ಲಕ್ನೋ: ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ನಾಲ್ಕು ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಅವಳನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 

ಇಸ್ಮಾಯಿಲ್(33) ಬಂಧಿತ ವೈದ್ಯ. ಬಂಧಿತ ವ್ಯಕ್ತಿ ಇತ್ತೀಚೆಗಷ್ಟೇ 4 ಮಕ್ಕಳಿರುವ ತಾಯಿಯನ್ನು ಕೊಲೆ ಮಾಡಿದ್ದ. ಕೊಲೆಯಾದ ಮಹಿಳೆ ಸೆ. 7ರಂದು ನಾಪತ್ತೆಯಾಗಿದ್ದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಕುರಿತು ಪೊಲೀಸರು ಹುಡುಕಾಟ ನಡೆಸಿದ್ದರು. ಬರೋಬ್ಬರಿ ಒಂದು ತಿಂಗಳ ನಂತರವೂ ಮಹಿಳೆ ಪತ್ತೆಯಾಗಿರಲಿಲ್ಲ. ಅ. 15ರಂದು ಕುರುಕ್ಷೇತ್ರದಲ್ಲಿ ಒಂದು ಅಪರಿಚಿತ ಶವ ಪತ್ತೆಯಾಗಿತ್ತು. ಈ ಶವದ ಮುಖ ಮತ್ತು ನಾಪತ್ತೆಯಾಗಿದ್ದ ಮಹಿಳೆಯ ಫೋಟೋ ಹೋಲಿಕೆಯಾಗುತ್ತದೆ ಎಂದು ಹರಿಯಾಣ ಪೊಲೀಸರು, ಗಾಜಿಯಾಬಾದ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಶವ ಪತ್ತೆಯಾದ ಕೂಡಲೇ ಮಹಿಳೆಯ ಫೋನ್ ಕರೆ ಮತ್ತು ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಪೊಲೀಸರಿಗೆ ವೈದ್ಯ ಇಸ್ಮಾಯಿಲ್ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

ವೈದ್ಯ ಹಾಗೂ ಮಹಿಳೆ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಮಹಿಳೆ ತನ್ನೊಂದಿಗೆ ಜೀವನ ಸಾಗಿಸುವಂತೆ ಪೀಡಿಸಿದ್ದಾಳೆ. ಈ ಕುರಿತು ಆಗಾಗ ಇಬ್ಬರ ನಡುವೆ ಜಗಳ ಪ್ರಾರಂಭವಾಗಿದೆ. ಈ ಕುರಿತು ಜಗಳ ಜೋರಾಗುತ್ತಿದ್ದಂತೆ ಅಸ್ತಮಾ ರೋಗಿಯಾಗಿದ್ದ ಮಹಿಳೆಗೆ ಉಸಿರಾಟ ತೊಂದರೆ ಶುರುವಾಗಿದೆ. ಹೀಗಾಗಿ ಇಸ್ಮಾಯಿಲ್ ಇಂಜೆಕ್ಷನ್ ಮೂಲಕ ಔಷಧಿ ನೀಡಿದ್ದು, ಮಹಿಳೆ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಈ ವೇಳೆ ಟವಲ್ ನಿಂದ ಮಹಿಳೆಯನ್ನು ಉಸಿರುಗಟ್ಟಿಸಿ ಕಾರಿನಲ್ಲಿಯೇ ಇಸ್ಮಾಯಿಲ್ ಕೊಲೆಗೈದಿದ್ದಾನೆ.

Leave a Reply

Your email address will not be published. Required fields are marked *

You May Also Like

ಒಂದೇ ದಿನ ದೇಶದಲ್ಲಿ ಎಷ್ಟು ಜನರಿಗೆ ಸೋಂಕು ಮೆತ್ತಿಕೊಂಡಿದೆ ಗೊತ್ತಾ?

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 61,871 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 74,94,552ಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…

2021ನೇ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆ

ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ರವಿವಾರ ಪ್ರಸಕ್ತ ಸಾಲಿನ ಆಸ್ಕರ್ ಪ್ರಶಸ್ತಿ ಘೋಷಣೆಯಾಗಿದೆ. ಈ ಬಾರಿಯೂ ಯಾವುದೇ ಅಧಿಕೃತ ಸಮಾರಂಭ ನಡೆಯದೇ, ವರ್ಚುವಲ್ ಆಗಿ ಪ್ರಶಸ್ತಿ ವಿಜೇತ ನಟ, ನಟಿ ಹಾಗೂ ಚಿತ್ರಗಳನ್ನು ಘೋಷಿಸಲಾಗಿದೆ.

ಸಿಬಿಐನ ಮಾಜಿ ನಿರ್ದೇಶಕ ನೇಣಿಗೆ ಶರಣು!

ಚಂಡೀಗಢ : ಸಿಬಿಐನ ಮಾಜಿ ನಿರ್ದೇಶಕ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.