ಬೆಂಗಳೂರು: ರಾಜ್ಯದಲ್ಲಿ ಇಂದು 6,297 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 66 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,500 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,76,901ಕ್ಕೆ ಏರಿಕೆಯಾಗಿದೆ. ಅಲ್ಲದೇ, ರಾಜ್ಯದಲ್ಲಿ 1,03,945 ಸಕ್ರಿಯ ಪ್ರಕರಣಗಳಿವೆ.

ಇಂದು 66 ಜನರ ಬಲಿಯೊಂದಿಗೆ ರಾಜ್ಯದಲ್ಲಿ ಇದುವರೆಗೂ 10,608 ಜನ ಸಾವನ್ನಪ್ಪಿದಂತಾಗಿದೆ. ಸದ್ಯ 941 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿನ ಖಚಿತ ಪ್ರಕರಣಗಳು ಪ್ರಮಾಣ ಶೇ.6.41ರಷ್ಟಿದೆ. ಇತ್ತ ಕೋವಿಡ್-19 ಮರಣ ಪ್ರಮಾಣ ಶೇ. 1.04ರಷ್ಟಿದೆ. ಇಂದು 98,236 ಸ್ಯಾಂಪಲ್ ಗಳನ್ನು ಕೊರೊನಾಗೆ ಪರೀಕ್ಷೆಗೆ ಒಳಪಡಿಸಲಾಗಿದೆ.

ಬಾಗಲಕೋಟೆ 27, ಬಳ್ಳಾರಿ 188, ಬೆಳಗಾವಿ 89, ಬೆಂಗಳೂರು ಗ್ರಾಮಾಂತರ 319, ಬೆಂಗಳೂರು ನಗರ 2,821, ಬೀದರ್ 10, ಚಾಮರಾಜನಗರ 32, ಚಿಕ್ಕಬಳ್ಳಾಪುರ 166, ಚಿಕ್ಕಮಗಳೂರು 104, ಚಿತ್ರದುರ್ಗ 109, ದಕ್ಷಿಣ ಕನ್ನಡ 146, ದಾವಣಗೆರೆ 206, ಧಾರವಾಡ 104, ಗದಗ 38, ಹಾಸನ 249, ಹಾವೇರಿ 42, ಕಲಬುರಗಿ 67, ಕೊಡಗು 24, ಕೋಲಾರ 29, ಕೊಪ್ಪಳ 77, ಮಂಡ್ಯ 108, ಮೈಸೂರು 451, ರಾಯಚೂರು 25, ರಾಮನಗರ 23, ಶಿವಮೊಗ್ಗ 116, ತುಮಕೂರು 327, ಉಡುಪಿ 103, ಉತ್ತರ ಕನ್ನಡ 180, ವಿಜಯಪುರ 80 ಮತ್ತು ಯಾದಗಿರಿಯಲ್ಲಿ 37 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Leave a Reply

Your email address will not be published. Required fields are marked *

You May Also Like

ಅವ್ವನ ಮಾತು ಎಚ್ಚರಿಕೆ ಗಂಟೆಯಿದ್ದಂತೆ

ಬದುಕಿನುದ್ದಕ್ಕೂ ಸದಾ ಅವ್ವ ನೆನಪಾಗುತ್ತಲೇ ಇರುತ್ತಾಳೆ. ಅವಳ ಮಾತು ಅಂದರೆ ವೇದ ವಾಕ್ಯವಿದ್ದಂತೆ. ಅದು ಸತ್ಯ ಅಂದರೆ ಸತ್ಯ ಅಷ್ಟೆ. ಏಕೆಂದರೆ ಸತ್ಯ ಯಾವತ್ತೂ ಸತ್ಯ! ಅದಕ್ಕೆ ಇನ್ನೊಂದು ಪರ್ಯಾಯವೇನೂ ಇರುವುದಿಲ್ಲ.

ಅನುದಾನ ರಹಿತ ಶಿಕ್ಷಕರು ಶಾಪಗ್ರಸ್ಥರೇ? ನಿಕೃಷ್ಟರೇ? ದೌರ್ಭಾಗ್ಯವಂತರೇ?

ಕೊರೋನಾ ವೈರಸ್ ಎಲ್ಲರಿಗೂ ಸರಿಸಮಾನವಾಗಿ ಬಿಡದೆ ಬೆನ್ನತ್ತಿದೆ. ಸರ್ಕಾರೇತರ ಶಿಕ್ಷಕರಿಗೆ ಅದರಲ್ಲೂ ಅಸಂಖ್ಯಾತ ಅನುದಾನರಹಿತ ಶಿಕ್ಷಕರಿಗೆ…

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ: ಗದಗನಲ್ಲಿ ಜನ ಜಾಗೃತಿ ರಥಕ್ಕೆ ಚಾಲನೆ

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸಂಘ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜನಜಾಗೃತಿ ರಥಕ್ಕೆ ಜಿಲ್ಲಾಡಳಿತ ಭವನದಲ್ಲಿಂದು ಚಾಲನೆ ನೀಡಲಾಯಿತು.

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!ಬೆಂಗಳೂರು : ರಾಜ್ಯದಲ್ಲಿ ಕೂಡ ಕೊರೊನಾ ಅಬ್ಬರ…