ಗದಗ: ನಗರದಲ್ಲಿಂದು ಬೆಳ್ಳಂಬೆಳಿಗ್ಗೆ ಎಸಿಬಿ ಅಧಿಕಾರಿಗಳು ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಎಸ್.ಎನ್.ರುದ್ರೇಶ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿದ್ದಾರೆ.

ಎಸಿಬಿ ಅಧಿಕಾರಿಗಳು ರುದ್ರೇಶ್ ಅವರಿಗೆ ಸಂಬಂಧಿಸಿದಂತೆ ಏಕಕಾಲಕ್ಕೆ 3 ಕಡೆ ದಾಳಿಮಾಡಿದ್ದಾರೆ ಎಂದು ತಿಳಿದು ಬಂದಿದೆ.

ನಗರದ ನೌಕರರ ಭವನ ಬಳಿ ಇರುವ ಮನೆ, ಜಿಲ್ಲಾಡಳಿತ ಭವನದ ಕಚೇರಿ ಹಾಗೂ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.

ಅಧಿಕಾರಿ ಎಸ್.ಎನ್.ರುದ್ರೇಶ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಹಿನ್ನಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದಾಳಿ ವೇಳೆ ಚಿನ್ನ ಹಾಗೂ ನಗದು ಪತ್ತೆಯಾಗಿದ್ದು, ಅಧಿಕಾರಿಗಳು ಇನ್ನು ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬೆಳಗಾವಿ ಎಸಿಬಿ ಡಿವೈಎಸ್ಪಿ ಮಹಾಂತೇಶ, ಗದಗ ಸಿಪಿಐ ಧರಣಾಯಿಕ್, ಸಿಪಿಐ ಸುನೀಲ್ ಹಾಗೂ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Leave a Reply

Your email address will not be published. Required fields are marked *

You May Also Like

ಮಹಾಮಾರಿಗೆ ಬಾಗಲಕೋಟೆಯಲ್ಲಿ ಬಲಿ

ಬಾಗಲಕೋಟೆ: ಇಲ್ಲಿನ ನವನಗರದ 47ನೇ ಸೆಕ್ಟರ್ ನಿವಾಸಿ 50 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.…

ಕುರಿ ಮತ್ತು ಮೇಕೆಗಳ ಅನುಗ್ರಹ ಯೋಜನೆ ಮುಂದುವರೆಸಲು ಮನವಿ

ಕುರಿಗಾರರಿಗೆ ಅನುಕೂಲಕರವಾಗಿದ್ದ ಅನುಗ್ರಹ ಯೋಜನೆಯನ್ನು ಮುಂದುವರೆಸಬೇಕು. ಜೊತೆಗೆ ಯೋಜನೆಯಡಿ ಬಾಕಿ ಇರುವ ಇರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಯುವ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಸಿಎಂ ರಾಜೀನಾಮೆ ಕೊಡಿಸುವ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದ ಜೋಶಿ…!

ಹುಬ್ಬಳ್ಳಿ: ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಸಿಎಂ ರಾಜೀನಾಮೆ ಕೊಡಿಸುವ ಯಾವ ಪ್ರಶ್ನೆ ಪಕ್ಷದ ಮುಂದಿಲ್ಲ‌ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್ ನ್ಯೂಸ್

ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಸಿಹಿಸುದ್ದಿ ನೀಡಿದ್ದು, ಮುಂಬರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತರು, ಸಹಾಯಕಿಯರ ಗೌರವಧನ ಹೆಚ್ಚಳ ಮಾಡಲು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.