ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

ಇಂದು ಸಂಜೆ 6ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶ ಉದ್ಧೇಶಿಸಿ ಮಾತನಾಡಲಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದು ದೇಶದ ಜನರನ್ನು ಉದ್ಧೇಶಿಸಿ ಮಾತನಾಡಲಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಲಾಕ್ ಡೌನ್ ಘೋಷಣೆ ಮಾಡುವ ಸಂದರ್ಭದಲ್ಲಿ ದೇಶ ಉದ್ಧೇಶಿ ಮಾತನಾಡಿದ್ದರು. ಸದ್ಯ ಮತ್ತೊಮ್ಮೆ ಜನರ ಮುಂದೆ ಬರುತ್ತಿದ್ದಾರೆ. ಹೀಗಾಗಿ ಜನರಲ್ಲಿ ಕುತೂಹಲ ಮನೆ ಮಾಡಿದೆ.

ಆ ನಂತರ ಪ್ರಧಾನಿ ಅವರು ದೇಶ ಉದ್ಧೇಶಿಸಿ ಮಾತನಾಡಿರಲಿಲ್ಲ. ಇಂದು ಯಾವ ವಿಚಾರವಾಗಿ ಅವರು ಮಾತನಾಡಲಿದ್ದಾರೆ ಎಂಬುವುದು ತಿಳಿದಿಲ್ಲ. ಆರ್ಥಿಕ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದ್ದು, ನಿಖರವಾಗಿ ತಿಳಿದು ಬಂದಿಲ್ಲ.

ಬೇರೆ ದೇಶಗಳಿಗೆ ಹೋಲಿಸಿದರೆ ಸದ್ಯ ಈಗ ಭಾರತದಲ್ಲಿ ಕೊರೊನಾ ದಿನದ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಈ ವಿಚಾರವನ್ನು ಮೋದಿ ಪ್ರಸ್ತಾಪ ಮಾಡುತ್ತಾರೆಯೇ ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.

Leave a Reply

Your email address will not be published. Required fields are marked *

You May Also Like

ಗಜೇಂದ್ರಗಡ : ಚಿಕ್ಕಪ್ಪನ ಅಂತ್ಯಕ್ರಿಯೆ ವೇಳೆ ಹೃದಯಾಘಾತದಿಂದ ಮಗ ಸಾವು

ಸ್ಮಶಾನದಲ್ಲಿ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಇನ್ನೇನು ಕೆಲ ಕ್ಷಣದಲ್ಲಿ ಅಂತ್ಯಕ್ರಿಯೇ ನಡೆಯಬೇಕಿತ್ತು. ಆದರೆ ಅಲ್ಲಿ ನಡೆದಿದ್ದೆ ಬೇರೆ. ವೃದ್ಧ ಅಡಿವೆಪ್ಪ ಮೇಟಿ ಸಾವಿನಿಂದ ಅಂತ್ಯಕ್ರಿಯೇಯ ತಯಾರಿ ನಡೆದಿತ್ತು. ಸ್ಮಶಾನದಲ್ಲಿ ಇನ್ನೇನು ಅಂತಿಮ ವಿಧಿವಿಧಾನಗಳು ನಡೆದಿದ್ದವು. ಆದರೆ ಆ ವೇಳೆ ಚಿಕ್ಕಪ್ಪನ ಅಂತ್ಯಕ್ರಿಯೇಗೆ ಬಂದಿದ್ದ ಮಗ ಹೃದಯಾಗಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಮೂಲಕ ಮೊದಲೇ ಶೋಕದಲ್ಲಿ ಮುಳಗಿದ ಕುಟುಂಬಕ್ಕೆ ಮತ್ತೊಂದು ಶೋಕ ಆವರಿಸಿದೆ.

ರಜೌರಿ ; ಜಿಲ್ಲೆಯ ಹೆದ್ದಾರಿಯಲ್ಲಿ ಅನುಮಾನಾಸ್ಪದ ವಸ್ತು ಪತ್ತೆ

ಕೇಂದ್ರಾಡಳಿತ ಪ್ರದೇಶ ಕಾಶ್ಮೀರಕ್ಕೆ ವಿದೇಶಿ ಪ್ರತಿನಿಧಿಗಳ ನಿಯೋಗದ ಭೇಟಿಯ ಬೆನ್ನಲ್ಲೆ ಕಣಿವೆಯಲ್ಲಿ ಅನುಮಾನಾಸ್ಪದ ವಸ್ತುವೊಂದು ಪತ್ತೆಯಾಗಿ ಆತಂಕ ಹುಟ್ಟಿಸಿದೆ.

ಆಸ್ಟ್ರಿಯಾ ಅಂತರರಾಷ್ಟ್ರೀಯ ಚಿತ್ರೋತ್ಸವಕ್ಕೆ ಬರಗೂರರ 'ಅಮೃತಮತಿ' ಆಯ್ಕೆ

ಬೆಂಗಳೂರು: ಇಂಚರ ಪುಟ್ಟಣ್ಣ ಪ್ರೊಡಕ್ಷನ್ಸ್ನ ಪುಟ್ಟಣ್ಣ ನಿರ್ಮಿಸಿ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ‘ಅಮೃತಮತಿ’ ಕನ್ನಡ ಚಿತ್ರ…

ಇಡಿ ಅಧಿಕಾರಿಗಳನ್ನು ಬಿಟ್ಟಿಲ್ಲ ಕೊರೊನಾ!

ನವದೆಹಲಿ: ದೇಶದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಸದ್ಯ ಜಾರಿ ನಿರ್ದೇಶನಾಲಯ(ಇಡಿ)ದ ಆರು ಜನ…