ನವದೆಹಲಿ: ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚು ಮಿತಿಯನ್ನು ಶೇ. 10ರಷ್ಟು ಹೆಚ್ಚಿಸಲಾಗಿದೆ.  

ಅಧಿಸೂಚನೆಯ ಪ್ರಕಾರ ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚಿನ ಮಿತಿಯನ್ನು ರೂ. 70 ಲಕ್ಷಗಳಿಂದ ರೂ. 77 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅಷ್ಟೆ ಅಲ್ಲದೇ, ಸಣ್ಣ ರಾಜ್ಯಗಳಲ್ಲಿ ಈ ಮೊತ್ತವನ್ನು ರೂ. 54 ಲಕ್ಷದಿಂದ ರೂ. 59 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. 

ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಖರ್ಚಿನ ಮಿತಿಯನ್ನು ರೂ. 28 ಲಕ್ಷಗಳಿಂದ ರೂ. 30.8 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ. ಈ ಹಿಂದೆ ರೂ. 20 ಲಕ್ಷ ಮಿತಿ ಇದ್ದ ಕಡೆ ರೂ. 22 ಲಕ್ಷಗಳಿಗೆ ಮಿತಿಯನ್ನು ಏರಿಕೆ ಮಾಡಲಾಗಿದೆ.

ಕೊರೊನಾ ಅಟ್ಟಹಾಸದ ಪರಿಸ್ಥಿತಿಯಲ್ಲಿ ಅಭ್ಯರ್ಥಿಗಳಿಗೆ ಎದುರಾಗಬಹುದಾದ ತೊಂದರೆಗಳನ್ನು ಪರಿಗಣಿಸಿ ಆಯೋಗ ಖರ್ಚು – ವೆಚ್ಚಗಳ ಮಿತಿ ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಹೀಗಾಗಿ ತಕ್ಷಣದಿಂದಲೇ ಜಾರಿಗೆ ಬರುವ ಈ ಆದೇಶದಿಂದ ಬಿಹಾರ ವಿಧಾನಸಭೆ, ಲೋಕಸಭೆಯ ಚುನಾವಣೆ, ಉಪಚುನಾವಣೆಗಳಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ. 

Leave a Reply

Your email address will not be published. Required fields are marked *

You May Also Like

ದೇಶದಲ್ಲಿ 73 ಲಕ್ಷದ ಗಡಿ ದಾಟಿದ ಮಹಾಮಾರಿ!

ನವದೆಹಲಿ : ದೇಶದಲ್ಲಿ ಮಹಾಮಾರಿಯ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 63,371 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 895 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಸರ್ಕಾರಿ ನೌಕರರು ಆರೋಗ್ಯ ವಿಮಾ ಸೌಲಭ್ಯವನ್ನು ಪಡೆಯಬಹುದು- ಸುಪ್ರೀಂ

ಕೇಂದ್ರ ಸರ್ಕಾರದ ನೌಕರರು ತುರ್ತು ಸಮಯದಲ್ಲಿ ಸಿಜಿಹೆಚ್‌ಎಸ್‌ ಅಂದರೆ ಕೇಂದ್ರ ಸರ್ಕಾರ ಸೂಚಿಸಿರುವ ಆಸ್ಪತ್ರೆಗಳ ಹೊರತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೆ ನೌಕರರ ಹಕ್ಕಿನ ಅನ್ವಯ ಸರ್ಕಾರದಿಂದ ಮೆಡಿಕ್ಲೇಮ್‌ ಪಡೆಯಬುದು ಎಂದು ಹೇಳುವ ಮೂಲಕ ಸರ್ಕಾರಿ ನೌಕರರಿಗೆ ಸುಪ್ರೀಂ ಸಿಹಿ ಸುದ್ದಿ ನೀಡಿದೆ.

ಮೊಬೈಲ್ ಗಾಗಿ ಅಜ್ಜಿಯ ತಲೆಯನ್ನೇ ಕತ್ತರಿಸಿದ ಮೊಮ್ಮಗ!

ಮುಂಬಯಿ : ಮೊಬೈಲ್ ಗಿಫ್ಟ್ ಕೊಡಲು ನಿರಾಕರಿಸಿದ ಅಜ್ಜಿಯ ತಲೆಯನ್ನೇ ಕತ್ತರಿಸಿ ಟೇಬಲ್ ಮೇಲಿಟ್ಟು ಮೊಮ್ಮಗ ವಿಕೃತಿ ಮೆರೆದಿರುವ ಘಟನೆ ನಡೆದಿದೆ.

ಅಮೇರಿಕಾದಲ್ಲಾದ ಹಾನಿಯನ್ನು ಚೀನಾ ದೇಶವೇ ತುಂಬಿಕೊಲಿ:ಟ್ರಂಪ್ ಆಗ್ರಹ..!

ಚೀನಾದ ನಿಷ್ಕಾಳಜಿಯೇ ಕೊರೋನಾ ಸೋಂಕು ವ್ಯಾಪಕವಾಗಲು ಕಾರಣ ಹೀಗಾಗಿ ನಮಗೆ ಆಗಿರುವ ಹಾನಿಯನ್ನು ತುಂಬಿಕೊಡುವಂತೆ ಚೀನಾ ದೇಶವನ್ನು ಆಗ್ರಹಿಸುತ್ತೇನೆ ಎಂದು ಅಮೇರಿಕಾ ಅಧ್ಯಕ್ಷ ಟ್ರಂಪ್ ಅಸಮಾಧಾನ ಹೊರಹಾಕಿದರು.