ಲಕ್ನೋ: ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದ ನಾಲ್ಕು ಮಕ್ಕಳ ತಾಯಿಯೊಂದಿಗೆ ಲವ್ ನಲ್ಲಿ ಬಿದ್ದ ವೈದ್ಯ, ಅವಳನ್ನೇ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಈ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 

ಇಸ್ಮಾಯಿಲ್(33) ಬಂಧಿತ ವೈದ್ಯ. ಬಂಧಿತ ವ್ಯಕ್ತಿ ಇತ್ತೀಚೆಗಷ್ಟೇ 4 ಮಕ್ಕಳಿರುವ ತಾಯಿಯನ್ನು ಕೊಲೆ ಮಾಡಿದ್ದ. ಕೊಲೆಯಾದ ಮಹಿಳೆ ಸೆ. 7ರಂದು ನಾಪತ್ತೆಯಾಗಿದ್ದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಈ ಕುರಿತು ಪೊಲೀಸರು ಹುಡುಕಾಟ ನಡೆಸಿದ್ದರು. ಬರೋಬ್ಬರಿ ಒಂದು ತಿಂಗಳ ನಂತರವೂ ಮಹಿಳೆ ಪತ್ತೆಯಾಗಿರಲಿಲ್ಲ. ಅ. 15ರಂದು ಕುರುಕ್ಷೇತ್ರದಲ್ಲಿ ಒಂದು ಅಪರಿಚಿತ ಶವ ಪತ್ತೆಯಾಗಿತ್ತು. ಈ ಶವದ ಮುಖ ಮತ್ತು ನಾಪತ್ತೆಯಾಗಿದ್ದ ಮಹಿಳೆಯ ಫೋಟೋ ಹೋಲಿಕೆಯಾಗುತ್ತದೆ ಎಂದು ಹರಿಯಾಣ ಪೊಲೀಸರು, ಗಾಜಿಯಾಬಾದ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಶವ ಪತ್ತೆಯಾದ ಕೂಡಲೇ ಮಹಿಳೆಯ ಫೋನ್ ಕರೆ ಮತ್ತು ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಪೊಲೀಸರಿಗೆ ವೈದ್ಯ ಇಸ್ಮಾಯಿಲ್ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

ವೈದ್ಯ ಹಾಗೂ ಮಹಿಳೆ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಮಹಿಳೆ ತನ್ನೊಂದಿಗೆ ಜೀವನ ಸಾಗಿಸುವಂತೆ ಪೀಡಿಸಿದ್ದಾಳೆ. ಈ ಕುರಿತು ಆಗಾಗ ಇಬ್ಬರ ನಡುವೆ ಜಗಳ ಪ್ರಾರಂಭವಾಗಿದೆ. ಈ ಕುರಿತು ಜಗಳ ಜೋರಾಗುತ್ತಿದ್ದಂತೆ ಅಸ್ತಮಾ ರೋಗಿಯಾಗಿದ್ದ ಮಹಿಳೆಗೆ ಉಸಿರಾಟ ತೊಂದರೆ ಶುರುವಾಗಿದೆ. ಹೀಗಾಗಿ ಇಸ್ಮಾಯಿಲ್ ಇಂಜೆಕ್ಷನ್ ಮೂಲಕ ಔಷಧಿ ನೀಡಿದ್ದು, ಮಹಿಳೆ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಈ ವೇಳೆ ಟವಲ್ ನಿಂದ ಮಹಿಳೆಯನ್ನು ಉಸಿರುಗಟ್ಟಿಸಿ ಕಾರಿನಲ್ಲಿಯೇ ಇಸ್ಮಾಯಿಲ್ ಕೊಲೆಗೈದಿದ್ದಾನೆ.

Leave a Reply

Your email address will not be published. Required fields are marked *

You May Also Like

ಪಾಕ್ ಸೇನೆಯಿಂದ ಗುಂಡಿನ ದಾಳಿ

ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿಯಿರುವ ಮುಂಚೂಣಿ ಠಾಣೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ಸೇನೆಯು ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದರು.

ಕೇಸ್ ನಂ 1 ರಿಂದ ಕೊರೊನಾ ಸೋಂಕು 8 ಲಕ್ಷ ತಲುಪಿದ್ದು ಹೇಗೆ? : ಮೂರೇ ದಿನದಲ್ಲಿ 1 ಲಕ್ಷ ಹೊಸ ಪಾಸಿಟಿವ್

ನವದೆಹಲಿ: ಮೂರು ದಿನದ ಹಿಂದಷ್ಟೇ ದೇಶದಲ್ಲಿ 7 ಲಕ್ಷ ದಾಟಿದ್ದ ಕೋರೊನಾ ಸೋಂಕಿತರ ಸಂಖ್ಯೆ ಈಗ…

ವಾಲಿಬಾಲ್ ಪಂದ್ಯಾಟ : ಹಳಕಟ್ಟಿ ಶಾಲೆ ಬಾಲಕಿಯರ ತಂಡ ಸಾಧನೆ

ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23…

ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕೇಂದ್ರ ಸರ್ಕಾರದ ಅನುಮತಿ : ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಮೈಸೂರಿನಲ್ಲಿ ಪ್ಲಾಸ್ಮಾಥೆರಪಿ ಚಿಕಿತ್ಸೆಯನ್ನು ಪ್ರಾಯೋಗಿಕವಾಗಿ ಆರಂಭಿಸಲು ಕೇಂದ್ರ…