ತಿರುಚ್ಚಿ: ತಮಿಳುನಾಡಿನ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು ಎಂದು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಘೋಷಿಸಿದ್ದಾರೆ.

ಪುದುಕ್ಕೊಟ್ಟೈನಲ್ಲಿ ಇಂದು ವಿವಿಧ ಸರ್ಕಾರಿ ಕಲ್ಯಾಣ ಯೋಜನೆಗಳಲ್ಲಿ ಭಾಗವಹಿಸಿ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಲಸಿಕೆ ಬಳಕೆಗೆ ಸಿಕ್ಕ ಬಳಿಕ, ತಮಿಳುನಾಡು ಸರ್ಕಾರವು ಸಾರ್ವಜನಿಕರಿಗೆ ಉಚಿತವಾಗಿ ಲಸಿಕೆ ನೀಡುತ್ತದೆ ಎಂದು ಹೇಳಿದ್ದಾರೆ.

ಈ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಅವಧಿಯಲ್ಲಿ ಸರ್ಕಾರ ಕೈಗೊಂಡ ಕ್ರಮಗಳು ಮತ್ತು ಜಾಗೃತಿ ಅಭಿಯಾನದ ಕುರಿತು ಮಾಹಿತಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಬಿಹಾರ ಉಪ ಚುನಾವಣೆ ಅಂಗವಾಗಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ತನ್ನ ಪ್ರಣಾಳಿಕೆಯಲ್ಲಿ ಉಚಿತ ಕೊರೊನಾ ಲಸಿಕೆ ನೀಡುವ ಕುರಿತು ಘೋಷಣೆ ಮಾಡಿತ್ತು. ಬಿಹಾರ ಬಿಜೆಪಿ ಬೆನ್ನಲ್ಲಿಯೇ ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷ ಕೂಡ ಅದೇ ಹಾದಿಯಲ್ಲಿಯೇ ಸಾಗಿದೆ.

Leave a Reply

Your email address will not be published. Required fields are marked *

You May Also Like

ಬುದ್ದಿ ವಂತಿಕೆಯಿಂದ ಲಾಕ್ ಡೌನ್ ತೆರೆಯಬೇಕು:ರಘುರಾಮ ರಾಜನ್

ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಲಾಕ್ ಡೌನ್ ಮುಗಿಯಲು ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ಹಿನ್ನೆಲೆಯಲ್ಲಿ ಬುದ್ಧಿವಂತಿಕೆಯಿಂದ ಲಾಕ್ ಡೌನ್ ತೆರವುಗೊಳಿಸಬೇಕು ಆರ್ಥಿಕ ತಜ್ಞ ರಘುರಾಮ್ ರಾಜನ್ ಸಲಹೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್

ಸಾಮಾಜಿಕ ಜಾಲತಾಣ ದೈತ್ಯ ಟ್ವಿಟರ್ ಮತ್ತು ಫೇಸ್ ಬುಕ್, ವಾಟ್ಸ್ ಆಯಪ್ ಮುಂತಾದ ಸಾಮಾಜಿಕ ಜಾಲತಾಣಗಳು ನೆಲದ ನಿಯಮವನ್ನು ಪಾಲಿಸಬೇಕು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಹರಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.

ಗುಜರಾತ್ ಬಿಜೆಪಿಗೆ ಶಾಕ್: ಕೈ ಶಾಸಕರು ರೆಸಾರ್ಟ್ ಗೆ ಶಿಫ್ಟ್..!

ಜೈಪುರ: ಗುಜರಾತ್ ಕಾಂಗ್ರೆಸ್ ನ ಕೆಲವು ಶಾಸಕರನ್ನು ಕಾಂಗ್ರೆಸ್ ರಾಜಸ್ಥಾನದ ಸಿರೋಹಿಯಲ್ಲಿರುವ ರೆಸಾರ್ಟ್ ಗೆ ಕರೆದೊಯ್ಯಲಾಗಿದೆ.…

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…