ಬೆಂಗಳೂರು : ನನ್ನ ಅತ್ತಿಗೆಗೆ ಗಂಡು ಮಗು ಜನಿಸಿದ್ದು, ತುಂಬಾ ಸಂತಸ ನೀಡಿದೆ. ಮಗುವನ್ನು ಕೈಯಲ್ಲಿ ಹಿಡಿದಾಗ ನನ್ನ ಅಣ್ಣನೊಂದಿಗೆ ಇದ್ದೇನೆ ಎಂಬ ಭಾವ ಮೂಡಿತು ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ.

ಮೇಘನಾ ಗಂಡು ಮಗುವಿಗೆ ಜನ್ಮ ನೀಡಿದ ವಿಚಾರವಾಗಿ ಮಾತನಾಡಿದ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಅವರೊಂದಿಗೆ ಖಾಸಗಿ ಆಸ್ಪತ್ರೆಗೆ ತೆರಳಿ ಮೇಘನಾ ಇದ್ದ ಕೊಠಡಿಗೆ ಆಗಮಿಸಿ ಮಗುವನ್ನು ಎತ್ತಿ ಸಂತಸ ವ್ಯಕ್ತಪಡಿಸಿದ್ದಾರೆ.

ಆ ನಂತ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಣ್ಣನಿಗೆ ಹಾಗೂ ಅತ್ತಿಗೆಗೆ ಗಂಡು ಮಗುವಾಗಿದೆ. ಅತ್ತಿಗೆ ಕೂಡ ಆರಾಮವಾಗಿದ್ದಾರೆ. ಎಲ್ಲರೂ ಅವರಿಗೆ ಆಶೀರ್ವಾದ ಮಾಡಬೇಕೆಂದು ಕರ್ನಾಟಕದ ಜನತೆಯಲ್ಲಿ ಕೇಳಿಕೊಳ್ಳುತ್ತೇನೆ. ಖುಷಿ ಹೆಚ್ಚಾಗಿದ್ದರಿಂದ ತುಂಬಾ ರೋಮಾಂಚನವಾಗಿತ್ತು. ಹೀಗಾಗಿ ಮಗುವನ್ನು ಕೈಯಲ್ಲಿ ಹಿಡಿದ ತಕ್ಷಣದ ಅನುಭವನ್ನು ಅಂದಾಜಿಸಲು ಸಾಧ್ಯವಾಗಲಿಲ್ಲ. ಆ ಫೀಲ್ ಗೊತ್ತಾಗಲಿಲ್ಲ ಎಂದು ಮಗುವನ್ನು ಮೊದಲು ಕೈಯಲ್ಲಿ ಹಿಡಿದಾಗಿನ ಅನುಭವವನ್ನು ಹಂಚಿಕೊಂಡಿದ್ದಾರೆ.

ಬೆಳ್ಳಿ ತೊಟ್ಟಿಲು ಖರೀದಿಸಿರುವುದು ಯಾರಿಗೂ ಗೊತ್ತಾಗಬಾರದು ಎಂದುಕೊಂಡಿದೆ. ಆದರೆ ಮಾಧ್ಯಮಗಳ ಮೂಲಕ ಬಹಿರಂಗವಾಯಿತು. ಮಗುವನ್ನು ಮೊದಲು ಕೈಯಲ್ಲಿ ಹಿಡಿದಾಗ ನಮ್ಮಣ್ಣನ ಜೊತೆಗೆ ಇದ್ದ ಫೀಲ್ ಆಯಿತು. ತುಂಬಾ ಖುಷಿಯಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ನಮ್ಮ ಜೀವನದ ಕಣಕಣದಲ್ಲಿಯೂ ದೇಶಭಕ್ತಿ ಜಾಗೃತವಾಗಿರಬೇಕು: ನಟ ದರ್ಶನ್

ಸ್ವಾತಂತ್ರ್ಯ ದಿನಾಚರಣೆಯ ಈ ಸುಸಂದರ್ಭದಲ್ಲಿ ನಟ ದರ್ಶನ್ ನಾಡಿನ ಜನತೆಗೆ ಟ್ವೀಟ್ ಮಾಡಿದ್ದಾರೆ. ಬೆಂಗಳೂರು: ದೇಶದಲ್ಲಿ…

ಅವನೇ ಶ್ರೀಮನ್ನಾರಾಯಣನಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ!

ಬೆಂಗಳೂರು: ಅವನೇ ಶ್ರೀಮನ್ನಾರಾಯಣ ರಕ್ಷಿತ್ ಶೆಟ್ಟಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಲಾಕ್ ಡೌನ್ ಹಿನ್ನೆಲೆಯಲ್ಲಿ…

ಚಿರಂಜೀವಿ ಹುಟ್ಟು ಹಬ್ಬಕ್ಕೆ ದುಃಖದ ಸಾಲು ಬರೆದ ಅರ್ಜುನ ಸರ್ಜಾ!

ನಟ ಚಿರಂಜೀವಿ ಸರ್ಜಾ ಅವರ 36ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಅವರ ಮಾವ ಹಾಗೂ ನಟ ಅರ್ಜುನ್ ಸರ್ಜಾ ಭಾವನಾತ್ಮಕ ಸಾಲುಗಳನ್ನು ಬರೆದು ಶುಭಾಶಯ ಕೋರಿದ್ದಾರೆ.

ಟ್ವೀಟರ್ ನಟ ರಜನಿಕಾಂತ ಟ್ವೀಟ್ ಅಳಿಸಿ ಹಾಕಿದ್ದು ಯಾಕೆ?

ಖ್ಯಾತ ನಟ ರಜನಿಕಾಂತ್ ಮಾಡಿದ ಟ್ವೀಟ್ ನ್ನು ಸ್ವತಃ ಟ್ವೀಕರ್ ಅಳಿಸಿ ಹಾಕಿದೆ. ಅವರ ಟ್ವೀಟ್ ಜಾಗದಲ್ಲೀಗ ಟ್ವೀಟರ್ ನಿಯಮ ಉಲ್ಲಂಘಿಸಿರುವುದರಿಂದ ಈ ಟ್ವೀಟ್ ಲಭ್ಯವಿಲ್ಲ ಎಂದು ಸೂಚಿಸಿದೆ. ಟ್ವೀಟ್ ಅಳಿಸಿ ಹಾಕಲಿ ಕಾರಣ ಏನು ಗೊತ್ತೆ?