ಲಕ್ಷ್ಮೇಶ್ವರ: ಬೆಂಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮವಾಗಿ ಜನ – ಜೀವನ ಅಸ್ತವ್ಯಸ್ಥಗೊಂಡಿದೆ.

ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹಳ್ಳದಕೆರೆ ಓಣಿಯಲ್ಲಿ ಮನೆಗಳ ಗೋಡೆ ಕುಸಿದಿವೆ.

ಹಳ್ಳದಕೆರೆ ಓಣಿಯ ಬಸಪ್ಪ ಮರಿಬಸಪ್ಪನ್ನ ಎಂಬುವವರಿಗೆ ಸೇರಿದ್ದ ಮನೆಯ ಗೋಡೆ ಕುಸಿದಿದೆ. ಪರಿಣಾಮವಾಗಿ ಅನಾಹುತವೊಂದು ತಪ್ಪಿದಂತಾಗಿದೆ.

ಹೀಗಾಗಿ ಪಕ್ಕದ ಮನೆಯ ಆನಂದ ಅಮರಶೆಟ್ಟಿ ಕುಟುಂಬಸ್ಥರು ಅಪಾಯದಿಂದ ಪಾರಾಗಿದ್ದಾರೆ. ಮನೆ ಗೋಡೆ ಕುಸಿಯುವಾಗ ವಿಚಿತ್ರವಾದ ಶಬ್ದ ಕೇಳಿ ಬಂದ ಪರಿಣಾಮ ಮನೆಯಲ್ಲಿದ್ದವರು ಹೊರಗಡೆ ಓಡಿ ಬಂದಿದ್ದಾರೆ. ಇದರಿಂದಾಗಿ ಜೀವ ಹಾನಿ ತಪ್ಪಿದಂತಾಗಿದೆ. ಈ ಕುಟುಂಬಸ್ಥರು ಮನೆಯಿಂದ ಹೊರಗೆ ಓಡಿ ಬರುತ್ತಿದ್ದಂತೆ ಅಪಾಯ ತಪ್ಪಿದೆ.

ಆದರೆ, ತೀವ್ರವಾದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮನೆ ಶಿಥೀಲಗೊಂಡ ಹಿನ್ನೆಲೆಯಲ್ಲಿ ಮನೆಯ ಮಾಲೀಕ ಬಸಪ್ಪ ಅವರು ಕುಟಂಬ ಸಮೇತರಾಗಿ ಮನೆಯಿಂದ ಹೊರಗೆ ಹೋಗಿದ್ದರು. ಹೀಗಾಗಿ ಕುಟುಂಬಸ್ಥರು ಹಾಗೂ ಪಕ್ಕದ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Reply

Your email address will not be published. Required fields are marked *

You May Also Like

ಮುಂಡರಗಿ ಜಿಎಚ್ಎಚ್ ಆಗ್ರೋ ಕೇಂದ್ರ ಮೇಲೆ ಕೃಷಿ ಇಲಾಖೆ ಅಧಿಕಾರಿಗಳ ದಾಳಿ

ಜಿಎಚ್ಎಚ್ ಆಗ್ರೋ ಕೇಂದ್ರದ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಕೇಂದ್ರ ಜಪ್ತಿ ಮಾಡಿದ ಘಟನೆ ಮುಂಡರಗಿ ಪಟ್ಟಣದಲ್ಲಿ ನಡೆದಿದೆ.

ಚಂದನ ಶಾಲೆಯ ಪುಟಾಣಿಗಳ ಕೊರೋನಾ ಜಾಗೃತಿ

ಶಾಲೆಯ ಅಂಗಳದಲ್ಲಿ ಪುಟ್ಟ ಕಂದಮ್ಮಗಳು ಕೊರೋನಾ ಬಗ್ಗೆ ನೀಡಿದ ಜಾಗೃತಿ ಸಂದೇಶ ಅದ್ಭುತವಾದದ್ದು. ಇಂತಹ ಪ್ರಯತ್ನಕ್ಕೆ ಮುಂದಾದ ಚಂದನ್ ಶಾಲೆಯ ಪ್ರಯತ್ನ ಕೂಡ ಸಾಮಾಜಿಕ ಕಾಳಜಿ ತೋರಿಸುವಂತಹದ್ದು.

ರಾಯಚೂರ ಜಿಲ್ಲೆಯಲ್ಲಿಂದು 14ಕೊರೊನಾ ಪಾಸಿಟಿವ್!

ರಾಯಚೂರ: ಜಿಲ್ಲೆಯಲ್ಲಿಂದು 14 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 457ಕ್ಕೆ…

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಹೆಲ್ತ್ ಕಾರ್ಡ್ ಮೂಲಕ 5 ಲಕ್ಷ ರೂ ಗಳವರೆಗೂ ಉಚಿತ ಆರೋಗ್ಯ ಸೇವೆ ಪಡೆದುಕೊಳ್ಳಬಹುದು: ಡಾ: ಕೆ.ಸುಧಾಕರ್

ಉತ್ತರಪ್ರಭ ಸುದ್ದಿ ಬಾಗೇಪಲ್ಲಿ: 100 ದಿನಗಳ ಅವಧಿಯಲ್ಲಿ ರಾಜ್ಯದ 5 ಲಕ್ಷ 20 ಸಾವಿರ ನಾಗರೀಕರಿಗೆ…