ಬೆಂಗಳೂರು: ರಾಜ್ಯದಲ್ಲಿ ಇಂದು 6,297 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 66 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,500 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,76,901ಕ್ಕೆ ಏರಿಕೆಯಾಗಿದೆ. ಅಲ್ಲದೇ, ರಾಜ್ಯದಲ್ಲಿ 1,03,945 ಸಕ್ರಿಯ ಪ್ರಕರಣಗಳಿವೆ.

ಇಂದು 66 ಜನರ ಬಲಿಯೊಂದಿಗೆ ರಾಜ್ಯದಲ್ಲಿ ಇದುವರೆಗೂ 10,608 ಜನ ಸಾವನ್ನಪ್ಪಿದಂತಾಗಿದೆ. ಸದ್ಯ 941 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿನ ಖಚಿತ ಪ್ರಕರಣಗಳು ಪ್ರಮಾಣ ಶೇ.6.41ರಷ್ಟಿದೆ. ಇತ್ತ ಕೋವಿಡ್-19 ಮರಣ ಪ್ರಮಾಣ ಶೇ. 1.04ರಷ್ಟಿದೆ. ಇಂದು 98,236 ಸ್ಯಾಂಪಲ್ ಗಳನ್ನು ಕೊರೊನಾಗೆ ಪರೀಕ್ಷೆಗೆ ಒಳಪಡಿಸಲಾಗಿದೆ.

ಬಾಗಲಕೋಟೆ 27, ಬಳ್ಳಾರಿ 188, ಬೆಳಗಾವಿ 89, ಬೆಂಗಳೂರು ಗ್ರಾಮಾಂತರ 319, ಬೆಂಗಳೂರು ನಗರ 2,821, ಬೀದರ್ 10, ಚಾಮರಾಜನಗರ 32, ಚಿಕ್ಕಬಳ್ಳಾಪುರ 166, ಚಿಕ್ಕಮಗಳೂರು 104, ಚಿತ್ರದುರ್ಗ 109, ದಕ್ಷಿಣ ಕನ್ನಡ 146, ದಾವಣಗೆರೆ 206, ಧಾರವಾಡ 104, ಗದಗ 38, ಹಾಸನ 249, ಹಾವೇರಿ 42, ಕಲಬುರಗಿ 67, ಕೊಡಗು 24, ಕೋಲಾರ 29, ಕೊಪ್ಪಳ 77, ಮಂಡ್ಯ 108, ಮೈಸೂರು 451, ರಾಯಚೂರು 25, ರಾಮನಗರ 23, ಶಿವಮೊಗ್ಗ 116, ತುಮಕೂರು 327, ಉಡುಪಿ 103, ಉತ್ತರ ಕನ್ನಡ 180, ವಿಜಯಪುರ 80 ಮತ್ತು ಯಾದಗಿರಿಯಲ್ಲಿ 37 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Leave a Reply

Your email address will not be published. Required fields are marked *

You May Also Like

ವಾರಾಂತ್ಯ ಕಪ್ಯೂ೯ಗೆ ಉತ್ತಮ ಸ್ಪಂದನೆ : ನಿಡಗುಂದಿ ಸ್ತಬ್ಧ- ಆಲಮಟ್ಟಿ ಗಾಡ್೯ನಗಳು ಬೀಕೋ

ನಿಡಗುಂದಿ : ಸದಾ ಜನಜಂಗುಳಿಯಿಂದ ಗಿಜಗುಡುತ್ತಿದ್ದ ಪ್ರಮುಖ ರಸ್ತೆಗಳೆಲ್ಲ ಭಾಗಶಃ ಖಾಲಿಖಾಲಿ. ಅಂಗಡಿ,ಮುಂಗಟ್ಟುಗಳೆಲ್ಲ ಬಾಗಿಲು ತೆರೆಯದ…

ಗದಗ ಜಿಲ್ಲೆಯಲ್ಲಿ ಕೊರೊನಾ ಕಾರ್ಮೋಡ: ಇಂದು 31 ಪಾಸಿಟಿವ್!

ಜಿಲ್ಲೆಯಲ್ಲಿಂದು 31 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 616 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 226. 376

ರಾಜಕೀಯ ಒಳ ಸಂಚಿನಿಂದಾಗಿ ವಿನಯ್ ಕುಲಕರ್ಣಿಯನ್ನು ವಿಚಾರಣೆಗೊಳಪಡಿಸಲಾಗುತ್ತಿದೆ – ಪಂಚಮಸಾಲಿ ಪೀಠದ ಶ್ರೀ!

ಹುಬ್ಬಳ್ಳಿ : ಜಿಪಂನ ಮಾಜಿ ಸದಸ್ಯ ಯೋಗೇಶ್ ಗೌಡ ಗೌಡರ ಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹೀಗಾಗಿ ಇದಕ್ಕೆ ಹಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಬೆಂಬಲ ಬೆಲೆಯಲ್ಲಿ ಸರ್ಕಾರ ಗೋವಿನ ಜೋಳ ಖರೀದಿಸಲು ರೈತರ ಆಗ್ರಹ

ತಾನು ಬೆಳೆದ ಬೆಳೆ ತನ್ನ ಬದುಕು ಬಂಗಾರವಾಗಿಸುತ್ತದೆ ಎಂದು ನಂಬಿದ ಅನ್ನದಾನಿಗೆ ಭಾರಿ ನಿರಾಶೆಯಾಗಿದೆ. ಬಿಳಿ ಗೋವಿನ ಜೋಳ ಬದುಕಿನಲ್ಲಿ ಬೆಳಕು ಚೆಲ್ಲುತ್ತೆ ಎಂಬ ವಿಶ್ವಾಸದಲ್ಲಿ ರೈತನಿಗೆ ಬಿಳಿ ಗೋವಿನ ಜೋಳ ಕೂಡ ಉತ್ತಮ ಧಾರಣೆ ನೀಡದ ಹಿನ್ನೆಲೆ ಬದುಕಿಗೆ ಕತ್ತಲೆ ಆವರಿಸಿದಂತಾಗಿದೆ. ಇದರಿಂದ ಉತ್ತಮ ಧಾರಣೆಯ ನಿರೀಕ್ಷೆಯಲ್ಲಿದ್ದ ರೈತರು ಅಸಹಾಯಕರಾಗಿ ಕೈಚೆಲ್ಲಿ ಕುಳಿತಿದ್ದಾರೆ.