ನವದೆಹಲಿ:  ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಕಡಿಮೆಯಾಗಿರುವ ಸಂತಸ ಹಂಚಿಕೊಂಡಿದ್ದಾರೆ. 

ಜನತಾ ಕರ್ಫ್ಯೂ ನಂತರ ಸಾಕಷ್ಟು ಕಷ್ಟಗಳನ್ನು ಜನರು ಅನುಭವಿಸಿದ್ದಾರೆ. ಈ ಸಂಕಷ್ಟದ ನಡುವೆಯೂ ಜನರು ತಮ್ಮ ಬದುಕಿಗಾಗಿ ಹೊರ ಬರುತ್ತಿದ್ದಾರೆ. ದೇಶದಲ್ಲಿ ಸದ್ಯಕ್ಕೆ ಲಾಕ್ ಡೌನ್ ತೆರವಾಗಿರಬಹುದು. ಆದರೆ, ವೈರಸ್ ತೊಲಗಿಲ್ಲ. ಕಳೆದ ಎಂಟು ದಿನಗಳಿಂದ ಕಾಪಾಡಿಕೊಂಡ ಸ್ಥಿತಿಯನ್ನೇ ದೇಶದ ಜನರು ಮುಂದುವರೆಸಿಕೊಂಡು ಹೋಗಬೇಕಿದೆ ಎಂದು ಮನವಿ ಮಾಡಿದ್ದಾರೆ.

ದೇಶದಲ್ಲಿ ಕೊರೊನಾ ಗುಣಮುಖ ಪ್ರಮಾಣ ಶೇ. 83ರಷ್ಟಕ್ಕೆ ಬಂದು ನಿಂತಿದೆ. ಅಭಿವೃದ್ಧಿ ರಾಷ್ಟ್ರಗಳಲ್ಲಿ ಕೊರೊನಾ ಮರಣ ಪ್ರಮಾಣ ಹೆಚ್ಚಿದ್ದಿರೂ ನಮ್ಮಲ್ಲಿ ಮಾತ್ರ ಗಣನೀಯ ಇಳಿಕೆ ಕಂಡಿದೆ. ದೇಶದಲ್ಲಿ 2 ಸಾವಿರ ಲ್ಯಾಬ್ ಗಳಲ್ಲಿ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. 90 ಲಕ್ಷದಷ್ಟು ಬೆಡ್ ಗಳ ವ್ಯವಸ್ಥೆ ಇದೆ. ಸರ್ಕಾರ, ನಾಗರಿಕರನ್ನು ಉಳಿಸುವ ವಿಷಯದಲ್ಲಿ ತುಂಬಾ ಶ್ರಮ ವಹಿಸುತ್ತಿದೆ. ಆದರೆ, ಜನರು ಮಾತ್ರ ಬೇಜವಾಬ್ದಾರಿತನ ಪ್ರದರ್ಶಿಸಬಾರದು ಎಂದು ಮನವಿ ಮಾಡಿದ್ದಾರೆ. 

ಇನ್ನೂ ಕೊರೊನಾಗೆ ಲಸಿಕೆ ಸಿಕ್ಕಿಲ್ಲ. ಹೀಗಾಗಿ ಜನರು ಈ ಸಂದರ್ಭದಲ್ಲಿಯೇ ಖುಷಿ ಪಡುವುದು ಸರಿಯಲ್ಲ. ಕೆಲಸ ಪೂರ್ಣವಾಗದೇ ಸಂತೋಷಪಡುವುದು ಉತ್ತಮವಲ್ಲ. ಸದ್ಯ ಸಾಲು ಸಾಲು ಹಬ್ಬಗಳು ಬರುತ್ತಿವೆ. ಈ ಸಂದರ್ಭದಲ್ಲಿ ಜಾಗೃತಿಯಿಂದ ಹಬ್ಬ ಆಚರಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಕೊರೊನಾ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಮನವಿ ಮಾಡಿದ ಅವರು, ದೇಶದ ಜನತೆಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ರಾಜ್ಯ ವಿಧಾನಪರಿಷತ್ ಚುನಾವಣೆಗೆ ಮುಹೂರ್ತ ನಿಗದಿ

ದೆಹಲಿ/ಬೆಂಗಳೂರು: ಇದೇ ಜೂನ್ 30ರಂದು ಅವಧಿ ಮುಕ್ತಾಯವಾಗಲಿರುವ 7 ವಿಧಾನಪರಿಷತ್ ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ವಿಷಯವನ್ನು ಚುನಾವಣಾ ಆಯೋಗ ಘೋಷಿಸಿದೆ.

ವಾಲಿಬಾಲ್ ಪಂದ್ಯಾಟ : ಹಳಕಟ್ಟಿ ಶಾಲೆ ಬಾಲಕಿಯರ ತಂಡ ಸಾಧನೆ

ಆಲಮಟ್ಟಿ : ಸ್ಥಳೀಯ ಎಸ್.ವಿ.ವಿ.ಅಸೋಸಿಯೇಷನ್ ಶಿಕ್ಷಣ ಸಂಸ್ಥೆಯ ಆರ್.ಬಿ.ಪಿ.ಜಿ.ಹಳಕಟ್ಟಿ ಪ್ರೌಢಶಾಲೆಯ ಬಾಲಕಿಯರ ವಾಲಿಬಾಲ್ ತಂಡ  2022-23…

ಉತ್ತರಾಖಂಡ ಪ್ರವಾಹ: ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ಪರಿಹಾರ

ಹಿಮಪಾತದಿಂದಾಗಿ ಉತ್ತರಾಖಂಡದ ಚಮೋಲಿಯಲ್ಲಿ ಉಂಟಾದ ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 161 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 5921 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 164. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 2605 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 3248 ಸಕ್ರೀಯ ಪ್ರಕರಣಗಳಿವೆ.