ಬೆಂಗಳೂರು : ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳಪೆ ಪ್ರದರ್ಶನ ತೋರುತ್ತಿರುವುದಕ್ಕೆ ಭಾರೀ ಟೀಕೆಗಳು ವ್ಯಕ್ತವಾಗುತ್ತಿವೆ.

ಪ್ರಸಕ್ತ ಸಾಲಿನ ಐಪಿಎಲ್ ನಲ್ಲಿ ಕನಿಷ್ಠ ಮೊತ್ತ ದಾಖಲಿಸುವ ಮೂಲಕ ತಾನು ಆಡಿದ 10ನೇ ಪಂದ್ಯದಲ್ಲಿಯೂ ಚೆನ್ನೈ ಸೂಪರ್ ಕಿಂಗ್ಸ್‌, ಪಾಯಿಂಟ್ಸ್ ಟೇಬಲ್‌ ಕೊನೆಯ ಸ್ಥಾನದಲ್ಲಿದೆ. ಈ ಸಾಲಿನಲ್ಲಿ ಕೇವಲ ಮೂರು ಪಂದ್ಯಗಳನ್ನು ಮಾತ್ರ ಗೆದ್ದು, 7 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಅಷ್ಟೇ ಅಲ್ಲದೇ, ಹೀನಾಯ ಪ್ರದರ್ಶನ ತೋರಿದ ತಂಡಗಳಲ್ಲಿ ಒಂದಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್, ಚೆನ್ನೈ ತಂಡದ ಪ್ರದರ್ಶನಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಏಳು ವಿಕೆಟ್‌ ಗಳ ಹೀನಾಯ ಸೋಲು ಕಂಡಿದೆ. ಇದರಿಂದಾಗಿ ಅಭಿಮಾನಿಗಳು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ನಾವು ಮೊದಲ ವರ್ಷವನ್ನು ಗೆದ್ದಿದ್ದೇವೆ(2018), ಕಳೆದ ವರ್ಷ ಕೊನೆಯ ಎಸೆತದಲ್ಲಿ ಚಾಂಪಿಯನ್ ಪಟ್ಟ ಕಳೆದುಕೊಂಡೆವು. ಸದ್ಯ ಮೂರನೇ ವರ್ಷದಲ್ಲಿ ಕಷ್ಟಕರ ಪರಿಸ್ಥಿತಿ ಎದುರಿಸುತ್ತಿದ್ದೇವೆ ಎಂದು ಫ್ಲೆಮಿಂಗ್ ಹೇಳಿದ್ದಾರೆ.

ರಾಜಸ್ಥಾನ್ ತಂಡದ ವಿರುದ್ಧದ ಸೋಲಿನ ಬಳಿಕ, ತಂಡದ ನಾಯಕ ಧೋನಿ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. ಕೇದಾರ್ ಜಾಧವ್, ಪಿಯೂಷ್ ಚಾವ್ಲಾರಂತಹ ಆಟಗಾರರನ್ನು ಪ್ಲೇಯಿಂಗ್‌ ಇಲೆವೆನ್‌ ನಲ್ಲಿ ಆಡಿಸಿದ್ದರ ಕುರಿತು ವಿರೋಧ ವ್ಯಕ್ತವಾಗುತ್ತಿವೆ. ಐಪಿಎಲ್ 12ನೇ ಆವೃತ್ತಿಯ ಅತಿ ಹೆಚ್ಚು ವಿಕೆಟ್ ಪಡೆದ ಪರ್ಪಲ್ ಕ್ಯಾಪ್ ವಿನ್ನರ್ ಆಗಿದ್ದ ಇಮ್ರಾನ್ ತಾಹಿರ್ ಅವರು ಮೊದಲ 10 ಪಂದ್ಯಗಳಿಗೆ ಬೆಂಚ್‌ ನಲ್ಲಿಯೇ ಕುರಿಸಿದ ಧೋನಿ ಅವರ ಅನುಚಿತ ತಂಡದ ನಿರ್ವಹಣೆ ನಿಜಕ್ಕೂ ಆಶ್ಚರ್ಯಕ್ಕೆ ಎಡೆಮಾಡಿದೆ.

Leave a Reply

Your email address will not be published. Required fields are marked *

You May Also Like

ಕನ್ನಡಿಗನಿಗೆ ಒಲಿದು ಬರಲಿದೆಯೇ ಧೋನಿ ಸ್ಥಾನ!

ಮಹೇಂದ್ರಸಿಂಗ್ ಧೋನಿ ಅವರು ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಭಾರತೀಯ ತಂಡದ ವಿಕೇಟ್ ಕೀಪಿಂಗ್ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದಕ್ಕೆ ಹತ್ತಾರು ಹೆಸರುಗಳು ಮುನ್ನೆಲೆಗೆ ಬಂದು ಚರ್ಚೆಗೆ ಕಾರಣವಾಗುತ್ತಿವೆ.

ಗದಗ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಮುತ್ತುರಾಜ್ ಶಿರಹಟ್ಟಿ ಹಾಗೂ ಮಹಮ್ಮದ್ ಹುಜೇರ್

ಉತ್ತರಪ್ರಭಗದಗ: ಇಂದು ಜಿಲ್ಲೆಯಾದ್ಯಂತ ಶಟಲ ಬ್ಯಾಡ್ಮಿಂಟನ್ ಸ್ಪರ್ಧೆಯು ಕೆ.ಎಚ್.ಪಾಟೀಲ್ ಒಳಾಂಗಣ ಸ್ಟೇಡಿಯಂನಲ್ಲಿ ಏರ್ಪಡಿಸಲಾಗಿತ್ತು ಶಟಲ್ ಬ್ಯಾಡ್ಮಿಂಟನ…

ಸಾಲು ಮರದ ತಿಮ್ಮಕ್ಕನನ್ನು ನೆನೆದ ಬಜ್ಜಿ

ಭಾರತ ಕ್ರಿಕೆಟ್ ತಂಡದ ಆಟಗಾರ ಹರ್ಭಜನ್ ಸಿಂಗ್, ರಾಜ್ಯದ ಹೆಮ್ಮೆಯ ತಾಯಿಯನ್ನು ನೆನೆದು ಟ್ವೀಟ್ ಮಾಡಿದ್ದಾರೆ.ಸಾಲುಮರದ ತಿಮ್ಮಕ್ಕ ಅವರನ್ನು ಭಜ್ಜಿ ನೆನೆದು ಟ್ವೀಟ್ ಮಾಡಿದ್ದಾರೆ.

ಐಪಿಎಲ್ ನಲ್ಲಿ ಮತ್ತೊಂದು ದಾಖಲೆಗೆ ಸಾಕ್ಷಿಯಾದ ಕನ್ನಡಿಗ!

ದುಬೈ : ಕಿಂಗ್ಸ್ ಇಲೆವೆನ್ ಪಂಜಾಬ್‌ ತಂಡದ ನಾಯಕ ಕೆ.ಎಲ್‌. ರಾಹುಲ್‌ ಅವರು ಭಾರತದ ಪರ ಮತ್ತೊಂದು ದಾಖಲೆ ಬರೆದಿದ್ದಾರೆ.