ಬೆಂಗಳೂರು: ರಾಜ್ಯದಲ್ಲಿ ಇಂದು 6,297 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 66 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 8,500 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,76,901ಕ್ಕೆ ಏರಿಕೆಯಾಗಿದೆ. ಅಲ್ಲದೇ, ರಾಜ್ಯದಲ್ಲಿ 1,03,945 ಸಕ್ರಿಯ ಪ್ರಕರಣಗಳಿವೆ.

ಇಂದು 66 ಜನರ ಬಲಿಯೊಂದಿಗೆ ರಾಜ್ಯದಲ್ಲಿ ಇದುವರೆಗೂ 10,608 ಜನ ಸಾವನ್ನಪ್ಪಿದಂತಾಗಿದೆ. ಸದ್ಯ 941 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಸೋಂಕಿನ ಖಚಿತ ಪ್ರಕರಣಗಳು ಪ್ರಮಾಣ ಶೇ.6.41ರಷ್ಟಿದೆ. ಇತ್ತ ಕೋವಿಡ್-19 ಮರಣ ಪ್ರಮಾಣ ಶೇ. 1.04ರಷ್ಟಿದೆ. ಇಂದು 98,236 ಸ್ಯಾಂಪಲ್ ಗಳನ್ನು ಕೊರೊನಾಗೆ ಪರೀಕ್ಷೆಗೆ ಒಳಪಡಿಸಲಾಗಿದೆ.

ಬಾಗಲಕೋಟೆ 27, ಬಳ್ಳಾರಿ 188, ಬೆಳಗಾವಿ 89, ಬೆಂಗಳೂರು ಗ್ರಾಮಾಂತರ 319, ಬೆಂಗಳೂರು ನಗರ 2,821, ಬೀದರ್ 10, ಚಾಮರಾಜನಗರ 32, ಚಿಕ್ಕಬಳ್ಳಾಪುರ 166, ಚಿಕ್ಕಮಗಳೂರು 104, ಚಿತ್ರದುರ್ಗ 109, ದಕ್ಷಿಣ ಕನ್ನಡ 146, ದಾವಣಗೆರೆ 206, ಧಾರವಾಡ 104, ಗದಗ 38, ಹಾಸನ 249, ಹಾವೇರಿ 42, ಕಲಬುರಗಿ 67, ಕೊಡಗು 24, ಕೋಲಾರ 29, ಕೊಪ್ಪಳ 77, ಮಂಡ್ಯ 108, ಮೈಸೂರು 451, ರಾಯಚೂರು 25, ರಾಮನಗರ 23, ಶಿವಮೊಗ್ಗ 116, ತುಮಕೂರು 327, ಉಡುಪಿ 103, ಉತ್ತರ ಕನ್ನಡ 180, ವಿಜಯಪುರ 80 ಮತ್ತು ಯಾದಗಿರಿಯಲ್ಲಿ 37 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Leave a Reply

Your email address will not be published. Required fields are marked *

You May Also Like

ಜಿಲ್ಲಾ ಪಂಚಾಯಿತಿ; ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಪಂಚಾಯಿತಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಲು 25/3/2021ರ ಸಂಜೆ 5 ಗಂಟೆ ಕೊನೆಯ ದಿನವಾಗಿದೆ.

10 ರಂದು ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಉತ್ತರಪ್ರಭ ಸುದ್ದಿಆಲಮಟ್ಟಿ: ಆಲಮಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಎಲ್ಲ ವಯೋಮಾನದ ಗ್ರಾಮೀಣ ಕ್ರೀಡಾಸಕ್ತರಿಗಾಗಿ ದಿ,10 ರಂದು…

ಕ್ರಿಕೆಟ್ ಬೆಟ್ಟಿಂಗ್ ನಲ್ಲಿಯೇ ಭಾಗಿಯಾದ ಪೊಲೀಸ್!

ಚಿಂತಾಮಣಿ : ಅಪರಾಧ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕಾದ ಪೊಲೀಸಪ್ಪನೇ ಇಲ್ಲಿ ಐಪಿಎಲ್ ಬೆಟ್ಟಿಂಗ್ ಆಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ನರೆಗಲ್ಲ: ಅತೀಯಾದ ಮಳೆಯಿಂದ ಕೊಳೆಯುತ್ತಿದೆ ಈರುಳ್ಳಿ

ಹೋಬಳಿಯ ಎಲ್ಲೇಡೆ ಹಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೃಷಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ಕೃಷಿ ಚಟುವಟಿಕೆಗೆ ತಿವ್ರ ಹಿನ್ನೆಡೆಯಾಗಿದೆ.