ಮುಳಗುಂದ: ಕೋವಿಡ್ ಹಿನ್ನೆಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸಿರುವ ಮಾರ್ಗಸೂಚಿಗಳ ಪ್ರಕಾರ ಸಾರ್ವಜನಿಕರು ದಸರಾ ಹಾಗೂ ಈದ್ ಮಿಲಾದ್ ಹಬ್ಬಗಳನ್ನ ಆಚರಿಸಬೇಕು ಎಂದು ಗದಗ ಗ್ರಾಮೀಣ ಸಿಪಿಐ ರವಿಕುಮಾರ ಕಪ್ಪತ್ತನವರ ಹೇಳಿದರು.

ಅವರು ಸ್ಥಳೀಯ ಪೋಲಿಸ್ ಠಾಣೆಯಲ್ಲಿ ದಸರಾ ಹಾಗೂ ಈದ್ ಮಿಲಾದ್  ಹಬ್ಬ ಆಚರಣೆ ಹಿನ್ನೆಲೆ ಬುಧವಾರ ಸಂಜೆ ನಡೆದ ಶಾಂತಿ ಪಾಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿಜಯದಶಮಿ, ಬನ್ನಿ ಮುಡಿಯುವ ಸಂದರ್ಭದಲ್ಲಿ ಪಾಲಿಕೆ ಉತ್ಸವ ಮಾಡುವಂತಿಲ್ಲ, ಗುಡಿಗಳಲ್ಲೆ ಸರಳವಾಗಿ ಪೂಜೆ ಸಲ್ಲಿಸಬೇಕು. ಹೆಚ್ಚಿನ ಜನ ಸಂದಣಿ ಸೇರದಂತೆ ಸಂಘಟಿಕರು ನಿಗಾವಹಿಸಬೇಕು. ಪ್ರತಿಯೊಬ್ಬರು ಮಾಸ್ಕ್ ಧರಿಸುವದು ಕಡ್ಡಾಯವಾಗಿದೆ. ಇನ್ನೂ ಈದ್ ಮಿಲಾದ್ ಆಚರಣೆಯಲ್ಲೂ ಸಹ ಮೆರವಣಿಗೆ ನಿಷೇದಿಸಲಾಗಿದೆ. ಮಸೂತಿಯಲ್ಲಿ ಅಂತರ ಕಾಯ್ದುಕೊಂಡು ಪ್ರಾರ್ಥನೆ ಸಲ್ಲಿಸಿ, 60 ವರ್ಷ ಮೇಲ್ಪಟ್ಟ ವೃದ್ದರು ಮತ್ತು ಮಕ್ಕಳನ್ನ ಮನೆಯಲ್ಲಿ ಇರುವಂತೆ ನೋಡಿಕೊಳ್ಳಬೇಕು. ಕೊರೊನಾ ವನ್ನು ಯಾರು ಕೂಡಾ ನಿರ್ಲಕ್ಷ್ಯ ಮಾಡಬಾರದು ವೈಯಕ್ತಿಕ ಶುಚಿತ್ವ ಕಾಪಡಿಕೊಳ್ಳಬೇಕು ಎಂದು ತಿಳಿಸಿದರು.

Leave a Reply

Your email address will not be published. Required fields are marked *

You May Also Like

ಡಿಸೆಂಬರ್ ಅಂತ್ಯದವರೆಗೆ ಶಾಲೆ ಆರಂಭವಿಲ್ಲ, ಮುಂದಿನ ನಡೆ ಡಿಸೆಂಬರ್ ನಂತರ ತೀರ್ಮಾನ

ಕೋವಿಡ್ 19 ಹಿನ್ನೆಲೆ ಈಗಾಗಲೇ ಶೈಕ್ಷನಿಕ ವರ್ಷದಲ್ಲಿ ಶಾಲೆಗಳಿನ್ನು ಆರಂಭವಾಗಿಲ್ಲ. ಡಿ.17ಕ್ಕೆ ಸರ್ಕಾರ ಕೆಲವು ಮಾರ್ಗಸೂಚಿಗಳನ್ವಯ ಕಾಲೇಜು ಆರಂಭಕ್ಕೆ ಅನುಮತಿ ನೀಡಿದೆ. ಆದರೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಕುರಿತು ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿತ್ತು.

ಹಿರೆಬಾವಿ ಪುಷ್ಕರಣೆಗೆ ಬೇಕಿದೆ ನಿರ್ವಹಣೆ

ಪವಿತ್ರ ಭಾವನೆಯಿಂದ ಕಾಣುವ ಪುಷ್ಕರಣೆಗಳೀಗ ನಿರ್ವಹಣೆ ಕೊರತೆಯಿಂದ ಕಸದ ತೊಟ್ಟಿಯಂತಾಗಿವೆ ಎನ್ನುವುದು ಸ್ಥಳೀಯರ ಆರೋಪ.

ಸುರಕ್ಷೆ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಎಲ್ಲ ಅಗತ್ಯ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು

ಉತ್ತರಪ್ರಭ ಸುದ್ದಿ: ಬೆಂಗಳೂರು: ಆ. ೨-ಇಡೀ ರಾಜ್ಯದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿಯಲ್ಲಿ ಸಾವು-ನೋವುಗಳು ಆಗಿವೆ. ಈ…

ಕೋವಿಡ್ ರೂಪಾಂತರಿ ಸೋಂಕಿನ ಬಗ್ಗೆ ಸಚಿವ ಸುಧಾಕರ್ ನೀಡಿದ ಮಾಹಿತಿ

ಬೆಂಗಳೂರು: ಕೋವಿಡ್‌ ರೂಪಾಂತರಿ ಸೋಂಕಿಗೆ ಇದು ಶೇ.70 ರಷ್ಟು ಹರಡುವ ಗುಣವಿದೆ. ಆದರೆ ಈ ಸೋಂಕಿನ ತೀವ್ರತೆ ಕಡಿಮೆ ಇದೆ. ಹೀಗಿದ್ದರೂ ಇದನ್ನು ನಿಯಂತ್ರಣಕ್ಕೆ ತರಲು ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುದಾಕರ್‌ ತಿಳಿಸಿದರು.