ಬೆಂಗಳೂರು: ರಾಜ್ಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಉತ್ತರ ಕರ್ನಾಟಕ ಸೇರಿದಂತೆ ದಕ್ಷಿಣ ಕರ್ನಾಟಕದಲ್ಲಿ ಬೆಂಬಿಡದೆ ಮಳೆ ಸುರಿಯುತ್ತಿದೆ.  

ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕೋಡಿ, ಕಲಬುರಗಿ, ಬಾಗಲಕೋಟೆ ಸೇರಿದಂತೆ ಹಲವೆಡೆ ವಿಪರೀತ ಮಳೆಯಾಗಿದ್ದು, 9 ಜನ ಸಾವನ್ನಪ್ಪಿದ್ದಾರೆ. 

ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮತ್ತು ಬಳ್ಳಾರಿಯ ಬೈರಾಪುರದಲ್ಲಿ ಸಿಡಿಲಿಗೆ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ಕೊಪ್ಪಳದ ಗೆದಗೇರಿ ತಾಂಡಾದಲ್ಲಿ, ವಿಜಯಪುರದ ಹತ್ತಳ್ಳಿಯಲ್ಲಿ, ಬೆಳಗಾವಿಯ ಅಷ್ಟಗಾದಲ್ಲಿ ತಲಾ ಒಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಬೆಳಗಾವಿಯ ಚಿಕ್ಕ ಉಳ್ಳಿಗೇರಿಯಲ್ಲಿ ಮರ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಗಣೇಶ ನಗರ ಸಂಪೂರ್ಣ ಜಲಾವೃತವಾಗಿದೆ. ಧಾರವಾಡ ನಗರದಲ್ಲಿ ಸತತ ಎರಡು ಗಂಟೆಗಳ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ನೂರಾರು ಮನೆಗಳಿಗೆ ನೀರು ನುಗ್ಗಿ ಜನರು ಪರದಾಡಿದ್ದಾರೆ. 

ಚಿಕ್ಕೋಡಿಯಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಹುತೇಕ ಹಳ್ಳ- ಕೆರೆಗಳು ತುಂಬಿ ಹರಿಯುತ್ತಿವೆ. ಗದಗ ಜಿಲ್ಲೆಯಲ್ಲಿ ಕೂಡ ವಿಪರೀತ ಮಳೆಯಾಗಿದೆ. ಹಲವು ರಸ್ತೆಗಳು ಸಂಪೂರ್ಣವಾಗಿ ಜಲಾ  ವೃತವಾಗಿವೆ. ರಸ್ತೆಗಳು ಬಂದ್ ಆಗಿವೆ.

Leave a Reply

Your email address will not be published. Required fields are marked *

You May Also Like

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ

ಮದ್ಯದಿಂದ ವಂಚಿತರಾದರು ದಾವಣಗೆರೆ ಜನ ದಾವಣಗೆರೆ : ಮದ್ಯ ಪ್ರಿಯರ ಮನವಿಯಂತೆ ನೀನ್ನೆಯಿಂದ ಬಾರ್ ಗಳು…

ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ : ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಮೇಘನ್.ಎಚ್.ಕೆ

ಎಚ್.ಕೆ.ಮೇಘನ್: ನೀಟ್ ಪರೀಕ್ಷೆಯಲ್ಲಿ 5ನೇ ರ್ಯಾಂಕ್​ ಬಂದಿರುವುದು ಸಂತಸವನ್ನು ತಂದಿದೆ. ದೆಹಲಿಯ ಏಮ್ಸ್‌ನಲ್ಲಿ ಎಂಬಿಬಿಎಸ್ ಕೋರ್ಸ್‌ಗೆ ಸೇರಬೇಕು ಎಂದುಕೊಂಡಿದ್ದೇನೆ. ವೈದ್ಯನಾಗಬೇಕೆಂಬ ಕನಸು ಇಟ್ಟುಕೊಂಡಿದ್ದ ಹಿನ್ನೆಲೆಯಲ್ಲಿ ಪ್ರೌಢಶಾಲೆಗೆ ಬಂದ ತಕ್ಷಣವೇ ನೀಟ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದೆ. ಕರೊನಾ ರಜೆ ಸಿಕ್ಕ ಕಾರಣ ಓದಲು ಮತ್ತಷ್ಟು ಅವಕಾಶ ಸಿಕ್ಕಂತಾಯಿತು. ಈ ಸಾಧನೆಗೆ ಎಲ್ಲ ಪ್ರೋತ್ಸಾಹ ನೀಡಿದ ನನ್ನ ಪಾಲಕರಿಗೆ ಹಾಗೂ ಉಪನ್ಯಾಸಕರಿಗೆ ಧನ್ಯವಾದಗಳು ಎಂದು ಹೇಳಿ

ಮಾರುಕಟ್ಟೆಯಲ್ಲಿಲ್ಲ ಮೆಣಸಿನಕಾಯಿ ಘಾಟು..! ರೈತರಿಗೆ ತಪ್ಪದ ಪರಿಪಾಟಲು..!

ಕೊರೋನಾ ಕಾಟದಿಂದ ತೀವ್ರ ಸಂಕಷ್ಟ ಎದುರಿಸುತ್ತಿರುವ ರೈತರ ಸಂಕಷ್ಟದ ಬದುಕಿನ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ನಿಮ್ಮ ಉತ್ತರ ಪ್ರಭ ಮಾಡಿದೆ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತ ವಿರೋದಿ ಧೋರಣೆ ಅನುಸರಿಸುತ್ತಿವೆ: ಸುಂಕದ

ಉತ್ತರಪ್ರಭ ಸುದ್ದಿ ಮುಳಗುಂದ: ಅನ್ಯಾಯಕ್ಕೊಳಗಾದ ರೈತರಿಗೆ ಆತ್ಮಸ್ಥೈರ್ಯ ತುಂಬಿ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರೈತ…