ಜೈಪುರ : ಕೃಷಿ ಮಸೂದೆಯನ್ನು ಪಂಜಾಬ್ ಸರ್ಕಾರ ವಿರೋಧಿಸಿದ ಬೆನ್ನಲ್ಲಿಯೇ ರಾಜಸ್ಥಾನ್ ಸರ್ಕಾರ ಕೂಡ ಅಪಸ್ವರ ಎತ್ತಿದೆ.

ರಾಜಸ್ಥಾನ್ ಸಿಎಂ ಅಶೋಕ್ ಗೆಹ್ಲೋಟ್ ಈ ಕುರಿತು ಟ್ವೀಟ್ ಮಾಡಿದ್ದು, ಹೊಸ ಮಸೂದೆ ತರುವುದಾಗಿ ಹೇಳಿದ್ದಾರೆ. ಇತ್ತೀಚೆಗಷ್ಟೇ ಇದೆ ವಿಚಾರವಾಗಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ಕೃಷಿ ಮಸೂದೆ ತಡೆಗೆ  ಅಧಿವೇಶನದಲ್ಲಿ ನಾಲ್ಕು ಮಸೂದೆಗಳನ್ನು ಮತ್ತು ನಿರ್ಣಯಗಳನ್ನು ಅಂಗೀಕರಿಸಿತ್ತು. ಇದರ ಬೆನ್ನಲ್ಲಿಯೇ ರಾಜಸ್ಥಾನ ಸರ್ಕಾರ ಕೂಡ ಈ ಬೆಳವಣಿಗೆಯ ನಡುವೆಯೇ ರಾಜಸ್ಥಾನ ಸರ್ಕಾರ ಕೂಡ ಕೇಂದ್ರದ ವಿರುದ್ಧ ನಿಂತಿದೆ. 

ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾನೂನುಗಳ ವ್ಯಾಪ್ತಿಯಿಂದ ರಾಜ್ಯಗಳನ್ನು ಹೊರಗಿಡಲು ಸಾಧ್ಯವಾಗುವಂತೆ ರಾಜ್ಯಮಟ್ಟದಲ್ಲಿ ಕಾನೂನು ರಚಿಸುವ ಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸುವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳ ಸಿಎಂಗಳಿಗೆ ಸಲಹೆ ನೀಡಿದ್ದರು. ಇದರ ಬೆನ್ನಲ್ಲಿಯೇ ಪಂಜಾಬ್ ಹಾಗೂ ರಾಜಸ್ಥಾನ್ ಸರ್ಕಾರಗಳು ಕೇಂದ್ರದ ವಿರುದ್ಧ ನಿಂತಿವೆ.

Leave a Reply

Your email address will not be published. Required fields are marked *

You May Also Like

ದೇಶದಲ್ಲಿ 70 ಲಕ್ಷ ದಾಟಿದ ಸೋಂಕಿತರ ಸಂಖ್ಯೆ!

ನವದೆಹಲಿ : ದೇಶದಲ್ಲಿ ಕೊರೊನಾ ತನ್ನ ಅಟ್ಟಹಾಸವನ್ನು ಎಂದಿನಂತೆ ಕಾಯ್ದುಕೊಂಡಿದೆ. ಆದರೆ ಕಳೆದ 24 ಗಂಟೆಗಳಲ್ಲಿ ವೈರಸ್ ನ ಸಂಖ್ಯೆಗಿಂತಲೂ ಚೇತರಿಕೆ ಪ್ರಮಾಣ ಹೆಚ್ಚಾಗಿದೆ.

ಹಲವು ವರ್ಷಗಳಲ್ಲಿ 139 ಜನರಿಂದ ಅತ್ಯಾಚಾರಕ್ಕೊಳಗಾದ ಮಹಿಳೆ

ಮಹಿಳೆಯೊಬ್ಬರಿಗೆ ಕೆಲವು ವರ್ಷಗಳಲ್ಲಿ 139 ಜನರು ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ನಡೆದಿದ್ದು, 25 ವರ್ಷದ ಮಹಿಳೆ ಈ ಕುರಿತು ದೂರು ದಾಖಲಿಸಿದ್ದಾರೆ. ಈ ಸಂತ್ರಸ್ಥ ಮಹಿಳೆಗೆ 2010ರಲ್ಲಿ ವಿವಾಹವಾಗಿತ್ತು. ಆದರೆ, ಈ ಮಹಿಳೆ ಒಂದೇ ವರ್ಷದಲ್ಲಿ ಪತಿಯಿಂದ ವಿಚ್ಛೇದನ ಪಡೆದಿದ್ದರು. ಹೀಗಾಗಿ ಮಾಜಿ ಪತಿಯ ಕೆಲವು ಕುಟುಂಬ ಸದಸ್ಯರು ನನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಸಂತ್ರಸ್ತೆಯಿಂದ ಪೊಲೀಸ್ ದೂರು : ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಬೆದರಿಸಿ ಮದುವೆ ಮಾಡಿಕೊಂಡ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಶಾಲೆ ತೆರೆಯದಂತೆ ಪೋಷಕರು, ಶಿಕ್ಷಕರ ಒತ್ತಾಯ!

ದೆಹಲಿಯಲ್ಲಿ ಕೊರೊನಾ ಆತಂಕ ಮೂಡಿಸಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಗಳ ಕೊರತೆ ಸೃಷ್ಟಿಯಾಗಿದೆ. ಈ ನಿಟ್ಟಿನಲ್ಲಿ ಶಾಲೆಗಳನ್ನೇ ತೆರೆಯುವುದೇ ಬೇಡ ಎಂದು ಶಿಕ್ಷಕರು ಮತ್ತು ಪೋಷಕರು ದೆಹಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.