ಗದಗ: ನಗರದಲ್ಲಿಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಎಸಿಬಿ ಅಧಿಕಾರಿಗಳು ರುದ್ರೇಶ್ ಅವರಿಗೆ ಸಂಬಂಧಿಸಿದಂತೆ ಏಕಕಾಲಕ್ಕೆ 3 ಕಡೆ ದಾಳಿಮಾಡಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ನೌಕರರ ಭವನ ಬಳಿ ಇರುವ ಮನೆ, ಜಿಲ್ಲಾಡಳಿತ ಭವನದ ಕಚೇರಿ ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಅಧಿಕಾರಿ ಎಸ್.ಎನ್.ರುದ್ರೇಶ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದಾಳಿ ವೇಳೆ ಚಿನ್ನ ಹಾಗೂ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ಇನ್ನು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಎಸಿಬಿ ಡಿವೈಎಸ್ಪಿ ಮಹಾಂತೇಶ, ಗದಗ ಸಿಪಿಐ ಧರಣಾಯಿಕ್, ಸಿಪಿಐ ಸುನೀಲ್ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆ ಸದ್ಯಕ್ಕೆ ಲಾಕ್ ಡೌನ್ ಇಲ್ಲ: ಡಿಸಿ ಸುಂದರೇಶ ಬಾಬು

ಜಿಲ್ಲೆಯಲ್ಲಿ ಒಂದು ಹಂತಕ್ಕೆ ಕೋರೊನಾ ಸೋಂಕು ಹರಡುವಿಕೆ ನಿಯಂತ್ರಣದಲ್ಲಿದ್ದು ತಕ್ಷಣಕ್ಕೆ ಯಾವುದೇ ಬಗೆಯ ಲಾಕ್ ಡೌನ್ ಜಾರಿ ಮಾಡುತ್ತಿಲ್ಲ ಎಂದು ಗದಗ ಜಿಲ್ಲಾಧಿಕಾರಿ ಸುಂದರೇಶ ಬಾಬು ತಿಳಿಸಿದ್ದಾರೆ.

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

ಎಂಎಲ್ ಸಿ ಹೆಚ್.ವಿಶ್ವನಾಥ್ ಮಂತ್ರಿಯಾಗುವ ಕನಸಿಗೆ: ಸುಪ್ರೀಂ ಶಾಕ್

ಸೋತು ಎಂಎಲ್ಸಿಯಾಗಿದ್ದಂತ ಹೆಚ್.ವಿಶ್ವನಾಥ್ ಅವರಿಗೆ ಪರಿಷತ್ ಸ್ಥಾನದ ಮೂಲಕ ಸಚಿವ ಸ್ಥಾನದ ಕನಸು ಕಂಡಿದ್ದ ವಿಶ್ವನಾಥ್‌ಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

ಹಾಸ್ಯನಟ ಮಿಮಿಕ್ರಿ ರಾಜಗೋಪಾಲ್ ಕಾಲವಶ

ಬೆಂಗಳೂರು: ಕನ್ನಡ, ತಮಿಳು ಮತ್ತಿತರ ಭಾಷೆಗಳ 650ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಾಸ್ಯ ನಟ ಮಿಮಿಕ್ರಿ…