ಮುಳಗುಂದ: ಕೋವಿಡ್ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸಿರುವ ಮಾರ್ಗಸೂಚಿಗಳ ಪ್ರಕಾರ ಸಾರ್ವಜನಿಕರು ದಸರಾ ಹಾಗೂ ಈದ್ ಮಿಲಾದ್ ಹಬ್ಬಗಳನ್ನ ಆಚರಿಸಬೇಕು ಎಂದು ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತ್ತನವರ ಹೇಳಿದರು.

ಅವರು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ದಸರಾ ಹಾಗೂ ಈದ್ ಮಿಲಾದ್  ಹಬ್ಬ ಆಚರಣೆ ಹಿನ್ನೆಲೆ ಬುಧವಾರ ಸಂಜೆ ನಡೆದ ಶಾಂತಿ ಪಾಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಜಯದಶಮಿ, ಬನ್ನಿ ಮುಡಿಯುವ ಸಂದರ್ಭದಲ್ಲಿ ಪಾಲಿಕೆ ಉತ್ಸವ ಮಾಡುವಂತಿಲ್ಲ, ಗುಡಿಗಳಲ್ಲೆ ಸರಳವಾಗಿ ಪೂಜೆ ಸಲ್ಲಿಸಬೇಕು. ಹೆಚ್ಚಿನ ಜನ ಸಂದಣಿ ಸೇರದಂತೆ ಸಂಘಟಿಕರು ನಿಗಾವಹಿಸಬೇಕು. ಪ್ರತಿಯೊಬ್ಬರು ಮಾಸ್ಕ್ ಧರಿಸುವದು ಕಡ್ಡಾಯವಾಗಿದೆ. ಇನ್ನೂ ಈದ್ ಮಿಲಾದ್ ಆಚರಣೆಯಲ್ಲೂ ಸಹ ಮೆರವಣಿಗೆ ನಿಷೇದಿಸಲಾಗಿದೆ. ಮಸೂತಿಯಲ್ಲಿ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಿ, 60 ವರ್ಷ ಮೇಲ್ಪಟ್ಟ ವೃದ್ದರು ಮತ್ತು ಮಕ್ಕಳನ್ನ ಮನೆಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಕೊರೊನಾ ವನ್ನು ಯಾರು ಕೂಡಾ ನಿರ್ಲಕ್ಷ್ಯ ಮಾಡಬಾರದು ವೈಯಕ್ತಿಕ ಶುಚಿತ್ವ ಕಾಪಡಿಕೊಳ್ಳಬೇಕು ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ವಿಧಾನಪರಿಷತ್ ಚುನಾವಣೆಯಲ್ಲಿಯೂ ಜಯಭೇರಿ ಬಾರಿಸಿದ ಬಿಜೆಪಿ!

ಬೆಂಗಳೂರು : ಉಪ ಚುನಾವಣೆಯೊಂದಿಗೆ ವಿಧಾನಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಜಯಭೇರಿ ಬಾರಿಸಿದೆ.

ಯುವ ಕಾಂಗ್ರೆಸ್ ಅಧ್ಯಕ್ಷ ಸರ್ಫರಾಜ್ ಅವರಿಗೆ ಅಭಿನಂದನೆ

ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಸರ್ಫರಾಜ್ ಸೂರಣಗಿಯವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಅಭಿನಂದಿಸಿದರು.

ಸಿಎಂ ಸಭೆಯ ಸಂಪೂರ್ಣ ಮಾಹಿತಿ: ಗುತ್ತಿಗೆ ಆಧಾರದಲ್ಲಿ ಸಿಬ್ಬಂದಿ ನೇಮಕಕ್ಕೆ ಸೂಚನೆ

ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು. ಇನ್ನು ಈ ಸಭೆಯಲ್ಲಿ ನಡೆದ ಮಹತ್ವದ ಚರ್ಚಿತ ವಿಷಯಗಳ ಮುಖ್ಯಾಂಶೆಗಳು ಇಲ್ಲಿವೆ ನೋಡಿ.

ಲಾಕ್ ಡೌನ್ ನಿಂದಾಗಿ ಹಣ ಕಳೆದುಕೊಂಡವರಿಗೆ ಸಿಕ್ಕ ನೆಮ್ಮದಿ!

ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಬಿಟ್ಟು ಹೋಗಿದ್ದ ರೂ. 10 ಸಾವಿರಗಳನ್ನು ಹಿಂದಿರುಗಿಸುವ ಮೂಲಕ…