸಂದ್ರ ಗ್ರಾಮದ ಶಿವಪ್ರಕಾಶ್ ಎಂಬ ಹೆಸರಿನಲ್ಲಿ ಪತ್ರ ಬಂದಿತ್ತು. ಎನ್‍ ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಪತ್ರ ಬಂದಿದ್ದು, ನಟಿ ಸಂಜನಾ ಮತ್ತು ರಾಗಿಣಿಗೆ ಜಾಮೀನು ನೀಡಬೇಕು. ಇಲ್ಲವಾದಲ್ಲಿ ಕಾರು ಉಡಾಯಿಸುತ್ತೇವೆ ಎಂದು ಹೇಳಲಾಗಿತ್ತು.

ಸಿಸಿಬಿ ಡಿಸಿಪಿ ರವಿಕುಮಾರ್ ಮತ್ತು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರಿಗೆ ಬಂದ ಪತ್ರದಲ್ಲಿ ಡ್ರಗ್ ಕೇಸ್ ಹಾಗು ಡಿಜೆ ಹಳ್ಳಿ ಕೇಸ್ ತನಿಖೆ ನಿಲ್ಲಿಸದಿದ್ದರೆ ಸರಿ ಇರುವುದಿಲ್ಲ ಎಂದು ಎಚ್ಚರಿಸಲಾಗಿತ್ತು. 

Leave a Reply

Your email address will not be published. Required fields are marked *

You May Also Like

ಸರಕಾರ ಮಂಜಪ್ಪ ಹಡೇ೯ಕರ ಉತ್ಸವ ಆಚರಿಸಲಿ- ಶಂಕರ ಜಲ್ಲಿ

ಆಲಮಟ್ಟಿ : ಅನ್ನದಾಸೋಹ, ಖಾದಿಧಾರಿ, ಪತ್ರಕರ್ತ, ಸಂಪಾದಕರಾಗಿ ಸ್ವಾತಂತ್ರ್ಯ ಚಳುವಳಿಯಲ್ಲಿ ವಿಶೇಷ ಕೊಡುಗೆ ನೀಡಿದ ಅನರ್ಘ್ಯ…

ಯಾವ ಜಿಲ್ಲೆಯ ಪೊಲೀಸರಿಗೆ ಕೊರೊನಾ ಬರುವುದಿಲ್ಲವೋ ಆ ಜಿಲ್ಲೆಯೇ ಗ್ರೀನ್ ಜೋನ್!

ಕೊರೊನಾ ಸೋಂಕು ತಡೆಗಟ್ಟುವಲ್ಲಿ ಜಿಲ್ಲೆಯ ಪೊಲೀಸರು ಮಾದರಿಯಾಗಿದ್ದಾರೆ ಎಂದು ಡಿಜಿ – ಐಜಿಪಿ ಪ್ರವೀಣ್ ಸೂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಶಾಸಕ ಶರತ್ ಬಚ್ಚೇಗೌಡ ಕೈ ಸೇರಲು ಮುಹೂರ್ತ ಫಿಕ್ಸ್!

ಪಕ್ಷೇತರರಾಗಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಶಾಸಕ ಶರತ್ ಬಚ್ಚೇಗೌಡ, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ದಿನಾಂಕ ಫಿಕ್ಸ್ ಆಗಿದೆ. ಇದೇ ತಿಂಗಳ 25ರಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ.