ನವದೆಹಲಿ:  ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಕಡಿಮೆಯಾಗಿರುವ ಸಂತಸ ಹಂಚಿಕೊಂಡಿದ್ದಾರೆ. 

ಜನತಾ ಕರ್ಫ್ಯೂ ನಂತರ ಸಾಕಷ್ಟು ಕಷ್ಟಗಳನ್ನು ಜನರು ಅನುಭವಿಸಿದ್ದಾರೆ. ಈ ಸಂಕಷ್ಟದ ನಡುವೆಯೂ ಜನರು ತಮ್ಮ ಬದುಕಿಗಾಗಿ ಹೊರ ಬರುತ್ತಿದ್ದಾರೆ. ದೇಶದಲ್ಲಿ ಸದ್ಯಕ್ಕೆ ಲಾಕ್ ಡೌನ್ ತೆರವಾಗಿರಬಹುದು. ಆದರೆ, ವೈರಸ್ ತೊಲಗಿಲ್ಲ. ಕಳೆದ ಎಂಟು ದಿನಗಳಿಂದ ಕಾಪಾಡಿಕೊಂಡ ಸ್ಥಿತಿಯನ್ನೇ ದೇಶದ ಜನರು ಮುಂದುವರೆಸಿಕೊಂಡು ಹೋಗಬೇಕಿದೆ ಎಂದು ಮನವಿ ಮಾಡಿದ್ದಾರೆ.

ದೇಶದಲ್ಲಿ ಕೊರೊನಾ ಗುಣಮುಖ ಪ್ರಮಾಣ ಶೇ. 83ರಷ್ಟಕ್ಕೆ ಬಂದು ನಿಂತಿದೆ. ಅಭಿವೃದ್ಧಿ ರಾಷ್ಟ್ರಗಳಲ್ಲಿ ಕೊರೊನಾ ಮರಣ ಪ್ರಮಾಣ ಹೆಚ್ಚಿದ್ದಿರೂ ನಮ್ಮಲ್ಲಿ ಮಾತ್ರ ಗಣನೀಯ ಇಳಿಕೆ ಕಂಡಿದೆ. ದೇಶದಲ್ಲಿ 2 ಸಾವಿರ ಲ್ಯಾಬ್ ಗಳಲ್ಲಿ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. 90 ಲಕ್ಷದಷ್ಟು ಬೆಡ್ ಗಳ ವ್ಯವಸ್ಥೆ ಇದೆ. ಸರ್ಕಾರ, ನಾಗರಿಕರನ್ನು ಉಳಿಸುವ ವಿಷಯದಲ್ಲಿ ತುಂಬಾ ಶ್ರಮ ವಹಿಸುತ್ತಿದೆ. ಆದರೆ, ಜನರು ಮಾತ್ರ ಬೇಜವಾಬ್ದಾರಿತನ ಪ್ರದರ್ಶಿಸಬಾರದು ಎಂದು ಮನವಿ ಮಾಡಿದ್ದಾರೆ. 

ಇನ್ನೂ ಕೊರೊನಾಗೆ ಲಸಿಕೆ ಸಿಕ್ಕಿಲ್ಲ. ಹೀಗಾಗಿ ಜನರು ಈ ಸಂದರ್ಭದಲ್ಲಿಯೇ ಖುಷಿ ಪಡುವುದು ಸರಿಯಲ್ಲ. ಕೆಲಸ ಪೂರ್ಣವಾಗದೇ ಸಂತೋಷಪಡುವುದು ಉತ್ತಮವಲ್ಲ. ಸದ್ಯ ಸಾಲು ಸಾಲು ಹಬ್ಬಗಳು ಬರುತ್ತಿವೆ. ಈ ಸಂದರ್ಭದಲ್ಲಿ ಜಾಗೃತಿಯಿಂದ ಹಬ್ಬ ಆಚರಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಕೊರೊನಾ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಮನವಿ ಮಾಡಿದ ಅವರು, ದೇಶದ ಜನತೆಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಜುಲೈ 29 ಅಂತರರಾಷ್ಟ್ರೀಯ ಹುಲಿಗಳ ದಿನ “ಹುಲಿ ಸಂರಕ್ಷಣೆ ನಮ್ಮೆಲ್ಲರ ಹೊಣೆ”

“ಇಡೀ ಪ್ರಪಂಚದ ಅತ್ಯಂತ ಭವ್ಯವಾದ ಜೀವಿ, ಹುಲಿ” ಎಂದು ಜ್ಯಾಕ್ ಹನ್ನಾ ಹೇಳಿದ ಮಾತು ನಿಜಕ್ಕೂ…

ನೌಕರರಿಗೆ ಶಾಕಿಂಗ್ ನ್ಯೂಸ್: ದಕ್ಷತೆ ಆಧರಿಸಿ ವೇತನ ಕಡಿತ

ಕೇಂದ್ರ ಸರ್ಕಾರಿ ಸ್ವಾಮ್ಯದ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ವೇತನ ಕಡಿತ ಮಾಡುವ ಸಾಧ್ಯತೆ ಇದೆ.

ಆನ್ ಲೈನ್ ತರಗತಿ ಹಾಜರಿಗೆ ವೈಫಲ್ಯ: ಆತ್ಮಹತ್ಯೆ ದಾರಿ ಹಿಡಿದ ವಿದ್ಯಾರ್ಥಿನಿ

9ನೇ ತರಗತಿ ವಿದ್ಯಾರ್ಥಿನಿ ಮಲಪ್ಪುರಂ ಜಿಲ್ಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಆನ್ ಲೈನ್ ತರಗತಿಗೆ ಹಾಜರಾಗಲು ಸಾಧ್ಯವಾಗದೇ ಇರುವ ಕಾರಣಕ್ಕೆ ತೀವ್ರವಾಗಿ ತಳಮಳಕ್ಕೀಡಾಗಿ ಇಂತಹ ಕೃತ್ಯಕ್ಕೆ ಶರಣಾಗಿದ್ದಾಳೆ ಎಂದಿದ್ದಾರೆ. ಇವರು ಪರಿಶಿಷ್ಟ ಜಾತಿಗೆ ಸೇರಿದ್ದಾರೆ ಎಂದು ವರದಿಯಾಗಿದೆ.

ಕರಿನಾ-ಸೈಫ್ ಅಲಿ ಖಾನ್ ದಂಪತಿಗೆ ಮತ್ತೊಂದು ಮಗು

ಬಾಲಿವುಡ್ ನಟ ಸೈಫ್ ಅಲಿ ಖಾನ್ ಹಾಗೂ ಕರೀನಾ ಕಪೂರ್ ದಂಪತಿಗೆ ಮತ್ತೊಂದು ಮಗು ಜನಿಸಿದ್ದು ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ.